ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

US-India ಮಧ್ಯೆ ಸುಂಕ ಸಮರ: ವ್ಯಾಪಾರ ಮಾತುಕತೆ ತಳ್ಳಿಹಾಕಿದ Donald Trump

ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25 ಶೇಕಡಾ ಸುಂಕವನ್ನು ವಿಧಿಸುವ ಕಾರ್ಯಕಾರಿ ಆದೇಶವನ್ನು ಹೊರಡಿಸಿದ್ದು, ಒಟ್ಟು ಸುಂಕವನ್ನು ಶೇಕಡಾ 50ಕ್ಕೆ ಹೆಚ್ಚಿಸಲಾಗಿದೆ.

ವಾಷಿಂಗ್ಟನ್: ಭಾರತೀಯ ಆಮದು ವಸ್ತುಗಳ ಮೇಲಿನ ಸುಂಕವನ್ನು ದ್ವಿಗುಣಗೊಳಿಸುವ ನಿರ್ಧಾರವನ್ನು ಅನುಸರಿಸಿ, ಸುಂಕದ ಕುರಿತಾದ ವಿವಾದ ಬಗೆಹರಿಯುವವರೆಗೆ ಭಾರತದೊಂದಿಗೆ ಯಾವುದೇ ವ್ಯಾಪಾರ ಮಾತುಕತೆಗಳಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ನಿನ್ನೆ ಓವಲ್ ಕಚೇರಿಯಲ್ಲಿ ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಭಾರತದ ಆಮದು ವಸ್ತುಗಳ ಮೇಲೆ ಶೇಕಡಾ 50ರವರೆಗೆ ಸುಂಕ ಹೇರಿಕೆ ಹಿನ್ನೆಲೆಯಲ್ಲಿ ಎರಡೂ ದೇಶಗಳ ಮಧ್ಯೆ ಸುಂಕ ಸಮರ ಏರ್ಪಟ್ಟಿದ್ದು ಮಾತುಕತೆಗಳು ಪುನರಾರಂಭಗೊಳ್ಳುತ್ತವೆಯೇ ಎಂದು ಕೇಳಿದಾಗ. "ಇಲ್ಲ, ನಾವು ಅದನ್ನು ಪರಿಹರಿಸುವವರೆಗೆ ಇಲ್ಲ ಎಂದು ಉತ್ತರಿಸಿದರು.

ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25 ಶೇಕಡಾ ಸುಂಕವನ್ನು ವಿಧಿಸುವ ಕಾರ್ಯಕಾರಿ ಆದೇಶವನ್ನು ಹೊರಡಿಸಿದ್ದು, ಒಟ್ಟು ಸುಂಕವನ್ನು ಶೇಕಡಾ 50ಕ್ಕೆ ಹೆಚ್ಚಿಸಲಾಗಿದೆ. ಅಮೆರಿಕ ಸರ್ಕಾರವು ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿಯ ಕಾಳಜಿಗಳನ್ನು ಉಲ್ಲೇಖಿಸಿ, ನಿರ್ದಿಷ್ಟವಾಗಿ ಭಾರತದ ನಿರಂತರ ರಷ್ಯಾದ ತೈಲ ಆಮದುಗಳನ್ನು ಸೂಚಿಸುತ್ತದೆ.

ಈ ಆಮದುಗಳು, ನೇರ ಅಥವಾ ಮಧ್ಯವರ್ತಿಗಳ ಮೂಲಕ, ಅಮೆರಿಕಕ್ಕೆ ಅಸಾಮಾನ್ಯ ಮತ್ತು ಅಸಾಧಾರಣ ಬೆದರಿಕೆಯನ್ನು ಒಡ್ಡುತ್ತವೆ ಮತ್ತು ತುರ್ತು ಆರ್ಥಿಕ ಕ್ರಮಗಳನ್ನು ಸಮರ್ಥಿಸುತ್ತವೆ ಎಂದು ಆದೇಶವು ಹೇಳುತ್ತದೆ.

ಯುಎಸ್ ಅಧಿಕಾರಿಗಳ ಪ್ರಕಾರ, ಆರಂಭಿಕ ಶೇಕಡಾ 25 ಸುಂಕವು ನಿನ್ನೆ ಆಗಸ್ಟ್ 7 ರಂದು ಜಾರಿಗೆ ಬಂದಿತು. ಹೆಚ್ಚುವರಿ ಸುಂಕ ಇನ್ನು 21 ದಿನಗಳಲ್ಲಿ ಜಾರಿಗೆ ಬರಲಿದೆ. ಯುಎಸ್ ಬಂದರುಗಳನ್ನು ಪ್ರವೇಶಿಸುವ ಎಲ್ಲಾ ಭಾರತೀಯ ಸರಕುಗಳಿಗೆ ಅನ್ವಯಿಸುತ್ತದೆ.

ಎರಡೂ ದೇಶಗಳ ನಡುವಿನ ವ್ಯಾಪಾರ ಉದ್ವಿಗ್ನತೆಯಲ್ಲಿ ಈ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯಿದೆ. ಏಕೆಂದರೆ ಎರಡೂ ರಾಷ್ಟ್ರಗಳು ತಮ್ಮ ಆರ್ಥಿಕ ನೀತಿ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಕಡೆ ಗಮನ ಹರಿಸಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಪ್ಸ್ಟೀನ್ ದಾಖಲೆಗಳ ಉಲ್ಲೇಖ, ಹರ್ದೀಪ್ ಪುರಿ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಮಾರ್ಚ್ 9 ರವರೆಗೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಅಭಿನಂದನೆ; ಹೇಳಿದ್ದೇನು?

T20 WC: 19 ವರ್ಷಗಳ ನಂತರ ಆಸೀಸ್ ಅನ್ನು ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ: 3ನೇ ಸ್ಥಾನಕ್ಕೆ ಕುಸಿದ Australia!

ಅಣೆಕಟ್ಟು ಸುರಕ್ಷತೆಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿ; ಕೇಂದ್ರ ಅನುಮತಿ ಕೊಟ್ಟರೆ ಮೇಕೆದಾಟು, UKP ಯೋಜನೆ ಜಾರಿ: ಡಿ.ಕೆ ಶಿವಕುಮಾರ್

ಮಹಾ ಶಿವರಾತ್ರಿ ಮಹತ್ವ: ಆಧ್ಯಾತ್ಮಿಕ ಶುದ್ಧೀಕರಣ, ಪಾಪಗಳ ನಿವಾರಣೆ; ಕಡ್ಡಾಯವಾಗಿ ಮಾಡಿ ಉಪವಾಸ- ಜಾಗರಣೆ, ಪಂಚಾಕ್ಷರಿ ಮಂತ್ರ ಪಠಣೆ!

SCROLL FOR NEXT