ಪಾಕಿಸ್ತಾನ ಪ್ರಧಾನ ಮಂತ್ರಿ  
ವಿದೇಶ

ಭಾರತಕ್ಕೆ ಎಂದಿಗೂ ಮರೆಯಲಾಗದ ತಕ್ಕ ಪಾಠ ಕಲಿಸುತ್ತೇವೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಜೀವಸೆಲೆಯಾಗಿದೆ. ಅಂತಾರಾಷ್ಟ್ರೀಯ ಒಪ್ಪಂದಗಳ ಅಡಿಯಲ್ಲಿ ದೇಶದ ಹಕ್ಕುಗಳ ಮೇಲೆ ಯಾವುದೇ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಪ್ರಧಾನಿ ಶೆಹಬಾಜ್ ಒತ್ತಿ ಹೇಳಿದರು.

ಪಾಕಿಸ್ತಾನಕ್ಕೆ ನೀರು ಹರಿಯುವುದನ್ನು ತಡೆಯುವ ಯಾವುದೇ ಪ್ರಯತ್ನವು ಸಿಂಧೂ ಜಲ ಒಪ್ಪಂದದ ಉಲ್ಲಂಘನೆಯಾಗಿದ್ದು, ಅದಕ್ಕೆ ನಿರ್ಣಾಯಕ ಪ್ರತಿಕ್ರಿಯೆ ನೀಡಲಾಗುವುದು ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮ್ಮ ಶತ್ರು ದೇಶ ಭಾರತ ಪಾಕಿಸ್ತಾನದಿಂದ ಒಂದು ಹನಿ ನೀರನ್ನು ಸಹ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ನೀವು ನಮ್ಮ ನೀರನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದೀರಿ. ನೀವು ಅಂತಹ ಕ್ರಮಕ್ಕೆ ಪ್ರಯತ್ನಿಸಿದರೆ, ಪಾಕಿಸ್ತಾನವು ನಿಮಗೆ ಎಂದಿಗೂ ಮರೆಯಲಾಗದ ಪಾಠ ಕಲಿಸುತ್ತದೆ ಎಂದು ಹೇಳಿದರು.

ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಜೀವಸೆಲೆಯಾಗಿದೆ. ಅಂತಾರಾಷ್ಟ್ರೀಯ ಒಪ್ಪಂದಗಳ ಅಡಿಯಲ್ಲಿ ದೇಶದ ಹಕ್ಕುಗಳ ಮೇಲೆ ಯಾವುದೇ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಪ್ರಧಾನಿ ಶೆಹಬಾಜ್ ಒತ್ತಿ ಹೇಳಿದರು.

ಕಳೆದ ಏಪ್ರಿಲ್‌ 22ರಂದು 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ಸಾರ್ವಭೌಮ ರಾಷ್ಟ್ರವಾಗಿ ಭಾರತವು ತನ್ನ ಹಕ್ಕುಗಳನ್ನು ಚಲಾಯಿಸುವಲ್ಲಿ, ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು (IWT) ಸ್ಥಗಿತಗೊಳಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಒಂಬತ್ತು ವರ್ಷಗಳ ಮಾತುಕತೆಗಳ ನಂತರ, ವಿಶ್ವಬ್ಯಾಂಕ್‌ನ ನೆರವಿನೊಂದಿಗೆ, ವಿಶ್ವಬ್ಯಾಂಕ್‌ನ ಮಾಜಿ ಅಧ್ಯಕ್ಷ ಯುಜೀನ್ ಬ್ಲಾಕ್ 1960 ರಲ್ಲಿ ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಲಾಯಿತು,

ಮಾತುಕತೆಗಳನ್ನು ಪ್ರಾರಂಭಿಸಿದ ವಿಶ್ವಬ್ಯಾಂಕ್‌ನ ಮಾಜಿ ಅಧ್ಯಕ್ಷ ಯುಜೀನ್ ಬ್ಲಾಕ್, ಅತ್ಯಂತ ಯಶಸ್ವಿ ಅಂತಾರಾಷ್ಟ್ರೀಯ ಒಪ್ಪಂದಗಳಲ್ಲಿ ಒಂದೆಂದು ಗುರುತಿಸಲ್ಪಟ್ಟ ಇದು ಸಂಘರ್ಷ ಸೇರಿದಂತೆ ಆಗಾಗ್ಗೆ ಉದ್ವಿಗ್ನತೆಗಳನ್ನು ಸಹಿಸಿಕೊಂಡಿದೆ ಮತ್ತು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನೀರಾವರಿ ಮತ್ತು ಜಲವಿದ್ಯುತ್ ಅಭಿವೃದ್ಧಿಗೆ ಒಂದು ಚೌಕಟ್ಟನ್ನು ಒದಗಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿಯ 'ವೋಟ್ ಚೋರಿ' ಆರೋಪ ಖಂಡಿಸಿ 272 ಗಣ್ಯರಿಂದ ಬಹಿರಂಗ ಪತ್ರ; ಚುನಾವಣಾ ಆಯೋಗದ ಪರವಾಗಿ ವಾದ!

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!

ನೇಪಾಳದ Gen Zಗಳು ಭಾರತಕ್ಕೂ ಬೇಕೆಂಬ ಆಸೆಯಲ್ಲಿದ್ದವರಿಗೆ ಬಿಹಾರದಲ್ಲಿ ಸಿಕ್ಕಿದ್ದು ಮೈಥಿಲಿ! (ತೆರೆದ ಕಿಟಕಿ)

ಭಾರತೀಯ ಮೂಲದ ಮಮ್ದಾನಿ "ಭಾರತೀಯರನ್ನು ದ್ವೇಷಿಸುತ್ತಾರೆ: ಹೊಸ ಬಾಂಬ್ ಸಿಡಿಸಿದ ಡೊನಾಲ್ಡ್ ಟ್ರಂಪ್ ಪುತ್ರ!

ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ; ನಾಳೆ ಬಿಹಾರ ನೂತನ ಸಿಎಂ ಆಗಿ ಪ್ರಮಾಣ

SCROLL FOR NEXT