ಕ್ಯಾರೋಲಿನ್ ಲೀವಿಟ್ 
ವಿದೇಶ

ಭಾರತ-ಪಾಕ್ ಸಂಘರ್ಷ ಕೊನೆಗೊಳಿಸಲು ಟ್ರಂಪ್ 'ಸುಂಕಾಸ್ತ್ರ' ಬಳಸಿದರು: ಶ್ವೇತಭವನ

ರಷ್ಯಾ ಮತ್ತು ಉಕ್ರೇನ್‌ ಯುದ್ಧ ಕೊನೆಗೊಳಿಸಲು ಟ್ರಂಪ್ ತೀವ್ರ ಒತ್ತಡ ಹೇರಿದ್ದಾರೆ. ನೀವು ನೋಡಿದಂತೆ ಭಾರತದ ಮೇಲೆ ನಿರ್ಬಂಧಗಳು ಮತ್ತು ಇತರ ಕ್ರಮಗಳನ್ನು ಅವರು ತೆಗೆದುಕೊಂಡಿದ್ದಾರೆ ಎಂದು ಲೀವಿಟ್ ಹೇಳಿದ್ದಾರೆ.

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷವನ್ನು ಕೊನೆಗೊಳಿಸಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ಮಂಗಳವಾರ ಮತ್ತೊಮ್ಮೆ ಹೇಳಿದ್ದಾರೆ.

ನಮ್ಮ ಅಧ್ಯಕ್ಷರು ಅಮೆರಿಕದ ಶಕ್ತಿಯನ್ನು ಬಳಸಿಕೊಂಡು ನಮ್ಮ ಮಿತ್ರರಾಷ್ಟ್ರಗಳು, ನಮ್ಮ ಸ್ನೇಹಿತರು ಹಾಗೂ ಪ್ರಪಂಚದಾದ್ಯಂತ ವಿರೋಧಿಗಳಿಂದ ಗೌರವ ಕೋರುತ್ತಿದ್ದಾರೆ ಎಂದು ಲೀವಿಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಷ್ಯಾ ಮತ್ತು ಉಕ್ರೇನ್‌ ಯುದ್ಧ ಕೊನೆಗೊಳಿಸಲು ಟ್ರಂಪ್ ತೀವ್ರ ಒತ್ತಡ ಹೇರಿದ್ದಾರೆ. ನೀವು ನೋಡಿದಂತೆ ಭಾರತದ ಮೇಲೆ ನಿರ್ಬಂಧಗಳು ಮತ್ತು ಇತರ ಕ್ರಮಗಳನ್ನು ಅವರು ತೆಗೆದುಕೊಂಡಿದ್ದಾರೆ ಎಂದು ಲೀವಿಟ್ ಹೇಳಿದ್ದಾರೆ.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಲೀವಿಟ್, ಭಾರತ-ಪಾಕಿಸ್ತಾನ ಸಂಘರ್ಷವನ್ನು ಕೊನೆಗೊಳಿಸಲು ಟ್ರಂಪ್, ಹೆಚ್ಚು ಸುಂಕ ವಿಧಿಸುವುದನ್ನು ಅತ್ಯಂತ ಶಕ್ತಿಯುತ ರೀತಿಯಲ್ಲಿ ಬಳಸಿಕೊಂಡರು ಎಂದು ತಿಳಿಸಿದರು.

ಮೇ 10 ರಂದು, ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದರು. ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಪರಿಹರಿಸಲು ನಾನು ಸಹಾಯ ಮಾಡಿದ್ದೇನೆ ಎಂದು ಟ್ರಂಪ್ 40ಕ್ಕೂ ಹೆಚ್ಚು ಬಾರಿ ಹೇಳಿಕೆ ನೀಡಿದ್ದಾರೆ.

ಆದರೆ ಭಾರತ ಟ್ರಂಪ್ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸುವ ಬಗ್ಗೆ ಎರಡು ದೇಶಗಳ ಸೇನಾ ಮಹಾನಿರ್ದೇಶಕರ (DGMO) ನಡುವಿನ ನೇರ ಮಾತುಕತೆ ನಂತರ ಕದನ ವಿರಾಮ ಮಾಡಿಕೊಳ್ಳಲಾಯಿತು ಎಂದು ಭಾರತ ನಿರಂತರವಾಗಿ ಹೇಳುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT