ಅರ್ಜೆಂಟೀನಾದ ಅಧ್ಯಕ್ಷ ಜೇವಿಯರ್ ಮಿಲೀ 
ವಿದೇಶ

ಅಮೆರಿಕಾ ನಂತರ ಅರ್ಜೆಂಟೀನಾ ಸರದಿ: WHO ನಿಂದ ಹೊರಬರುವುದಾಗಿ ಘೋಷಣೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬರುತ್ತಿರುವುದಾಗಿ ಘೋಷಿಸಿಕೊಂಡ ಎರಡು ವಾರಗಳ ನಂತರ ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲೀ ಅವರ ವಕ್ತಾರರು ಈ ವಿಷಯ ತಿಳಿಸಿದ್ದಾರೆ.

ಯುನೋಸ್ ಐರಿಸ್: ವಿಶ್ವ ಆರೋಗ್ಯ ಸಂಸ್ಥೆಯಿಂದ(WHO) ಹೊರಬರುವುದಾಗಿ ಅರ್ಜೆಂಟೀನಾ ಘೋಷಿಸಿದೆ, ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಡವಿದೆ ಎಂದು ಆರೋಪಿಸಿದ್ದು, ಈ ನಿಟ್ಟಿನಲ್ಲಿ ಅಮೆರಿಕದ ಹೆಜ್ಜೆಯನ್ನು ಅರ್ಜೆಂಟೀನಾ ಅನುಸರಿಸಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬರುತ್ತಿರುವುದಾಗಿ ಘೋಷಿಸಿಕೊಂಡ ಎರಡು ವಾರಗಳ ನಂತರ ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲೀ ಅವರ ವಕ್ತಾರರು ಈ ವಿಷಯ ತಿಳಿಸಿದ್ದಾರೆ.

ಮಿಲೀ ಅವರ ನಿರ್ಧಾರವು ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯ ನಿರ್ವಹಣೆಯನ್ನು ಆಧರಿಸಿದ್ದಾಗಿದೆ ಎಂದು ವಕ್ತಾರ ಮ್ಯಾನುಯೆಲ್ ಅಡೋರ್ನಿ ವರದಿಗಾರರಿಗೆ ತಿಳಿಸಿದರು, ಅರ್ಜೆಂಟೀನಾ ನಮ್ಮ ಸಾರ್ವಭೌಮತ್ವದಲ್ಲಿ ಅಂತಾರಾಷ್ಟ್ರೀಯ ಸಂಸ್ಥೆ ಹಸ್ತಕ್ಷೇಪ ಮಾಡಲು ಅನುಮತಿಸುವುದಿಲ್ಲ ಎಂದು ಹೇಳಿದೆ.

ಈ ಕ್ರಮವು ಅರ್ಜೆಂಟೀನಾಕ್ಕೆ ಸ್ಥಳೀಯವಾಗಿ ಸಂದರ್ಭಕ್ಕೆ ಹೊಂದಿಕೊಳ್ಳುವ ನೀತಿಗಳನ್ನು ಕಾರ್ಯಗತಗೊಳಿಸಲು ಹೆಚ್ಚಿನ ಅವಕಾಶ ನೀಡುತ್ತದೆ ಮತ್ತು ಸಂಪನ್ಮೂಲಗಳ ಹೆಚ್ಚಿನ ಲಭ್ಯತೆಯನ್ನು ಖಚಿತಪಡಿಸುತ್ತದೆ ಎಂದು ಅರ್ಜೆಂಟೀನಾ ಅಧ್ಯಕ್ಷರ ವಕ್ತಾರ ಮ್ಯಾನ್ಯುಯಲ್ ಅಡೊರ್ನಿ ಹೇಳಿದ್ದಾರೆ.

ಡಬ್ಲ್ಯುಹೆಚ್ ಒ ಅಂಕಿಅಂಶಗಳ ಪ್ರಕಾರ, ಅರ್ಜೆಂಟೀನಾ 2022 ಮತ್ತು 2023 ರಲ್ಲಿ ಸಂಸ್ಥೆಗೆ ಸದಸ್ಯತ್ವ ಶುಲ್ಕದ ರೂಪದಲ್ಲಿ ಸುಮಾರು 8.75 ಮಿಲಿಯನ್ ಡಾಲರ್ ಕೊಡುಗೆ ನೀಡಿದೆ ಎಂದು ತೋರಿಸುತ್ತದೆ. ಇದು ಒಟ್ಟು ಬಜೆಟ್‌ನ ಶೇಕಡಾ 0.11ದಷ್ಟಿದೆ. 2024/25ರ ಅವಧಿಗೆ 8.25 ಮಿಲಿಯನ್ ಡಾಲರ್ ಕೊಡುಗೆ ನೀಡಲು ನಿರ್ಧರಿಸಿದೆ.

ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆಯ ಬಜೆಟ್‌ನ ಬಹುಪಾಲು ಸ್ವಯಂಪ್ರೇರಿತ ಕೊಡುಗೆಗಳಿಂದ ಬಂದಿದೆ ಮತ್ತು ಅರ್ಜೆಂಟೀನಾ ಇತ್ತೀಚಿನ ವರ್ಷಗಳಲ್ಲಿ ಏನನ್ನೂ ನೀಡಿಲ್ಲ. ಅರ್ಜೆಂಟೀನಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಹಣವನ್ನು ಪಡೆಯುವುದಿಲ್ಲ, ಆದ್ದರಿಂದ ಈ ಕ್ರಮವು ದೇಶಕ್ಕೆ ಹಣ ಸಂಗ್ರಹಣೆಯಲ್ಲಿ ಯಾವುದೇ ನಷ್ಟವಾಗುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT