ಒಸ್ಮಾನ್ ಹಾದಿ ಹಾಗೂ ಫೈಸಲ್ ಕರೀಮ್ ಮಸೂದ್ 
ವಿದೇಶ

Bangladesh: ಉಸ್ಮಾನ್ ಹಾದಿ ಹತ್ಯೆ ಆರೋಪಿ ದುಬೈನಲ್ಲಿ ಪ್ರತ್ಯಕ್ಷ; ವೀಡಿಯೋ ಮಾಡಿ ಹೇಳಿದ್ದೇನು..?

ನಾನು ಹತ್ಯೆಗೈದಿಲ್ಲ. ನನ್ನ ಕುಟುಂಬ ಮತ್ತು ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ. ನನ್ನನ್ನು ರಕ್ಷಿಸಿಕೊಳ್ಳಲು ನಾನು ದುಬೈಗೆ ಬಂದಿದ್ದೇನೆ.

ದುಬೈ: ಬಾಂಗ್ಲಾದೇಶದ ವಿದ್ಯಾರ್ಥಿ ದಂಗೆಯ ನಾಯಕ ಒಸ್ಮಾನ್ ಹಾದಿ ಹತ್ಯೆಯ ಪ್ರಮುಖ ಶಂಕಿತ ಆರೋಪಿ ಎಂದು ಹೇಳಲಾಗುತ್ತಿರುವ ಫೈಸಲ್ ಕರೀಮ್ ಮಸೂದ್ ದುಬೈನಲ್ಲಿ ಪ್ರತ್ಯಕ್ಷನಾಗಿದ್ದು, ತನ್ನ ವಿರುದ್ಧ ಕೇಳಿ ಬಂದಿರುವ ಆರೋಪ ಸಂಬಂಧ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾನೆ.

ವಿದೇಶದಿಂದ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿರುವ ಆರೋಪಿ, ತಾನು ದುಬೈನಲ್ಲಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹತ್ಯೆ ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿ ನಾನು ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.

ನಾನು ಪ್ರಸ್ತುತ ದುಬೈನಲ್ಲಿದ್ದೇನೆ.ಈ ಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾನೆ. ಮಾತ್ರವಲ್ಲದೆ ಜಮಾತ್ ಶಿಬಿರ್ ಮೇಲೆ ಆರೋಪ ಹೊರಿಸಿ ಹಾದಿಯೊಂದಿಗಿನ ನನ್ನ ಸಂಬಂಧಗಳು ಕಟ್ಟುನಿಟ್ಟಾಗಿ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ತಿಳಿಸಿದ್ದಾನೆ.

ನಾನು ಹತ್ಯೆಗೈದಿಲ್ಲ. ನನ್ನ ಕುಟುಂಬ ಮತ್ತು ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ. ನನ್ನನ್ನು ರಕ್ಷಿಸಿಕೊಳ್ಳಲು ನಾನು ದುಬೈಗೆ ಬಂದಿದ್ದೇನೆ. ಹಾದಿ ಜಮಾತ್‌ನ ಉತ್ಪನ್ನ. ಬಹುಶಃ ಇದರ ಹಿಂದೆ ಜಮಾತಿಗಳು ಇದ್ದಿರಬಹುದು ಎಂದು ಹೇಳಿದ್ದಾರೆ.

ಡಿಸೆಂಬರ್ 12 ರಂದು ಹಾದಿ ಮೇಲೆ ನಡೆದ ದಾಳಿಯ ನಂತರ ಮಸೂದ್ ಮತ್ತು ಮತ್ತೊಬ್ಬ ಶಂಕಿತ ಅಲಂಗೀರ್ ಶೇಖ್ ದೇಶ ಬಿಟ್ಟು ಪಲಾಯನ ಮಾಡಿ, ಹಲುಘಾಟ್ ಗಡಿಯ ಮೂಲಕ ಭಾರತಕ್ಕೆ ತಲುಪಿದ್ದಾರೆ ಎಂದು ಬಾಂಗ್ಲಾದೇಶ ಪೊಲೀಸರು ಆರೋಪಿಸಿದ್ದರು.

ಭಾರತೀಯ ಭದ್ರತಾ ಅಧಿಕಾರಿಗಳು, ಗಡಿ ಭದ್ರತಾ ಪಡೆ ಮತ್ತು ಮೇಘಾಲಯ ಪೊಲೀಸರು ಇಬ್ಬರು ಭಾರತಕ್ಕೆ ಬಂದಿಲ್ಲ, ಬಾಂಗ್ಲಾ ಹೇಳಿಕೊಂಡಿರುವುದು ಆಧಾರರಹಿತವೆಂದು ತಳ್ಳಿಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ?, ಕೊಲಂಬೋದಲ್ಲಿ ಶೇ.94ರಷ್ಟು ವರ್ಷಧಾರೆ ಸಾಧ್ಯತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

ಬೆಂಗಳೂರು-ನೆಲಮಂಗಲ ಜಿಂದಾಲ್ ಫ್ಲೈ ಓವರ್ ಬಳಿ ಭೀಕರ ಅಪಘಾತ: KSRTC ಬಸ್​​ಗೆ ಕಾರು ಡಿಕ್ಕಿ; ಐವರು ಯುವಕರು ಸಾವು

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್ ಗೆ ಬಿಗ್ ಟ್ವಿಸ್ಟ್: ಕುಣಿಗಲ್ ನಲ್ಲಿ ಲವರ್ ಮನೆಯಲ್ಲಿ ಪತ್ತೆ!

ನುಡಿದಂತೆ ನಡೆಯುವುದು ಕಾಂಗ್ರೆಸ್ ಮಾತ್ರ, ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಸಂಸದರು ತುಟಿ ಪಿಟಿಕ್ ಅನ್ನುತ್ತಿಲ್ಲ: ಸಿಎಂ ಸಿದ್ದರಾಮಯ್ಯ

SCROLL FOR NEXT