ವಿದೇಶ

ಸ್ವೀಡನ್‌ ಶಾಲೆಯಲ್ಲಿ ಐವರಿಗೆ ಗುಂಡು; 'ಡೇಂಜರ್' ನಿಂತಿಲ್ಲ ಎಂದು ಪೊಲೀಸರ ಎಚ್ಚರಿಕೆ

ಸ್ವೀಡಿಷ್ ನಗರದ ಓರೆಬ್ರೊದಲ್ಲಿರುವ ಶಾಲೆಯಲ್ಲಿ ನಡೆದ ಆಘಾತಕಾರಿ ಗುಂಡಿನ ದಾಳಿ ಘಟನೆಯು ಇಡೀ ಪ್ರದೇಶದಾದ್ಯಂತ ಕಳವಳವನ್ನು ಹುಟ್ಟುಹಾಕಿದೆ.

ಸ್ವೀಡಿಷ್ ನಗರದ ಓರೆಬ್ರೊದಲ್ಲಿರುವ ಶಾಲೆಯಲ್ಲಿ ನಡೆದ ಆಘಾತಕಾರಿ ಗುಂಡಿನ ದಾಳಿ ಘಟನೆಯು ಇಡೀ ಪ್ರದೇಶದಾದ್ಯಂತ ಕಳವಳವನ್ನು ಹುಟ್ಟುಹಾಕಿದೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಗುಂಡಿನ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ, ಆದರೆ ಅವರ ಸ್ಥಿತಿ ಪ್ರಸ್ತುತ ತಿಳಿದಿಲ್ಲ ಎಂದು ತಿಳಿಸಿದರು.

ಈ ಗುಂಡಿನ ದಾಳಿಯ ನಂತರ ಪೊಲೀಸರು ಮತ್ತು ಭದ್ರತಾ ಅಧಿಕಾರಿಗಳು ಶಾಲೆಯ ಭದ್ರತೆಗೆ ಸಂಬಂಧಿಸಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ತನಿಖೆ ಮತ್ತು ಭದ್ರತಾ ಕಾರ್ಯಾಚರಣೆಗಳಿಗೆ ತೊಂದರೆಯಾಗದಂತೆ ಸ್ಥಳೀಯ ಜನರು ಶಾಲೆಯ ಬಳಿ ಹೋಗದಂತೆ ಮನವಿ ಮಾಡಲಾಗಿದೆ. ಸಾಮಾನ್ಯವಾಗಿ ಶಾಂತ ಮತ್ತು ಸುರಕ್ಷಿತ ಪ್ರದೇಶವೆಂದು ಪರಿಗಣಿಸಲಾದ ಒರೆಬ್ರೊದಲ್ಲಿ ಈ ಗುಂಡಿನ ದಾಳಿ ಜನರಲ್ಲಿ ಕಳವಳವನ್ನು ಹುಟ್ಟುಹಾಕಿದೆ.

"ಐವರಿಗೆ ಗುಂಡು ಬಿದ್ದಿರುವ ಬಗ್ಗೆ ದೃಢಪಟ್ಟಿದೆ" ಎಂದು ಒರೆಬ್ರೊ ನಗರ ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಪ್ರಕರಣವನ್ನು ಪ್ರಸ್ತುತ "ಕೊಲೆ ಯತ್ನ, ಗಂಭೀರ ಶಸ್ತ್ರಾಸ್ತ್ರ ಅಪರಾಧ" ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ದಾಳಿಗೆ ಕಾರಣ ಮತ್ತು ಸಂತ್ರಸ್ತರ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗಿಲ್ಲ. ಆದಾಗ್ಯೂ, ಆಂಬ್ಯುಲೆನ್ಸ್, ರಕ್ಷಣಾ ಸೇವೆಗಳು ಮತ್ತು ಪೊಲೀಸರು ಪ್ರಸ್ತುತ ಸ್ಥಳದಲ್ಲಿದ್ದಾರೆ.

"ಒರೆಬ್ರೊದಲ್ಲಿ ಹಿಂಸಾಚಾರದ ವರದಿಗಳು ಅತ್ಯಂತ ಗಂಭೀರವಾಗಿವೆ. ಪೊಲೀಸರು ಸ್ಥಳದಲ್ಲಿದ್ದು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರವು ಕಾನೂನು ಜಾರಿ ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ" ಎಂದು ಸ್ವೀಡನ್‌ನ ಕಾನೂನು ಸಚಿವ ಗುನ್ನಾರ್ ಸ್ಟ್ರೋಮರ್ ಸ್ವೀಡಿಷ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಒರೆಬ್ರೊ ನಗರವು ರಾಜಧಾನಿ ಸ್ಟಾಕ್‌ಹೋಮ್‌ನಿಂದ ಪಶ್ಚಿಮಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿದೆ ಮತ್ತು ಹೆಚ್ಚಿನ ವಿದ್ಯಾರ್ಥಿಗಳು ಶಾಲೆಯಲ್ಲಿದ್ದಾಗ ಈ ಘಟನೆ ಸಂಭವಿಸಿದೆ. ಆದಾಗ್ಯೂ, ಈ ದಾಳಿಯಲ್ಲಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆಯೇ ಅಥವಾ ದಾಳಿಯ ಹಿಂದಿನ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದು, ದಾಳಿಯ ಹಿಂದಿನ ಸಂಭವನೀಯ ಕಾರಣಗಳನ್ನು ಹುಡುಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ