ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ 
ವಿದೇಶ

ಭಾರತದ ಮೇಲೆ 'ಸುಂಕಾಸ್ತ್ರ'ಕ್ಕೆ ನಿಜವಾದ ಕಾರಣ ಬಾಯ್ಬಿಟ್ಟ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್!

ಎನ್‌ಬಿಸಿ ನ್ಯೂಸ್‌ನ 'ಮೀಟ್ ದಿ ಪ್ರೆಸ್' ನಲ್ಲಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್, ಅಮೆರಿಕದ ಕ್ರಮದಿಂದ ರಷ್ಯನ್ನರು ತಮ್ಮ ತೈಲ ಆರ್ಥಿಕತೆಯಿಂದ ಶ್ರೀಮಂತರಾಗಲು 'ಕಷ್ಟವಾಗುತ್ತದೆ' ಎಂದು ಹೇಳಿದ್ದಾರೆ.

ವಾಷಿಂಗ್ಟನ್: ಉಕ್ರೇನ್‌ನಲ್ಲಿ ಬಾಂಬ್ ದಾಳಿ ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿರುವುದಾಗಿ ಯುನೈಟೆಡ್ ಸ್ಟೇಟ್ಸ್ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಭಾನುವಾರ ಹೇಳಿದ್ದಾರೆ.

ಎನ್‌ಬಿಸಿ ನ್ಯೂಸ್‌ನ 'ಮೀಟ್ ದಿ ಪ್ರೆಸ್' ನಲ್ಲಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್ , ಅಮೆರಿಕದ ಕ್ರಮದಿಂದ ರಷ್ಯನ್ನರು ತಮ್ಮ ತೈಲ ಆರ್ಥಿಕತೆಯಿಂದ ಶ್ರೀಮಂತರಾಗಲು 'ಕಷ್ಟವಾಗುತ್ತದೆ' ಎಂದು ಹೇಳಿದ್ದಾರೆ.

ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು ಖರೀದಿಸಿಸುವುದಕ್ಕಾಗಿ ಟ್ರಂಪ್ ಆಡಳಿತವು ಭಾರತವನ್ನು ಹೆಚ್ಚಾಗಿ ಟೀಕಿಸುತ್ತದೆ. ಆದರೆ ರಷ್ಯಾದ ಕಚ್ಚಾ ತೈಲದ ಅತಿದೊಡ್ಡ ಆಮದುದಾರ ರಾಷ್ಟ್ರವಾದ ಚೀನಾವನ್ನು ಟೀಕಿಸುತ್ತಿಲ್ಲ.

ಇದೇ ತಿಂಗಳು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಟ್ರಂಪ್ ಅವರ ಭೇಟಿಯ ನಂತರ ನಡೆದ ಬೆಳವಣಿಗೆ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಅಮೆರಿಕ ಅಂತ್ಯಗೊಳಿಸಬಹುದೆಂಬ ವಿಶ್ವಾಸವನ್ನು ವ್ಯಾನ್ಸ್ ಹೊಂದಿದ್ದಾರೆ ಎಂದು ಎನ್‌ಬಿಸಿ ನ್ಯೂಸ್ ಹೇಳಿದೆ.

"ಕಳೆದ ಕೆಲವು ವಾರಗಳಲ್ಲಿ ಉಭಯ ರಾಷ್ಟ್ರಗಳಿಂದ ಕೆಲವು ಮಹತ್ವದ ಪ್ರತಿಕ್ರಿಯೆಗಳನ್ನು ಕೇಳುತ್ತಿದ್ದೇವೆ. ರಷ್ಯನ್ನರು ತಮ್ಮ ತೈಲ ಆರ್ಥಿಕತೆಯಿಂದ ಶ್ರೀಮಂತರಾಗದಂತೆ ತಡೆಯಲು ಭಾರತದ ಮೇಲೆ ಹೆಚ್ಚುವರಿ ಸುಂಕದಂತಹ ಆರ್ಥಿಕ ಹತೋಟಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವ್ಯಾನ್ಸ್ ತಿಳಿಸಿದರು.

ಹತ್ಯೆಯನ್ನು ನಿಲ್ಲಿಸಿದರೆ ರಷ್ಯಾವನ್ನು ವಿಶ್ವ ಆರ್ಥಿಕತೆಗೆ ಪುನಃ ಆಹ್ವಾನಿಸಲಾಗುತ್ತದೆ. ಇಲ್ಲದಿದ್ದರೆ ಅವರು ಪ್ರತ್ಯೇಕವಾಗಿ ಮುಂದುವರಿಯುತ್ತಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿಗೆ: ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? video

SC, ST ದೌರ್ಜನ್ಯ ಪ್ರಕರಣ: 60 ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ; ಇದು ನಾಡಹಬ್ಬ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್

ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಐವರು ಪತ್ರಕರ್ತರು ಸೇರಿ 20 ಮಂದಿ ಸಾವು

"ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು" : ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು!

SCROLL FOR NEXT