ಎಸ್ ಜೈಶಂಕರ್ 
ವಿದೇಶ

ಢಾಕಾ: ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಜೈಶಂಕರ್ ಭಾಗಿ; ಕುಟುಂಬ ಭೇಟಿಯಾಗಿ ಸಾಂತ್ವನ

ಇಂದು ಢಾಕಾದಲ್ಲಿ ಖಲೀದಾ ಜಿಯಾ ಅವರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ ಜೈಶಂಕರ್, ಬಿಎನ್‌ಪಿ ಹಂಗಾಮಿ ಅಧ್ಯಕ್ಷೆ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ಮೋದಿ ಅವರು ಬರೆದ ಸಂತಾಪ ಸೂಚಕ ಪತ್ರವನ್ನು ಹಸ್ತಾಂತರಿಸಿದರು.

ಢಾಕಾ: ವಯೋಸಹಜ ಕಾಯಿಲೆಯಿಂದ ಮಂಗಳವಾರ ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಹಾಗೂ ಬಿಎನ್‌ಪಿ ಪಕ್ಷದ ನಾಯಕಿ ಬೇಗಂ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ವಿದೇಶಾಂಗ ಸಚಿವ ಡಾ. ಎಸ್‌ ಜೈಶಂಕರ್‌ ಅವರು ಬುಧವಾರ ಢಾಕಾಗೆ ಆಗಮಿಸಿದ್ದಾರೆ.

ಇಂದು ಢಾಕಾದಲ್ಲಿ ಖಲೀದಾ ಜಿಯಾ ಅವರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ ಜೈಶಂಕರ್, ಬಿಎನ್‌ಪಿ ಹಂಗಾಮಿ ಅಧ್ಯಕ್ಷೆ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ಮೋದಿ ಅವರು ಬರೆದ ಸಂತಾಪ ಸೂಚಕ ಪತ್ರವನ್ನು ಹಸ್ತಾಂತರಿಸಿದರು.

"ಢಾಕಾಗೆ ಆಗಮಿಸಿದ ನಂತರ ಬಿಎನ್‌ಪಿ ಹಂಗಾಮಿ ಅಧ್ಯಕ್ಷೆ ಮತ್ತು ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದೆ" ಎಂದು ಜೈಶಂಕರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬರೆದ ವೈಯಕ್ತಿಕ ಪತ್ರವನ್ನು ತಾರಿಕ್ ರೆಹಮಾನ್ ಅವರಿಗೆ ಹಸ್ತಾಂತರಿಸಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ ಭಾರತ ಸರ್ಕಾರ ಮತ್ತು ಜನರ ಪರವಾಗಿ ಆಳವಾದ ಸಂತಾಪ ವ್ಯಕ್ತಪಡಿಸಲಾಯಿತು" ಎಂದು ಜೈಶಂಕರ್ ತಿಳಿಸಿದ್ದಾರೆ.

"ಬೇಗಂ ಖಲೀದಾ ಜಿಯಾ ಅವರ ದೃಷ್ಟಿಕೋನ ಮತ್ತು ಮೌಲ್ಯಗಳು ನಮ್ಮ ಪಾಲುದಾರಿಕೆಯ ಅಭಿವೃದ್ಧಿಗೆ ಮಾರ್ಗದರ್ಶನ ನೀಡುತ್ತವೆ" ಎಂದು ಅವರು ಹೇಳಿದರು.

ಖಲೀದಾ ನಿಧನಕ್ಕೆ 3 ದಿನ ಶೋಕಾಚರಣೆ

ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ ಬೆನ್ನಲ್ಲೆ, ಬಾಂಗ್ಲಾದೇಶದಲ್ಲಿ 3 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಯುನಸ್‌ ನೇತೃತ್ವ ಮಧ್ಯಂರತ ಸರ್ಕಾರ ಘೊಷಣೆ ಮಾಡಿದೆ.

ಇನ್ನು, ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ಢಾಕಾದ ರಾಷ್ಟ್ರೀಯ ಸಂಸತ್ತಿನ ದಕ್ಷಿಣ ಪ್ಲಾಜಾದಲ್ಲಿ ನಡೆಯಲಿದ್ದು, ಸಕಲ ಸರ್ಕಾರಿ ಗೌರವಗಳ ನೆರವೇರಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ