ಮೆಹರ್ ಅಫ್ರೋಜ್ ಶಾನ್  
ವಿದೇಶ

ದೇಶದ್ರೋಹದ ಆರೋಪ: ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಬಂಧನ

ದೇಶದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಢಾಕಾ ಮೆಟ್ರೋಪಾಲಿಟನ್ ಪೊಲೀಸ್ಯ ಪತ್ತೇದಾರಿ ವಿಭಾಗದ ತಂಡವು ಆಕೆಯನ್ನು ಬಂಧಿಸಿದೆ ಎಂದು ಹೆಚ್ಚುವರಿ ಡಿಎಂಪಿ ಆಯುಕ್ತ ರೆಜೌಲ್ ಕರೀಮ್ ಮಲ್ಲಿಕ್ ಮಾಹಿತಿ ನೀಡಿದ್ದಾರೆ.

ಢಾಕಾ: ಬಾಂಗ್ಲಾದೇಶದಲ್ಲಿ ಗಲಭೆ ಮತ್ತೆ ಭುಗಿಲೆದ್ದಿದೆ. ಮಾಜಿ ಅಧ್ಯಕ್ಷ ಶೇಕ್ ಮುಜಿಬುರ್ ರೆಹಮಾನ್ ಮನೆಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಇಡೀ ಬಾಂಗ್ಲಾದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗಿದೆ. ಹೀಗಿರುವಾಗಲೇ ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದೆ. ಅವರನ್ನು ಸದ್ಯ ವಿಚಾರಣೆ ನಡೆಸಲಾಗುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇದೆಲ್ಲದರ ನಡುವೆ ದೇಶದ್ರೋಹದ ಆರೋಪದಲ್ಲಿ ಬಾಂಗ್ಲಾ ನಟಿ, ನಿರ್ದೇಶಕಿ ಮೆಹರ್ ಅಫ್ರೋಜ್ ಶಾನ್ ಬಂಧನವಾಗಿದೆ. ಗುರುವಾರ(ಫೆಬ್ರವರಿ 6) ರಾತ್ರಿ ಮೆಹರ್ ಅಫ್ರೋಜ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದೇಶದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಢಾಕಾ ಮೆಟ್ರೋಪಾಲಿಟನ್ ಪೊಲೀಸ್ಯ ಪತ್ತೇದಾರಿ ವಿಭಾಗದ ತಂಡವು ಆಕೆಯನ್ನು ಬಂಧಿಸಿದೆ ಎಂದು ಹೆಚ್ಚುವರಿ ಡಿಎಂಪಿ ಆಯುಕ್ತ ರೆಜೌಲ್ ಕರೀಮ್ ಮಲ್ಲಿಕ್ ಮಾಹಿತಿ ನೀಡಿದ್ದಾರೆ

ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವನ್ನು ನಟಿ ಮೆಹರ್ ಅಫ್ರೋಜ್ ಟೀಕಿಸಿದ್ದರು ಎಂದು ವರದಿಯಾಗಿದೆ. ಜಮಾಲ್ಪುರದಲ್ಲಿ ನಟಿ ಮೆಹರ್ ಕುಟುಂಬ ಸದಸ್ಯರು ವಾಸವಾಗಿದ್ದಾರೆ. ಸ್ಥಳಿಯ ಮಾಧ್ಯಮಗಳ ವರದಿ ಪ್ರಕಾರ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಮತ್ತು ಸ್ಥಳೀಯ ನಿವಾಸಿಗಳು ಅವರ ಮನೆ ಮೇಲೆ ದಾಳಿ ನಡೆಸಿದ್ದರು. ಅದರ ಬೆನ್ನಲ್ಲೇ ನಟಿಯ ಬಂಧನವಾಗಿದೆ.

ಮೆಹರ್ ಕುಟುಂಬಕ್ಕೆ ರಾಜಕೀಯರಂಗದ ನಂಟು ಇದೆ. ಸ್ವತಃ ನಟಿ ಮೆಹರ್ ಕಳೆದ ಚುನಾವಣೆಯಲ್ಲಿ ಅವಾಮಿ ಲೀಗ್ ಅಭ್ಯರ್ಥಿಯಾಗಿ ಮೀಸಲು ಸಂಸದೀಯ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ತಂದೆ ಮೊಹಮ್ಮದ್ ಅಲಿ ಕಳೆದ ರಾಷ್ಟ್ರೀಯ ಚುನಾವಣೆಗೆ ಅವಾಮಿ ಲೀಗ್ ಕಡೆಯಿಂದ ನಾಮನಿರ್ದೇಶನ ಬಯಸಿದ್ದರು. ಇನ್ನು ಮೆಹರ್ ಅವರ ತಾಯಿ ಬೇಗಂ ತಹುರಾ ಅಲಿ, ಮೀಸಲು ಮಹಿಳಾ ಸ್ಥಾನದಿಂದ ಎರಡು ಅವಧಿಗೆ ಬಾಂಗ್ಲಾ ಸಂಸತ್ತಿನಲ್ಲಿ ಕೆಲಸ ಮಾಡಿದ್ದರು. 2004ರಲ್ಲಿ ಚಿತ್ರ ನಿರ್ದೇಶಕ ಹುಮಾಯೂನ್ ಅಹ್ಮದ್ ಎಂಬುವವರ ಜೊತೆ ನಟಿ ಮೆಹರ್ ಮದುವೆ ಆಗಿತ್ತು. ಇಬ್ಬರು ಗಂಡು ಮಕ್ಕಳು ಇದ್ದಾರೆ. 2012ರಲ್ಲಿ ಪತಿ ನಿಧನರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT