ಮೆಹರ್ ಅಫ್ರೋಜ್ ಶಾನ್  
ವಿದೇಶ

ದೇಶದ್ರೋಹದ ಆರೋಪ: ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಬಂಧನ

ದೇಶದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಢಾಕಾ ಮೆಟ್ರೋಪಾಲಿಟನ್ ಪೊಲೀಸ್ಯ ಪತ್ತೇದಾರಿ ವಿಭಾಗದ ತಂಡವು ಆಕೆಯನ್ನು ಬಂಧಿಸಿದೆ ಎಂದು ಹೆಚ್ಚುವರಿ ಡಿಎಂಪಿ ಆಯುಕ್ತ ರೆಜೌಲ್ ಕರೀಮ್ ಮಲ್ಲಿಕ್ ಮಾಹಿತಿ ನೀಡಿದ್ದಾರೆ.

ಢಾಕಾ: ಬಾಂಗ್ಲಾದೇಶದಲ್ಲಿ ಗಲಭೆ ಮತ್ತೆ ಭುಗಿಲೆದ್ದಿದೆ. ಮಾಜಿ ಅಧ್ಯಕ್ಷ ಶೇಕ್ ಮುಜಿಬುರ್ ರೆಹಮಾನ್ ಮನೆಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಇಡೀ ಬಾಂಗ್ಲಾದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗಿದೆ. ಹೀಗಿರುವಾಗಲೇ ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದೆ. ಅವರನ್ನು ಸದ್ಯ ವಿಚಾರಣೆ ನಡೆಸಲಾಗುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇದೆಲ್ಲದರ ನಡುವೆ ದೇಶದ್ರೋಹದ ಆರೋಪದಲ್ಲಿ ಬಾಂಗ್ಲಾ ನಟಿ, ನಿರ್ದೇಶಕಿ ಮೆಹರ್ ಅಫ್ರೋಜ್ ಶಾನ್ ಬಂಧನವಾಗಿದೆ. ಗುರುವಾರ(ಫೆಬ್ರವರಿ 6) ರಾತ್ರಿ ಮೆಹರ್ ಅಫ್ರೋಜ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದೇಶದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಢಾಕಾ ಮೆಟ್ರೋಪಾಲಿಟನ್ ಪೊಲೀಸ್ಯ ಪತ್ತೇದಾರಿ ವಿಭಾಗದ ತಂಡವು ಆಕೆಯನ್ನು ಬಂಧಿಸಿದೆ ಎಂದು ಹೆಚ್ಚುವರಿ ಡಿಎಂಪಿ ಆಯುಕ್ತ ರೆಜೌಲ್ ಕರೀಮ್ ಮಲ್ಲಿಕ್ ಮಾಹಿತಿ ನೀಡಿದ್ದಾರೆ

ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವನ್ನು ನಟಿ ಮೆಹರ್ ಅಫ್ರೋಜ್ ಟೀಕಿಸಿದ್ದರು ಎಂದು ವರದಿಯಾಗಿದೆ. ಜಮಾಲ್ಪುರದಲ್ಲಿ ನಟಿ ಮೆಹರ್ ಕುಟುಂಬ ಸದಸ್ಯರು ವಾಸವಾಗಿದ್ದಾರೆ. ಸ್ಥಳಿಯ ಮಾಧ್ಯಮಗಳ ವರದಿ ಪ್ರಕಾರ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಮತ್ತು ಸ್ಥಳೀಯ ನಿವಾಸಿಗಳು ಅವರ ಮನೆ ಮೇಲೆ ದಾಳಿ ನಡೆಸಿದ್ದರು. ಅದರ ಬೆನ್ನಲ್ಲೇ ನಟಿಯ ಬಂಧನವಾಗಿದೆ.

ಮೆಹರ್ ಕುಟುಂಬಕ್ಕೆ ರಾಜಕೀಯರಂಗದ ನಂಟು ಇದೆ. ಸ್ವತಃ ನಟಿ ಮೆಹರ್ ಕಳೆದ ಚುನಾವಣೆಯಲ್ಲಿ ಅವಾಮಿ ಲೀಗ್ ಅಭ್ಯರ್ಥಿಯಾಗಿ ಮೀಸಲು ಸಂಸದೀಯ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ತಂದೆ ಮೊಹಮ್ಮದ್ ಅಲಿ ಕಳೆದ ರಾಷ್ಟ್ರೀಯ ಚುನಾವಣೆಗೆ ಅವಾಮಿ ಲೀಗ್ ಕಡೆಯಿಂದ ನಾಮನಿರ್ದೇಶನ ಬಯಸಿದ್ದರು. ಇನ್ನು ಮೆಹರ್ ಅವರ ತಾಯಿ ಬೇಗಂ ತಹುರಾ ಅಲಿ, ಮೀಸಲು ಮಹಿಳಾ ಸ್ಥಾನದಿಂದ ಎರಡು ಅವಧಿಗೆ ಬಾಂಗ್ಲಾ ಸಂಸತ್ತಿನಲ್ಲಿ ಕೆಲಸ ಮಾಡಿದ್ದರು. 2004ರಲ್ಲಿ ಚಿತ್ರ ನಿರ್ದೇಶಕ ಹುಮಾಯೂನ್ ಅಹ್ಮದ್ ಎಂಬುವವರ ಜೊತೆ ನಟಿ ಮೆಹರ್ ಮದುವೆ ಆಗಿತ್ತು. ಇಬ್ಬರು ಗಂಡು ಮಕ್ಕಳು ಇದ್ದಾರೆ. 2012ರಲ್ಲಿ ಪತಿ ನಿಧನರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT