ವಾಷಿಂಗ್ಟನ್‌ನಲ್ಲಿರುವ ಶ್ವೇತಭವನದ ಓವಲ್ ಕಚೇರಿಯಲ್ಲಿ ಎಲೋನ್ ಮಸ್ಕ್ ಮಾತನಾಡುತ್ತಿರುವಾಗ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಲಿಸುತ್ತಿರುವುದು 
ವಿದೇಶ

ಭಾರತಕ್ಕೆ ಟೆಸ್ಲಾ ಪ್ರವೇಶ: ಅದರಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತದೆ; ಡೊನಾಲ್ಡ್ ಟ್ರಂಪ್ ಅಪಸ್ವರ

ಜಗತ್ತಿನ ಪ್ರತಿಯೊಂದು ದೇಶವು ನಮ್ಮಿಂದ ಲಾಭ ಮಾಡಿಕೊಳ್ಳುತ್ತಿವೆ. ಸುಂಕದ ಮೂಲಕ ಮಾಡುತ್ತಿದ್ದಾರೆ.

ವಾಷಿಂಗ್ಟನ್: ಎಲೋನ್ ಮಸ್ಕ್ ಅವರ ಟೆಸ್ಲಾ ಕಂಪನಿಯು ಭಾರತದಲ್ಲಿ ಸುಂಕಗಳನ್ನು ತಪ್ಪಿಸಲು ಕಾರ್ಖಾನೆಯನ್ನು ನಿರ್ಮಿಸಿದರೆ, ಅದು ಅಮೆರಿಕಕ್ಕೆ ಅನ್ಯಾಯವಾಗುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಸುಂಕ ಹೆಚ್ಚಳ ಬಗ್ಗೆ ಡೊನಾಲ್ಡ್ ಟ್ರಂಪ್ ಕ್ರಮದ ಮಧ್ಯೆ ಈ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 13 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತ ನಡೆಸುವ ಮೊದಲು, ಅಮೆರಿಕ ಅಧ್ಯಕ್ಷರು ಪರಸ್ಪರ ಸುಂಕಗಳನ್ನು ಘೋಷಿಸಿದ್ದರು.

ಫಾಕ್ಸ್ ನ್ಯೂಸ್‌ನ ಸೀನ್ ಹ್ಯಾನಿಟಿ ಅವರೊಂದಿಗಿನ ಇತ್ತೀಚಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಡೊನಾಲ್ಡ್ ಟ್ರಂಪ್, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಸುಂಕಗಳನ್ನು ವಿಧಿಸುತ್ತದೆ ಎಂದು ಹೇಳಿದ್ದರು. ಭಾರತದಲ್ಲಿ ಕಾರನ್ನು ಮಾರಾಟ ಮಾಡುವುದು ಮಸ್ಕ್ ಅವರಿಗೆ ಅಸಾಧ್ಯ ಎಂದಿದ್ದರು.

ಜಗತ್ತಿನ ಪ್ರತಿಯೊಂದು ದೇಶವು ನಮ್ಮಿಂದ ಲಾಭ ಮಾಡಿಕೊಳ್ಳುತ್ತಿವೆ. ಸುಂಕದ ಮೂಲಕ ಮಾಡುತ್ತಿದ್ದಾರೆ. ಪ್ರಾಯೋಗಿಕವಾಗಿ ಹೇಳುವುದಾದರೆ ಭಾರತದಲ್ಲಿ ಕಾರು ಮಾರಾಟ ಮಾಡಲು ಸಾಧ್ಯವಿಲ್ಲ ಎಂದರು. ಮಸ್ಕ್ ಭಾರತದಲ್ಲಿ ಕಾರ್ಖಾನೆಯನ್ನು ನಿರ್ಮಿಸಿದರೆ, ಅದು ಸರಿ, ಆದರೆ ಅದು ನಮಗೆ ಅನ್ಯಾಯವಾಗಿದೆ. ಇದು ತುಂಬಾ ಅನ್ಯಾಯವಾಗಿದೆ" ಎಂದು ಟ್ರಂಪ್ ಸಂದರ್ಶನದಲ್ಲಿ ಹೇಳಿದರು.ನಮಗೆ ಅನ್ಯಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥರಾಗಿರುವ ಮಸ್ಕ್ ಕೂಡ ಸಂದರ್ಶನದ ಸಮಯದಲ್ಲಿ ಹಾಜರಿದ್ದರು. ಕೆಲವು ದಿನಗಳ ಹಿಂದೆ, ಎಲೆಕ್ಟ್ರಿಕ್ ಕಾರು ತಯಾರಕ ಟೆಸ್ಲಾ ಭಾರತದಲ್ಲಿ ವ್ಯಾಪಾರ ಕಾರ್ಯಾಚರಣೆ ವಿಶ್ಲೇಷಕ ಮತ್ತು ಗ್ರಾಹಕ ಬೆಂಬಲ ತಜ್ಞ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ತೆರೆಯಿತು. ಈ ಕ್ರಮವನ್ನು ಕಂಪನಿಯು ದೇಶಕ್ಕೆ ಪ್ರವೇಶವೆಂದು ನೋಡುತ್ತದೆ.

ಕಂಪನಿಯ ವೆಬ್‌ಸೈಟ್‌ನಲ್ಲಿರುವ ಉದ್ಯೋಗ ಪೋಸ್ಟಿಂಗ್‌ಗಳ ಪ್ರಕಾರ, ಹುದ್ದೆಗಳು 'ಮುಂಬೈ ಸಬರ್ಬನ್' ಪ್ರದೇಶಕ್ಕೆ ಆಗಿದೆ. ನಾನು ಮೋದಿಯವರ ಜೊತೆ ಇತ್ತೀಚೆಗೆ ಮಾತನಾಡುವ ವೇಳೆ ನೀವು ಶೇಕಡಾ 100ರಷ್ಟು ಸುಂಕ ವಿಧಿಸಿದರೆ ನಾವು ಕೂಡ ಅಷ್ಟೇ ವಿಧಿಸುತ್ತೇವೆ ಎಂದು ಹೇಳಿದ್ದೆ. ಅದಕ್ಕೆ ಮಸ್ಕ್ ಅವರು ಆಟೋ ಆಮದು ಸುಂಕ ಶೇಕಡಾ 100ರಷ್ಟು, ಅದು ಸರಿಯಾದದ್ದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT