ಪ್ರಧಾನಿ ನರೇಂದ್ರ ಮೋದಿಯವರಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರದಾನ 
ವಿದೇಶ

Video- ಇಥಿಯೋಪಿಯಾದ ಅತ್ಯುನ್ನತ ಗೌರವ ಪ್ರದಾನ; 'ವಂದೇ ಮಾತರಂ' ಗೀತೆಗೆ ಚಪ್ಪಾಳೆ ತಟ್ಟಿದ ಪ್ರಧಾನಿ ಮೋದಿ

ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಅಡಿಸ್ ಅಬಾಬಾ(ಇಥಿಯೋಪಿಯಾ): ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ 'ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ' ಪ್ರಶಸ್ತಿಯನ್ನು ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಪ್ರದಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಇಥಿಯೋಪಿಯಾ ಸೇರಿದಂತೆ ಮೂರು ದೇಶಗಳ ಪ್ರವಾಸದಲ್ಲಿದ್ದಾರೆ. ಇಥಿಯೋಪಿಯಾದಲ್ಲಿ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೆಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ನೀಡಿ ನಿನ್ನೆ ಗೌರವಿಸಿದ್ದಾರೆ. ಇದು ಭಾರತ-ಇಥಿಯೋಪಿಯಾ ಸಂಬಂಧಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆಗಾಗಿ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಪ್ರಧಾನಿ ಮೋದಿ ಅವರಿಗೆ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ದೆಹಲಿಯಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ಇಥಿಯೋಪಿಯಾದಲ್ಲಿ ಮೊಳಗಿದ ವಂದೇ ಮಾತರಂ ಗೀತೆ

ಕಳೆದ 15 ವರ್ಷಗಳಲ್ಲಿ ಮೊದಲ ಭಾರತೀಯ ನಾಯಕನಾಗಿ ಇಥಿಯೋಪಿಯಾಗೆ ಪ್ರಧಾನಿ ನರೇಂದ್ರ ಮೋದಿಯವರ ಐತಿಹಾಸಿಕ ಭೇಟಿಯು ಭಾರತ-ಆಫ್ರಿಕನ್ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ಗುರುತಿಸಿತು, ಎರಡೂ ದೇಶಗಳು ತಮ್ಮ ದ್ವಿಪಕ್ಷೀಯ ಸಂಬಂಧವನ್ನು ಔಪಚಾರಿಕವಾಗಿ "ಕಾರ್ಯತಂತ್ರದ ಪಾಲುದಾರಿಕೆ"ಗೆ ಹೆಚ್ಚಿಸಿವೆ.

ಇಥಿಯೋಪಿಯಾ ಪ್ರಧಾನಿ ಅಬಿ ಅಹ್ಮದ್ ಆಯೋಜಿಸಿದ್ದ ಔತಣಕೂಟದಲ್ಲಿ, ಪ್ರಧಾನಿ ಮೋದಿ ಅವರಿಗೆ ಇಥಿಯೋಪಿಯನ್ ಗಾಯಕರು 'ವಂದೇ ಮಾತರಂ' ಹಾಡುವ ಮೂಲಕ ಹೃದಯಸ್ಪರ್ಶಿ ಸ್ವಾಗತ ನೀಡಿದರು. 1870 ರ ದಶಕದಲ್ಲಿ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರ ಐತಿಹಾಸಿಕ ಕವಿತೆಯ 150 ವರ್ಷಗಳನ್ನು ಭಾರತ ಆಚರಿಸುತ್ತಿರುವುದರಿಂದ ಈ ಕ್ಷಣವು ಇನ್ನಷ್ಟು ವಿಶೇಷವಾಗಿತ್ತು, ಇದು ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಭಾರತದ ಹೋರಾಟದ ಪರಾಕಾಷ್ಠೆಯಾಗಿತ್ತು.

ಖುಷಿಪಟ್ಟ ಮೋದಿ

ಗಾಯಕರಿಂದ ವಂದೇ ಮಾತರಂ ಹಾಡು ಕೇಳಿದಾಕ್ಷಣ ಕೈಯೆತ್ತಿ ಖುಷಿಯಿಂದ ಚಪ್ಪಾಳೆ ತಟ್ಟಿದ ಮೋದಿ ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. "ನಿನ್ನೆ ಪ್ರಧಾನಿ ಅಬಿ ಅಹ್ಮದ್ ಅಲಿ ಆಯೋಜಿಸಿದ್ದ ಔತಣಕೂಟದಲ್ಲಿ, ಇಥಿಯೋಪಿಯನ್ ಗಾಯಕರು ವಂದೇ ಮಾತರಂನ ಅದ್ಭುತ ಗಾಯನವನ್ನು ಹಾಡಿದರು. ನಾವು ವಂದೇ ಮಾತರಂನ 150 ವರ್ಷಗಳನ್ನು ಆಚರಿಸುತ್ತಿರುವ ಈ ಸಮಯದಲ್ಲಿ ಇದು ಹೃದಯಸ್ಪರ್ಶಿ ಕ್ಷಣವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

SCROLL FOR NEXT