ಪುಟಿನ್, ಪ್ರಧಾನಿ ಮೋದಿ, ಕ್ಸಿ-ಜಿನ್ ಪಿಂಗ್ 
ವಿದೇಶ

ಚೀನಾದಲ್ಲಿ SCO ಶೃಂಗಸಭೆ: 'ಆಪರೇಷನ್ ಸಿಂಧೂರ್' ಬಳಿಕ ಪಾಕ್, ಟರ್ಕಿ ನಾಯಕರೊಂದಿಗೆ ಪ್ರಧಾನಿ ಮೋದಿ ಭಾಗಿ!

ಈ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಲ್ಲದೆ, ಪ್ರಧಾನಿ ಮೋದಿ ಮತ್ತು ಹಲವಾರು ವಿಶ್ವ ನಾಯಕರು ಭಾಗವಹಿಸಲಿದ್ದಾರೆ ಎಂದು ಲಿಯು ಹೇಳಿದರು.

ಬೀಜಿಂಗ್: ಈ ತಿಂಗಳ ಅಂತ್ಯದಲ್ಲಿ ತಿಯಾಂಜಿನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯು ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಸಭೆಯಾಗಲಿದೆ ಎಂದು ಚೀನಾ ಶುಕ್ರವಾರ ಹೇಳಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 20 ವಿಶ್ವ ನಾಯಕರು ಭಾಗವಹಿಸಲಿದ್ದಾರೆ.

10 ಸದಸ್ಯರ ಶೃಂಗಸಭೆಯು ಆಗಸ್ಟ್ 31 ರಿಂದ ಸೆಪ್ಟೆಂಬರ್ 1ರವರೆಗೆ ತಿಯಾಂಜಿನ್ ನಲ್ಲಿ ನಡೆಯಲಿದ್ದು, ಇದು ಚೀನಾ ಆಯೋಜಿಸುತ್ತಿರುವ ಐದನೇ ಶೃಂಗಸಭೆಯಾಗಿದೆ. ಇದು SCO ಇತಿಹಾಸದಲ್ಲಿ ಅತ್ಯಂತ ದೊಡ್ಡ ಸಭೆಯಾಗಲಿದೆ ಎಂದು ಚೀನಾದ ಸಹಾಯಕ ವಿದೇಶಾಂಗ ಸಚಿವ ಲಿಯು ಬಿನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಈ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಲ್ಲದೆ, ಪ್ರಧಾನಿ ಮೋದಿ ಮತ್ತು ಹಲವಾರು ವಿಶ್ವ ನಾಯಕರು ಭಾಗವಹಿಸಲಿದ್ದಾರೆ ಎಂದು ಲಿಯು ಹೇಳಿದರು.

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್, ಇಂಡೊನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ಹ್, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್, ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ವಿಶ್ವಸಂಸ್ಥೆ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಮತ್ತು ಎಸ್‌ಸಿಒ ಪ್ರಧಾನ ಕಾರ್ಯದರ್ಶಿ ನೂರ್ಲಾನ್ ಯೆರ್ಮೆಕ್‌ಬಾಯೆವ್ ಸೇರಿದಂತೆ 10 ಅಂತರರಾಷ್ಟ್ರೀಯ ಸಂಸ್ಥೆಗಳ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

10 ಸದಸ್ಯರ SCO ಶೃಂಗಸಭೆಯನ್ನು ಈ ಬಾರಿ ಚೀನಾ ಆಯೋಜಿಸುತ್ತಿದೆ. ರಷ್ಯಾ, ಭಾರತ, ಇರಾನ್, ಕಝಾಕಿಸ್ತಾನ್, ಕಿರ್ಗಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಬೆಲಾರಸ್ ಮತ್ತು ಚೀನಾ SCO ಸದಸ್ಯ ರಾಷ್ಟ್ರಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

SCROLL FOR NEXT