ಲಕ್ಷ್ಮನ್ ದಾಸ್ 
ವಿದೇಶ

ಐರ್ಲೆಂಡ್‌ನಲ್ಲಿ ಭಾರತೀಯರ ಮೇಲಿನ ಹಲ್ಲೆ ಹೆಚ್ಚಳ: 20 ವರ್ಷಗಳಿಂದ ವಾಸಿಸುತ್ತಿದ್ದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಕಳೆದ ವಾರವಷ್ಟೆ 6 ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಲಾಗಿದ್ದು ಇದೀಗ ಕೆಲಸಕ್ಕೆ ಹೋಗುತ್ತಿದ್ದ 51 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ.

ಐರ್ಲೆಂಡ್‌ನಲ್ಲಿ ಭಾರತೀಯರ ಮೇಲೆ ಹಿಂಸಾತ್ಮಕ ದಾಳಿಗಳು ಮುಂದುವರೆಯುತ್ತಿದೆ. ಕಳೆದ ವಾರವಷ್ಟೆ 6 ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಲಾಗಿದ್ದು ಇದೀಗ ಕೆಲಸಕ್ಕೆ ಹೋಗುತ್ತಿದ್ದ 51 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಸಂತ್ರಸ್ತ ಲಕ್ಷ್ಮಣ್ ದಾಸ್ 22 ವರ್ಷಗಳಿಂದ ಐರ್ಲೆಂಡ್‌ನಲ್ಲಿ ವಾಸಿಸುತ್ತಿದ್ದು ಐರಿಶ್ ಪ್ರಜೆಯಾಗಿದ್ದಾರೆ. ಎರಡು ಮಕ್ಕಳ ತಂದೆಯಾದ ದಾಸ್, ಡಬ್ಲಿನ್‌ನ ಅನಂತರಾ ದಿ ಮಾರ್ಕರ್ ಹೋಟೆಲ್‌ನಲ್ಲಿ ಶೆಫ್ ಆಗಿ ಕೆಲಸ ಮಾಡುತ್ತಿದ್ದಾರೆ.

ಆಗಸ್ಟ್ 6ರ ಬೆಳಿಗ್ಗೆ ಅವರು ತಮ್ಮ ಇ-ಬೈಕ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಮೂವರ ತಂಡ ಅವರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿದೆ. ದಾಸ್‌ ಅವರನ್ನು ಅಡ್ಡಗಟ್ಟಿದ ಗುಂಪು ಹೊಡೆಯಲು ಪ್ರಾರಂಭಿಸಿದೆ. ಇದರಿಂದಾಗಿ ಅವರ ಹೆಲ್ಮೆಟ್ ಮುರಿಯಿತು. ಘಟನೆಯ ಸಮಯದಲ್ಲಿ ಅವರ ಫೋನ್, ಕ್ರೆಡಿಟ್ ಕಾರ್ಡ್, ನಗದು ಮತ್ತು ಎಲೆಕ್ಟ್ರಿಕ್ ಬೈಕ್ ಅನ್ನು ಸಹ ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.

ಹಲ್ಲೆಯ ನಂತರ ಲಕ್ಷ್ಮಣ್ ದಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಕಾಲುಗಳು, ಕಣ್ಣು, ಭುಜ ಮತ್ತು ತೋಳಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆದಿದ್ದಾರೆ. ದಾಳಿಯಿಂದ ಚೇತರಿಸಿಕೊಳ್ಳಲು ಅವರು ಪ್ರಸ್ತುತ ರಜೆ ತೆಗೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಆಗ್ನೇಯ ಐರ್ಲೆಂಡ್‌ನ ವಾಟರ್‌ಫೋರ್ಡ್ ನಗರದಲ್ಲಿ ವಾಸವಾಗಿರುವ ಕೇರಳ ಮೂಲದ ಸದ್ಯ ಐರಿಶ್ ಪ್ರಜೆಯಾಗಿರುವ ಅನುಪ ಅಚ್ಯುತನ್ ಅವರ ಆರು ವರ್ಷದ ಮಗಳು ನಿಯಾ ನವೀನ್ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ವೇಳೆ ಭಾರತಕ್ಕೆ ಹೋಗಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT