ಡೊನಾಲ್ಡ್ ಟ್ರಂಪ್  
ವಿದೇಶ

ಉಕ್ರೇನ್ ಯುದ್ಧ ಕೊನೆಗೊಳಿಸಿದರೆ ನಾನು ಸ್ವರ್ಗಕ್ಕೆ ಹೋಗಬಹುದು: Donald Trump

ನಿನ್ನೆ ಫಾಕ್ಸ್ & ಫ್ರೆಂಡ್ಸ್ ಜೊತೆಗಿನ ಫೋನ್ ಸಂದರ್ಶನದಲ್ಲಿ, ಅಮೆರಿಕ ಅಧ್ಯಕ್ಷರು, ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಕ್ರಮ ಕೈಗೊಳ್ಳುವುದಕ್ಕೆ ಹೊಸ ವಿವರಣೆಯನ್ನು ನೀಡಿದರು.

ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಬಗೆಹರಿಸಲು ತಮ್ಮ ಹೊಸ ಪ್ರಯತ್ನವು ಆಧ್ಯಾತ್ಮಿಕ ಆಕಾಂಕ್ಷೆಯಿಂದ ಕೂಡಿದ್ದು ಇದರಿಂದ ನಾನು ಸ್ವರ್ಗಕ್ಕೆ ನೇರವಾಗಿ ಹೋಗಬಹುದು ಎಂಬ ನಂಬಿಕೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ನಿನ್ನೆ ಫಾಕ್ಸ್ & ಫ್ರೆಂಡ್ಸ್ ಜೊತೆಗಿನ ಫೋನ್ ಸಂದರ್ಶನದಲ್ಲಿ, ಅಮೆರಿಕ ಅಧ್ಯಕ್ಷರು, ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಕ್ರಮ ಕೈಗೊಳ್ಳುವುದಕ್ಕೆ ಹೊಸ ವಿವರಣೆಯನ್ನು ನೀಡಿದರು, ಇದರಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಮಧ್ಯವರ್ತಿಯಾಗಿದ್ದೇನೆ ಎಂದು ವಿವರಿಸಿದರು.

ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿ ವಾರಕ್ಕೆ 7,000 ಜನರನ್ನು ಕೊಲ್ಲುವುದನ್ನು ಉಳಿಸಲು ಸಾಧ್ಯವಾದರೆ, ಅದು ತುಂಬಾ ಒಳ್ಳೆಯದು ಎಂದು ಭಾವಿಸುತ್ತೇನೆ. ಸಾಧ್ಯವಾದರೆ ನಾನು ಸ್ವರ್ಗಕ್ಕೆ ಹೋಗಲು ಪ್ರಯತ್ನಿಸಲು ಬಯಸುತ್ತೇನೆ ಎಂದು ಟ್ರಂಪ್ ಹೇಳಿದರು.

ಅಮೆರಿಕ ಅಧ್ಯಕ್ಷರು ತಮ್ಮ ಪ್ರಯತ್ನವನ್ನು ದಕ್ಷಿಣ ಏಷ್ಯಾದಲ್ಲಿ ಅವರ ಹಿಂದಿನ ಹಸ್ತಕ್ಷೇಪಕ್ಕೆ ಹೋಲಿಸಿದರು. ನಾನು ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ನಿಲ್ಲಿಸಿ ಬಹಳಷ್ಟು ಜೀವಗಳನ್ನು ಉಳಿಸಿದ್ದೇನೆ ಎಂದು ಭಾವಿಸುತ್ತೇನೆ. ಅಲ್ಲಿ ವಿಮಾನಗಳನ್ನು ಹೊಡೆದುರುಳಿಸಲಾಗುತ್ತಿತ್ತು. ಬಹುಶಃ ಪರಮಾಣು ಯುದ್ಧವಾಗಬಹುದಿತ್ತು. ನಾನು ಅದನ್ನು ವ್ಯಾಪಾರದ ಮೂಲಕ ಮಾಡಿದೆ ಎಂದರು.

ಟ್ರಂಪ್ ಅವರ ವಕ್ತಾರೆ ಕ್ಯಾರೋಲಿನ್ ಲೀವಿಟ್ ನಂತರ ಈ ಹೇಳಿಕೆಗಳನ್ನು ಗಂಭೀರವಾಗಿ ನೀಡಿದ್ದಾರೆ ಎಂದು ತಿಳಿಸಿದರು. ರಾಜತಾಂತ್ರಿಕತೆಯ ಮೂಲಕ ಜೀವಗಳನ್ನು ಉಳಿಸುವುದು ಒಂದು ಉದಾತ್ತ ಅನ್ವೇಷಣೆ ಎಂದು ಅಧ್ಯಕ್ಷ ಟ್ರಂಪ್ ನಂಬುತ್ತಾರೆ. ಅವರು ಒಬ್ಬ ರಾಜಕಾರಣಿ ಮತ್ತು ನಂಬಿಕೆಯ ವ್ಯಕ್ತಿಯಾಗಿ ಈ ಕಾರ್ಯಾಚರಣೆಯನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT