ಸುನೇತ್ರಾ ಪವಾರ್ ಭಾಷಣ ಮಾಡುತ್ತಿರುವ ಚಿತ್ರ 
ವಿದೇಶ

ಮುಂಬೈ: RSS ಕಾರ್ಯಕ್ರಮದಲ್ಲಿ ಭಾಗಿ; ಅಜಿತ್ ಪವಾರ್ ಪತ್ನಿ ವಿವಾದಕ್ಕೆ ಗುರಿ!

ಕಂಗನಾ ರಣಾವತ್ ಸಭೆಯ ಹಲವಾರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಸುನೇತ್ರಾ ಪವಾರ್ ಭಾಷಣ ಮಾಡುತ್ತಿರುವುದು ಸೇರಿದಂತೆ ಹಲವು ಮಹಿಳೆಯರು ನೆಲದ ಮೇಲೆ ಕುಳಿತಿರುವುದು ಕಂಡುಬರುತ್ತದೆ.

ಮುಂಬೈ: ನಟಿ ಕಂಗನಾ ರಣಾವತ್ ಅವರ ನಿವಾಸದಲ್ಲಿ ನಡೆದ RSS ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಹಾಗೂ ಬಾರಾಮತಿ ಸಂಸದೆ ಸುನೇತ್ರಾ ಪವಾರ್ ಅವರು ವಿವಾದಕ್ಕೆ ಗುರಿಯಾಗಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡಿರುವ ಕಂಗನಾ, ಇಂದು ನನ್ನ ನಿವಾಸದಲ್ಲಿ ರಾಷ್ಟ್ರ ಸೇವಿಕಾ ಸಮಿತಿಯ ಮಹಿಳಾ ವಿಭಾಗದ ಕಾರ್ಯಕ್ರಮ ನಡೆಯಿತು. ಸನಾತನ ಮೌಲ್ಯಗಳು, ಹಿಂದೂ ಸಂಸ್ಕೃತಿ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬಲಪಡಿಸಲು ನಾವು ಒಟ್ಟಾಗಿ ಸೇರಿದ್ದೇವು. ಮಾನವ ಸೇವೆ, ರಾಷ್ಟ್ರನಿರ್ಮಾಣ ಮತ್ತು ಸನಾತನ ಸಂಸ್ಕೃತಿಯ ಸಂರಕ್ಷಣೆಗಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ. ಮಹಿಳೆಯರ ಜಾಗೃತಿ ಮತ್ತು ಭಾಗವಹಿಸುವಿಕೆ ರಾಷ್ಟ್ರವನ್ನು ಬಲಪಡಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್ ಸಭೆಯ ಹಲವಾರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಸುನೇತ್ರಾ ಪವಾರ್ ಭಾಷಣ ಮಾಡುತ್ತಿರುವುದು ಸೇರಿದಂತೆ ಹಲವು ಮಹಿಳೆಯರು ನೆಲದ ಮೇಲೆ ಕುಳಿತಿರುವುದು ಕಂಡುಬರುತ್ತದೆ.

ಇದು ವಿವಾದಕ್ಕೆ ಗುರಿಯಾಗಿದ್ದು, ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ತನ್ನ ಚಿಕ್ಕಪ್ಪ ಅಜಿತ್ ಪವಾರ್ ಅವರ ಬಣವನ್ನು "ಬೂಟಾಟಿಕೆ" ಎಂದು ಆರೋಪಿಸಿದ್ದಾರೆ. ಉಪ ಮುಖ್ಯಮಂತ್ರಿ ಬಿಜೆಪಿಯಿಂದ ಒತ್ತಡದಲ್ಲಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ವಾರ್ಧಾದಲ್ಲಿ ವಿವಾದ ಕುರಿತು ಪ್ರತಿಕ್ರಿಯಿಸಿದ ಅಜಿತ್ ಪವಾರ್. ತಮ್ಮ ಹೆಂಡತಿ ಎಲ್ಲಿಗೆ ಹೋಗುತ್ತಾರೆ ಎಂಬುದನ್ನು ಹುಡುಕಲು ಹೋಗುವುದಿಲ್ಲ. ಆದಾಗ್ಯೂ, ಈ ವಿಚಾರದ ಬಗ್ಗೆ ಹೆಂಡತಿ ಬಳಿ ಕೇಳಿ ನಂತರ ಹೇಳುವುದಾಗಿ ತಿಳಿಸಿದರು.

ಈ ಮಧ್ಯೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಸಿರುವ ಸುನೇತ್ರಾ ಪವಾರ್, ರಾಜಕೀಯದಿಂದ ಅಲ್ಲಿಗೆ ಹೋಗಿರಲಿಲ್ಲ. ಮಹಿಳೆಯರ ಕಾರ್ಯಕ್ರಮ ಅರ್ಥಮಾಡಿಕೊಳ್ಳಲು ಅಲ್ಲಿಗೆ ಹೋಗಿದ್ದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

SCROLL FOR NEXT