ರನಿಲ್ ವಿಕ್ರಮಸಿಂಘೆ 
ವಿದೇಶ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ವಿಕ್ರಮಸಿಂಘೆ ಅವರು ಸರ್ಕಾರದ 16 ಲಕ್ಷ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಲಂಬೊ: ಸಾರ್ವಜನಿಕರ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧನಕೊಳ್ಳಗಾಗಿದ್ದ ಶ್ರೀಲಂಕಾ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರಿಗೆ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಕೊಲಂಬೊ ರಾಷ್ಟ್ರೀಯ ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ, ನ್ಯಾಯಾಲಯದ ಆವರಣದ ಹೊರಗೆ ಬಿಗಿ ಭದ್ರತೆ ಮತ್ತು ಪ್ರತಿಭಟನೆಗಳ ನಡುವೆ ವಿಕ್ರಮಸಿಂಘೆ ಅವರು ವರ್ಚುವಲ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾದರು.

ವಿಕ್ರಮಸಿಂಘೆ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ನಿಲುಪುಲಿ ಲಂಕಾಪುರ ಅವರು, ಮಾಜಿ ಅಧ್ಯಕ್ಷರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

ವಿಕ್ರಮಸಿಂಘೆ ಅವರನ್ನು ಕಳೆದ ಶುಕ್ರವಾರ ಪೊಲೀಸರ ಅಪರಾಧ ತನಿಖಾ ಇಲಾಖೆ(ಸಿಐಡಿ) ಬಂಧಿಸಿತ್ತು.

ಆರಂಭದಲ್ಲಿ ಜೈಲು ಆಸ್ಪತ್ರೆಗೆ ದಾಖಲಾಗಿದ್ದ ವಿಕ್ರಮಸಿಂಘೆ ಅವರನ್ನು ನಿರ್ಜಲೀಕರಣದಿಂದಾಗಿ ಅವರ ಆರೋಗ್ಯ ತೀವ್ರ ಹದಗೆಟ್ಟ ನಂತರ ರಾಷ್ಟ್ರೀಯ ಆಸ್ಪತ್ರೆಯ ಐಸಿಯುಗೆ ವರ್ಗಾಯಿಸಲಾಯಿತು.

ವಿಕ್ರಮಸಿಂಘೆ ಅವರು ಸರ್ಕಾರದ 16 ಲಕ್ಷ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

76 ವರ್ಷದ ವಿಕ್ರಮಸಿಂಘೆ ಅವರು ದೇಶದ ಮುಖ್ಯಸ್ಥರಾಗಿದ್ದಾಗ ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2023 ರಲ್ಲಿ ಲಂಡನ್‌ಗೆ ಭೇಟಿ ನೀಡಲು ಸರ್ಕಾರದ ಹಣ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT