ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್  
ವಿದೇಶ

'ಚೀನಾ ಸಮಸ್ಯೆ ನಾವೇ ಬಗೆಹರಿಸಿಕೊಳ್ಳುತ್ತೇವೆ, ನೀವು ಮಧ್ಯೆ ಬರುವುದು ಬೇಡ': Donald Trump ಆಫರ್ ತಿರಸ್ಕರಿಸಿದ ಭಾರತ

ಗಡಿ ಸಮಸ್ಯೆ ನಿಭಾಯಿಸಲು ನಾವು ಯಾವಾಗಲೂ ದ್ವಿಪಕ್ಷೀಯ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಚೀನಾ ವಿಷಯದಲ್ಲಿ ಕೂಡ ಅದನ್ನು ಪಾಲಿಸುತ್ತದೆ.

ನವದೆಹಲಿ: ಭಾರತ-ಚೀನಾ ಗಡಿ ಸಂಘರ್ಷವನ್ನು "ಭೀಕರ ಘರ್ಷಣೆ" ಎಂದು ಬಣ್ಣಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಾಯ ಮಾಡುವ ಇಚ್ಛೆಯನ್ನು ಚೀನಾದೊಂದಿಗಿನ ಗಡಿ ಉದ್ವಿಗ್ನ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸುವ ಅವರ ಪ್ರಸ್ತಾಪವನ್ನು ಭಾರತ ತಿರಸ್ಕರಿಸಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಭಾರತದ ನಿಲುವನ್ನು ಪ್ರಧಾನಿ ಮೋದಿಯವರ ಅಮೆರಿಕ ಭೇಟಿ ಸಂದರ್ಭದಲ್ಲಿ ಪುನರುಚ್ಛರಿಸಿದರು. ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯ ನಂತರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ತನ್ನ ನೆರೆಹೊರೆ ದೇಶಗಳೊಂದಿಗೆ ಸಮಸ್ಯೆಗಳನ್ನು ಪರಿಹರಿಸಲು ದೇಶವು ಯಾವಾಗಲೂ ದ್ವಿಪಕ್ಷೀಯ ಮಾತುಕತೆಯಲ್ಲಿ ತೊಡಗಿಸಿಕೊಳ್ಳುತ್ತದೆ. ಚೀನಾದ ವಿಷಯದಲ್ಲಿ ಕೂಡ ಇದೇ ರೀತಿಯ ನಿಲುವನ್ನು ಭಾರತ ಹೊಂದಿದೆ ಎಂದಿದ್ದಾರೆ.

ಗಡಿ ಸಮಸ್ಯೆ ನಿಭಾಯಿಸಲು ನಾವು ಯಾವಾಗಲೂ ದ್ವಿಪಕ್ಷೀಯ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಚೀನಾ ವಿಷಯದಲ್ಲಿ ಕೂಡ ಅದನ್ನು ಪಾಲಿಸುತ್ತದೆ. ನಾವು ಅವರೊಂದಿಗೆ ಹೊಂದಿರುವ ಯಾವುದೇ ಸಮಸ್ಯೆಗಳನ್ನು ದ್ವಿಪಕ್ಷೀಯ ಮಟ್ಟದಲ್ಲಿ ಚರ್ಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, "ನಾನು ಭಾರತದ ಕಡೆ ಯಾವಾಗಲೂ ನೋಡುತ್ತೇನೆ, ಗಡಿಯಲ್ಲಿನ ಘರ್ಷಣೆಗಳಿಂದ ಸಾಕಷ್ಟು ಕೆಟ್ಟದಾಗಿವೆ, ಅದು ನಿಲ್ಲಬೇಕು, ಸಾಧ್ಯವಾದರೆ ಭಾರತಕ್ಕೆ ಸಹಾಯ ಮಾಡುತ್ತೇವೆ ಎಂದಿದ್ದಾರೆ.

ಟ್ರಂಪ್ ಆರಂಭದಲ್ಲಿ ಅಮೆರಿಕ-ಚೀನಾ ಸಂಬಂಧಗಳ ಬಗ್ಗೆ ಮಾತನಾಡುತ್ತಿದ್ದರು, ಕೋವಿಡ್ ಸಾಂಕ್ರಾಮಿಕ ರೋಗವು ಸಂಬಂಧಗಳನ್ನು ಬಿಗಡಾಯಿಸುವವರೆಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಬಲವಾದ ಬಾಂಧವ್ಯವನ್ನು ಹೊಂದಿದ್ದಾಗಿ ಹೇಳಿದರು.

ನಂತರ ಅವರು ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನ ಪರಿಸ್ಥಿತಿ ಬಗ್ಗೆ ಮಾತನಾಡಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದರು. ಆದರೆ ಭಾರತವು ಈ ಪ್ರಸ್ತಾಪವನ್ನು ತ್ವರಿತವಾಗಿ ನಿರಾಕರಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT