ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನ: ಇಬ್ಬರು ಪೊಲೀಸರಿಗೆ ಗುಂಡಿಕ್ಕಿ ಕೊಂದ ಅಪರಿಚಿತ ಬಂದೂಕುಧಾರಿಗಳು!

ಲಕ್ಕಿ ಮಾರ್ವತ್ ಜಿಲ್ಲೆಯ ತಮ್ಮ ಗ್ರಾಮದಿಂದ ಹಿಂತಿರುಗುತ್ತಿದ್ದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮುಮ್ತಾಜ್ ಅಲಿ ಅವರ ಮೇಲೆ ಬೈಕಿನಲ್ಲಿ ಬಂದ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ.

ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸೋಮವಾರ ನಡೆದ ವಿಭಿನ್ನ ಘಟನೆಗಳಲ್ಲಿ ಇಬ್ಬರು ಪೊಲೀಸರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ವಜಿರಿಸ್ತಾನದ ಗಡಿಯಲ್ಲಿರುವ ಟ್ಯಾಂಕ್ ಜಿಲ್ಲೆಯಲ್ಲಿ ಈ ಘಟನೆಗಳು ನಡೆದಿವೆ.

ಮೊದಲ ಘಟನೆಯಲ್ಲಿ, ಲಕ್ಕಿ ಮಾರ್ವತ್ ಜಿಲ್ಲೆಯ ತಮ್ಮ ಗ್ರಾಮದಿಂದ ಹಿಂತಿರುಗುತ್ತಿದ್ದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮುಮ್ತಾಜ್ ಅಲಿ ಅವರ ಮೇಲೆ ಬೈಕಿನಲ್ಲಿ ಬಂದ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ. ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಎರಡನೇ ಘಟನೆಯಲ್ಲಿ, ಮನೆಗೆ ತೆರಳುತ್ತಿದ್ದ ಕಾನ್‌ಸ್ಟೆಬಲ್ ಸಜ್ಜದ್ ಹುಸೇನ್ ಅವರನ್ನು ಶಾ ಅಲಂ ರಸ್ತೆಯಿಂದ ಅಪಹರಿಸಿ, ಬಲವಂತವಾಗಿ ವಾಹನದಿಂದ ಹೊರಗೆಳೆದು ಹತ್ಯೆ ಮಾಡಿದ್ದಾರೆ.

ಎರಡೂ ಘಟನೆಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲಾಗಿದೆ. ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ನಿಷೇಧಿತ ಭಯೋತ್ಪಾದಕ ಸಂಘಟನೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ನವೆಂಬರ್ 2022ರಲ್ಲಿ ಕದನ ವಿರಾಮ ಒಪ್ಪಂದ ಕೊನೆಗೊಂಡ ನಂತರ, ವಿಶೇಷವಾಗಿ ಅಫ್ಘಾನಿಸ್ತಾನದ ಗಡಿಯಲ್ಲಿರುವ ಪ್ರಾಂತ್ಯಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!