ಅರ್ಜುನ ರಣತುಂಗ 
ವಿದೇಶ

ಶ್ರೀಲಂಕಾ ತೈಲ ಹಗರಣ: 1996ರ ವಿಶ್ವಕಪ್ ವಿಜೇತ ನಾಯಕ ಅರ್ಜುನ ರಣತುಂಗ ಬಂಧನ ಸಾಧ್ಯತೆ

ಧೀರ್ಘಕಾಲಿಕ ಗುತ್ತಿಗೆ ನೀಡುವ ಕಾನೂನಾತ್ಮಕ ಪ್ರಕ್ರಿಯೆಯನ್ನು ತಿರುಚಿ ಅಧಿಕ ಬೆಲೆಗೆ ಸ್ಥಳದಲ್ಲೇ ಖರೀದಿಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ರಣತುಂಗ ಹಾಗೂ ಅವರ ಸಹೋದರ ಪ್ರಮುಖ ಆರೋಪಿಗಳಾಗಿದ್ದಾರೆ.

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ದೇಶಕ್ಕೆ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ಅರ್ಜುನ ರಣತುಂಗ ಅವರು ದೇಶದ ಪೆಟ್ರೋಲಿಯಂ ಸಚಿವರಾಗಿದ್ದ ವೇಳೆ ಅವರ ವಿರುದ್ಧ ಕೇಳಿಬಂದಿದ್ದ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲು ಉದ್ದೇಶಿಸಿರುವುದಾಗಿ ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಧೀರ್ಘಕಾಲಿಕ ಗುತ್ತಿಗೆ ನೀಡುವ ಕಾನೂನಾತ್ಮಕ ಪ್ರಕ್ರಿಯೆಯನ್ನು ತಿರುಚಿ ಅಧಿಕ ಬೆಲೆಗೆ ಸ್ಥಳದಲ್ಲೇ ಖರೀದಿಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ರಣತುಂಗ ಹಾಗೂ ಅವರ ಸಹೋದರ ಪ್ರಮುಖ ಆರೋಪಿಗಳಾಗಿದ್ದಾರೆ.

"ಒಟ್ಟು ಇಂಥ 27 ಖರೀದಿಗಳಿಂದ ಸರ್ಕಾರಿ ಬೊಕ್ಕಸಕ್ಕೆ 800 ದಶಲಕ್ಷ ರೂಪಾಯಿ ನಷ್ಟವಾಗಿದೆ" ಎಂದು ಲಂಚ ಅಥವಾ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. 2017ರಲ್ಲಿ ಈ ಒಪ್ಪಂದ ಮಾಡಿಕೊಳ್ಳುವ ವೇಳೆ ಈ ಮೊತ್ತ 50 ಲಕ್ಷ ಡಾಲರ್ ಆಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಅರ್ಜುನ ರಣತುಂಗಾ ಪ್ರಸ್ತುತ ಹೊರದೇಶದಲ್ಲಿದ್ದು, ದೇಶಕ್ಕೆ ಮರಳಿದ ತಕ್ಷಣ ಅವರನ್ನು ಬಂಧಿಸಲಾಗುವುದು ಎಂದು ಆಯೋಗ ಕೊಲಂಬೊ ಮ್ಯಾಜಿಸ್ಟ್ರೇಟ್ ಅಸಂಗ ಬೊದರಗಾಮ ಅವರಿಗೆ ತಿಳಿಸಿದೆ.

ರಣತುಂಗ ಅವರ ಅಣ್ಣ ಧಮ್ಮಿಕಾ ರಣತುಂಗ, ಈ ಗುತ್ತಿಗೆ ನೀಡಿದ ಸಮಯದಲ್ಲಿ ಸರ್ಕಾರಿ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಷನ್‍ನ ಅಧ್ಯಕ್ಷರಾಗಿದ್ದರು. ಅವರನ್ನು ಸೋಮವಾರ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅಮೆರಿಕ ಹಾಗೂ ಶ್ರೀಲಂಕಾ ಪೌರತ್ವ ಹೊಂದಿರುವ ಧಮ್ಮಿಕಾ ವಿರುದ್ಧ ಪ್ರಯಾಣ ನಿಷೇಧ ಹೇರಲಾಗಿದೆ.

ಈ ಪ್ರಕರಣವನ್ನು ಮಾರ್ಚ್ 13 ರಂದು ಮತ್ತೆ ವಿಚಾರಣೆಗೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. 62 ವರ್ಷದ ಅರ್ಜುನ ರಣತುಂಗ, ಶ್ರೀಲಂಕಾ ಕ್ರೀಡೆಯಲ್ಲಿ ಅತ್ಯಂತ ಪ್ರತಿಭಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ ಆಗಿರುವ ಅವರು, ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಅಂತಿಮ ಗೆಲುವಿನ ನಂತರ 1996 ರಲ್ಲಿ ವಿಶ್ವಕಪ್‌ಗ ಕ್ರಿಕೆಟ್ ನಲ್ಲಿ ಮುನ್ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಇಶಾನ್, ಪಾಂಡ್ಯ ಅರ್ಧಶತಕ; ನಮೀಬಿಯಾಗೆ 210 ರನ್ ಗುರಿ ನೀಡಿದ ಭಾರತ! ಮಿಂಚಿದ ನಮೀಬಿಯಾ ನಾಯಕ Erasmus

T20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್; ದಾಖಲೆಗಳ ಮಳೆ; ಎಲೈಟ್ ಗ್ರೂಪ್ ಸೇರಿದ Ishan Kishan!

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ ಕೇಂದ್ರ ಅನುಮೋದನೆ; 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

SCROLL FOR NEXT