ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ 
ವಿದೇಶ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ.

ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ.

"...ಪಕ್ಷವು ತನ್ನ ಮುಂದಿನ ನಾಯಕನನ್ನು ಆಯ್ಕೆ ಮಾಡಿದ ನಂತರ ನಾನು ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ...ಕಳೆದ ರಾತ್ರಿ ನಾನು ಲಿಬರಲ್ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪ್ರಕ್ರಿಯೆ ಆರಂಭಿಸುವಂತೆ ಕೇಳಿಕೊಂಡಿದ್ದೇನೆ.." ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ.

"ಆಂತರಿಕ ಕಲಹಗಳು" ಮುಂದಿನ ಚುನಾವಣೆಯಲ್ಲಿ "ಅತ್ಯುತ್ತಮ ಆಯ್ಕೆಯಾಗಲು ಸಾಧ್ಯವಿಲ್ಲ" ಎಂದು ಟ್ರೂಡೊ ಹೇಳಿದ್ದು, ಲಿಬರಲ್ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ತಾವು ಪ್ರಧಾನಿಯಾಗಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಟ್ರುಡೊ ಅವರು ತಮ್ಮ ಲಿಬರಲ್ ಪಕ್ಷದೊಳಗೆ ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತಿರುವ ಕಾರಣ ರಾಜೀನಾಮೆ ನೀಡಿದ್ದಾರೆ.

ಬುಧವಾರ ಒಟ್ಟಾವೊದಲ್ಲಿ ಲಿಬರಲ್‌ ಪಕ್ಷದ ಕಾಕಸ್ ಸಮಿತಿ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಟ್ರುಡೋ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಒಂದು ತಿಂಗಳಿನಿಂದ ಟ್ರುಡೊ ನೇತೃತ್ವದ ಲಿಬರಲ್‌ ಪಕ್ಷದ ಸರ್ಕಾರದಲ್ಲಿ ಆಂತರಿಕ ಕಲಹ ಉಂಟಾಗಿದೆ. ಟ್ರುಡೊ ನಾಯಕತ್ವದ ವಿರುದ್ದ ಅವರ ಪಕ್ಷದ ಸಂಸದರೇ ಅಪಸ್ವರ ಎತ್ತಿದ್ದಾರೆ. ಹಣಕಾಸು ಸಚಿವೆ ಕ್ರಿಸ್ಟಿನಾ ಫ್ರಿಲ್ಯಾಂಡ್ ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಖಲಿಸ್ತಾನ್ ಪ್ರತ್ಯೇಕವಾದಿಗಳ ವಿಚಾರದಲ್ಲೂ ಟ್ರುಡೊ ನಾಯಕತ್ವ ಮತ್ತು ಭಾರತದ ನಡುವೆ ಸಂಬಂಧ ಹಳಸಿದೆ. ಟ್ರುಡೊ ಸರ್ಕಾರ ಕೆನಡಾದಲ್ಲಿರುವ ಖಲಿಸ್ತಾನಿಗಳ ಪರ ಹೇಳಿಕೆ ನೀಡುತ್ತಿರುವುದನ್ನು ಭಾರತ ಖಂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT