ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ 
ವಿದೇಶ

ಭಾರತದ ಮೇಲೆ 'ಸುಂಕಾಸ್ತ್ರ'ಕ್ಕೆ ನಿಜವಾದ ಕಾರಣ ಬಾಯ್ಬಿಟ್ಟ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್!

ಎನ್‌ಬಿಸಿ ನ್ಯೂಸ್‌ನ 'ಮೀಟ್ ದಿ ಪ್ರೆಸ್' ನಲ್ಲಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್, ಅಮೆರಿಕದ ಕ್ರಮದಿಂದ ರಷ್ಯನ್ನರು ತಮ್ಮ ತೈಲ ಆರ್ಥಿಕತೆಯಿಂದ ಶ್ರೀಮಂತರಾಗಲು 'ಕಷ್ಟವಾಗುತ್ತದೆ' ಎಂದು ಹೇಳಿದ್ದಾರೆ.

ವಾಷಿಂಗ್ಟನ್: ಉಕ್ರೇನ್‌ನಲ್ಲಿ ಬಾಂಬ್ ದಾಳಿ ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿರುವುದಾಗಿ ಯುನೈಟೆಡ್ ಸ್ಟೇಟ್ಸ್ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಭಾನುವಾರ ಹೇಳಿದ್ದಾರೆ.

ಎನ್‌ಬಿಸಿ ನ್ಯೂಸ್‌ನ 'ಮೀಟ್ ದಿ ಪ್ರೆಸ್' ನಲ್ಲಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್ , ಅಮೆರಿಕದ ಕ್ರಮದಿಂದ ರಷ್ಯನ್ನರು ತಮ್ಮ ತೈಲ ಆರ್ಥಿಕತೆಯಿಂದ ಶ್ರೀಮಂತರಾಗಲು 'ಕಷ್ಟವಾಗುತ್ತದೆ' ಎಂದು ಹೇಳಿದ್ದಾರೆ.

ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು ಖರೀದಿಸಿಸುವುದಕ್ಕಾಗಿ ಟ್ರಂಪ್ ಆಡಳಿತವು ಭಾರತವನ್ನು ಹೆಚ್ಚಾಗಿ ಟೀಕಿಸುತ್ತದೆ. ಆದರೆ ರಷ್ಯಾದ ಕಚ್ಚಾ ತೈಲದ ಅತಿದೊಡ್ಡ ಆಮದುದಾರ ರಾಷ್ಟ್ರವಾದ ಚೀನಾವನ್ನು ಟೀಕಿಸುತ್ತಿಲ್ಲ.

ಇದೇ ತಿಂಗಳು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಟ್ರಂಪ್ ಅವರ ಭೇಟಿಯ ನಂತರ ನಡೆದ ಬೆಳವಣಿಗೆ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಅಮೆರಿಕ ಅಂತ್ಯಗೊಳಿಸಬಹುದೆಂಬ ವಿಶ್ವಾಸವನ್ನು ವ್ಯಾನ್ಸ್ ಹೊಂದಿದ್ದಾರೆ ಎಂದು ಎನ್‌ಬಿಸಿ ನ್ಯೂಸ್ ಹೇಳಿದೆ.

"ಕಳೆದ ಕೆಲವು ವಾರಗಳಲ್ಲಿ ಉಭಯ ರಾಷ್ಟ್ರಗಳಿಂದ ಕೆಲವು ಮಹತ್ವದ ಪ್ರತಿಕ್ರಿಯೆಗಳನ್ನು ಕೇಳುತ್ತಿದ್ದೇವೆ. ರಷ್ಯನ್ನರು ತಮ್ಮ ತೈಲ ಆರ್ಥಿಕತೆಯಿಂದ ಶ್ರೀಮಂತರಾಗದಂತೆ ತಡೆಯಲು ಭಾರತದ ಮೇಲೆ ಹೆಚ್ಚುವರಿ ಸುಂಕದಂತಹ ಆರ್ಥಿಕ ಹತೋಟಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವ್ಯಾನ್ಸ್ ತಿಳಿಸಿದರು.

ಹತ್ಯೆಯನ್ನು ನಿಲ್ಲಿಸಿದರೆ ರಷ್ಯಾವನ್ನು ವಿಶ್ವ ಆರ್ಥಿಕತೆಗೆ ಪುನಃ ಆಹ್ವಾನಿಸಲಾಗುತ್ತದೆ. ಇಲ್ಲದಿದ್ದರೆ ಅವರು ಪ್ರತ್ಯೇಕವಾಗಿ ಮುಂದುವರಿಯುತ್ತಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT