ಪಾಕಿಸ್ತಾನ ಪ್ರಧಾನಿ ಶಹಬಾಶ್ ಷರೀಫ್ 
ವಿದೇಶ

'ಭಾರತವನ್ನು ಹಿಂದಿಕ್ಕದಿದ್ದರೆ ಹೆಸರು ಬದಲಿಸಿಕೊಳ್ಳುತ್ತೇನೆ': ಪಾಕಿಸ್ತಾನ ಪ್ರಧಾನಿ Shehbaz sharif ಮತ್ತೆ ಟ್ರೋಲ್, Video

ಕ್ರಿಕೆಟ್ ವಿಚಾರವಾಗಿ ಮಾತ್ರವಲ್ಲ.. ಕ್ರಿಕೆಟೇತರ ವಿಚಾರವಾಗಿಯೂ ಪಾಕಿಸ್ತಾನ ಸುದ್ದಿಯಾಗುತ್ತಿದ್ದು, ಈ ಬಾರಿ ಭಾರತವನ್ನು ಹಿಂದಿಕ್ಕುವ ವಿಚಾರದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಶ್ ಷರೀಫ್ ಟ್ರೋಲ್ ಗೆ ತುತ್ತಾಗಿದ್ದಾರೆ.

ಇಸ್ಲಾಮಾಬಾದ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧ ಸೋತು ಟೂರ್ನಿಯಿಂದಲೇ ಹೊರಬಿದ್ದಿರುವ ಪಾಕಿಸ್ತಾನ ದಿನಕ್ಕೊಂದು ವಿಚಾರವಾಗಿ ಸುದ್ದಿಗೆ ಗ್ರಾಸವಾಗುತ್ತಿದೆ.

ಕ್ರಿಕೆಟ್ ವಿಚಾರವಾಗಿ ಮಾತ್ರವಲ್ಲ.. ಕ್ರಿಕೆಟೇತರ ವಿಚಾರವಾಗಿಯೂ ಪಾಕಿಸ್ತಾನ ಸುದ್ದಿಯಾಗುತ್ತಿದ್ದು, ಈ ಬಾರಿ ಭಾರತವನ್ನು ಹಿಂದಿಕ್ಕುವ ವಿಚಾರದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಶ್ ಷರೀಫ್ ಟ್ರೋಲ್ ಗೆ ತುತ್ತಾಗಿದ್ದಾರೆ. ಆರ್ಥಿಕ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಪಾಕಿಸ್ತಾನ ಭಾರತವನ್ನು ಮೀರಿಸಲು ವಿಫಲವಾದರೆ ತಮ್ಮ ಹೆಸರು ಬದಲಿಸಿಕೊಳ್ಳುವುದಾಗಿ ಶಹಬಾಜ್ ಷರೀಫ್ ಪ್ರತಿಜ್ಞೆ ಮಾಡಿದ್ದಾರೆ.

ಶನಿವಾರ ಪಂಜಾಬ್‌ನ ಡೇರಾ ಘಾಜಿ ಖಾನ್‌ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್, ಗಾಳಿಯಲ್ಲಿ ಮೇಜು ಗುದ್ದುತ್ತಾ ಎದೆ ಬಡಿದುಕೊಳ್ಳುತ್ತಾ ಆರ್ಥಿಕ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಪಾಕಿಸ್ತಾನ ಭಾರತವನ್ನು ಮೀರಿಸಲು ವಿಫಲವಾದರೆ ತಮ್ಮ ಹೆಸರು ಬದಲಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಪಾಕಿಸ್ತಾನವನ್ನು ಅಭಿವೃದ್ಧಿ ಪಡಿಸಲು ನಮ್ಮ ಸರ್ಕಾರ ಸಾಕಷ್ಟು ಪ್ರಯತ್ನಿಸುತ್ತಿದೆ. ನಮ್ಮ ಪ್ರಯತ್ನಗಳಿಂದಾಗಿ ಪಾಕಿಸ್ತಾನ ಅಭಿವೃದ್ಧಿ ಮತ್ತು ಪ್ರಗತಿಯ ವಿಷಯದಲ್ಲಿ ಭಾರತವನ್ನು ಹಿಂದಿಕ್ಕದಿದ್ದರೆ ನನ್ನ ಹೆಸರು ಬದಲಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಅಂತೆಯೇ "ನಾನು ನವಾಜ್ ಷರೀಫ್ ಅವರ ಅಭಿಮಾನಿ, ಅವರ ಅನುಯಾಯಿ. ಇಂದು, ನಾನು ಅವರ ಆಶೀರ್ವಾದ ಜೀವನದ ಮೇಲೆ ಪ್ರತಿಜ್ಞೆ ಮಾಡುತ್ತೇನೆ, ನನಗೆ ಶಕ್ತಿ ಮತ್ತು ಇಚ್ಛಾಶಕ್ತಿ ಇರುವವರೆಗೂ, ನಾವೆಲ್ಲರೂ ಒಟ್ಟಾಗಿ ಪಾಕಿಸ್ತಾನವನ್ನು ಶ್ರೇಷ್ಠತೆಯತ್ತ ಕೊಂಡೊಯ್ಯಲು ಮತ್ತು ಭಾರತವನ್ನು ಸೋಲಿಸಲು ಕೆಲಸ ಮಾಡುತ್ತೇವೆ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT