ಅಸಿಮ್ ಮುನೀರ್ 
ವಿದೇಶ

Op Sindoor: 'ದೇವರ ದಯೆ'ಯಿಂದ ಬದುಕುಳಿದಿದ್ದೇವೆ; ಕೊನೆಗೊ ಸತ್ಯ ಒಪ್ಪಿಕೊಂಡ ಅಸಿಮ್ ಮುನೀರ್!

ಅಪ್ಘಾನಿಸ್ತಾನದ ಗಡಿಯಾದ್ಯಂತ ಒಳನುಸುಳುವ ಉಗ್ರರಲ್ಲಿ ಆಪ್ಘನ್ ಪ್ರಜೆಗಳೇ ಹೆಚ್ಚಾಗಿದ್ದು, ಪಾಕಿಸ್ತಾನ ಮತ್ತು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಾಲಿಬಾನ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿ ನಂತರ ಭಾರತ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ನಂತರ ನಡೆದ ಉಭಯ ದೇಶಗಳ ಮಿಲಿಟರಿ ಸಂಘರ್ಷದ ವೇಳೆಯಲ್ಲಿ ಪಾಕಿಸ್ತಾನಕ್ಕೆ ದೇವರ ನೆರವು ಸಿಕ್ಕಿತು ಎಂದು ಪಾಕಿಸ್ತಾನದ ರಕ್ಷಣಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಹೇಳಿದ್ದಾರೆ.

ಅಪ್ಘಾನಿಸ್ತಾನದ ಗಡಿಯಾದ್ಯಂತ ಒಳನುಸುಳುವ ಉಗ್ರರಲ್ಲಿ ಆಪ್ಘನ್ ಪ್ರಜೆಗಳೇ ಹೆಚ್ಚಾಗಿದ್ದು, ಪಾಕಿಸ್ತಾನ ಮತ್ತು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಾಲಿಬಾನ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇಸ್ಲಾಮಾಬಾದ್ ನಲ್ಲಿ ಇತ್ತೀಚಿಗೆ ನಡೆದ ರಾಷ್ಟ್ರೀಯ ಉಲೇಮಾ ಸಮಾವೇಶದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಭಾರತದೊಂದಿಗೆ ನಾಲ್ಕು ದಿನಗಳ ಮೇ ಸಂಘರ್ಷದ ಕುರಿತು ಮಾತನಾಡಿದ ಮುನೀರ್, ಭಾರತದ ವಿರುದ್ಧ ಪಾಕಿಸ್ತಾನದ ಸೋಲಿನ ಸಮಯದಲ್ಲಿ ಸಶಸ್ತ್ರ ಪಡೆಗಳಿಗೆ ದೇವರ ನೆರವು ಸಿಕ್ಕಿತು. ನಾಮಗೂ ಅದೇ ಅನಿಸುತ್ತಿದೆ ಎಂದು ಹೇಳಿದರು.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಟ್ಟುಕೊಂಡು ಭಾರತವು ಮೇ 7 ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಪ್ರಾರಂಭಿಸಿತು.

ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಮಿಲಿಟರಿ ಸಂಘರ್ಘದ ನಂತರ ಮೇ 10 ರಂದು ಕದನ ವಿರಾಮ ಒಪ್ಪಂದ ಜಾರಿಗೆ ಬಂದಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಸಂಪುಟ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್, ಖಾತೆ ಹಂಚಿಕೆಯಲ್ಲಿ ಭಿನ್ನಮತ ಸ್ಫೋಟ..!

WTCಯಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆ: ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿ Team Indiaನ ಹಿಂದಿಕ್ಕಿದ ಬಾಂಗ್ಲಾ!

ನಮ್ಮ ನೋವನ್ನು ಆನಂದಿಸುತ್ತೀರಾ: ನನಗೆ ವಯಸ್ಸಾಗಿದೆ, ಆದರೆ ಹೋರಾಡೋದು ಮರೆತಿಲ್ಲ; ಸಲ್ಮಾನ್ ಖಾನ್ ಎಚ್ಚರಿಕೆ!

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

SCROLL FOR NEXT