ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ 
ವಿದೇಶ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ.

ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ.

"...ಪಕ್ಷವು ತನ್ನ ಮುಂದಿನ ನಾಯಕನನ್ನು ಆಯ್ಕೆ ಮಾಡಿದ ನಂತರ ನಾನು ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ...ಕಳೆದ ರಾತ್ರಿ ನಾನು ಲಿಬರಲ್ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪ್ರಕ್ರಿಯೆ ಆರಂಭಿಸುವಂತೆ ಕೇಳಿಕೊಂಡಿದ್ದೇನೆ.." ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ.

"ಆಂತರಿಕ ಕಲಹಗಳು" ಮುಂದಿನ ಚುನಾವಣೆಯಲ್ಲಿ "ಅತ್ಯುತ್ತಮ ಆಯ್ಕೆಯಾಗಲು ಸಾಧ್ಯವಿಲ್ಲ" ಎಂದು ಟ್ರೂಡೊ ಹೇಳಿದ್ದು, ಲಿಬರಲ್ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ತಾವು ಪ್ರಧಾನಿಯಾಗಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಟ್ರುಡೊ ಅವರು ತಮ್ಮ ಲಿಬರಲ್ ಪಕ್ಷದೊಳಗೆ ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತಿರುವ ಕಾರಣ ರಾಜೀನಾಮೆ ನೀಡಿದ್ದಾರೆ.

ಬುಧವಾರ ಒಟ್ಟಾವೊದಲ್ಲಿ ಲಿಬರಲ್‌ ಪಕ್ಷದ ಕಾಕಸ್ ಸಮಿತಿ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಟ್ರುಡೋ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಒಂದು ತಿಂಗಳಿನಿಂದ ಟ್ರುಡೊ ನೇತೃತ್ವದ ಲಿಬರಲ್‌ ಪಕ್ಷದ ಸರ್ಕಾರದಲ್ಲಿ ಆಂತರಿಕ ಕಲಹ ಉಂಟಾಗಿದೆ. ಟ್ರುಡೊ ನಾಯಕತ್ವದ ವಿರುದ್ದ ಅವರ ಪಕ್ಷದ ಸಂಸದರೇ ಅಪಸ್ವರ ಎತ್ತಿದ್ದಾರೆ. ಹಣಕಾಸು ಸಚಿವೆ ಕ್ರಿಸ್ಟಿನಾ ಫ್ರಿಲ್ಯಾಂಡ್ ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಖಲಿಸ್ತಾನ್ ಪ್ರತ್ಯೇಕವಾದಿಗಳ ವಿಚಾರದಲ್ಲೂ ಟ್ರುಡೊ ನಾಯಕತ್ವ ಮತ್ತು ಭಾರತದ ನಡುವೆ ಸಂಬಂಧ ಹಳಸಿದೆ. ಟ್ರುಡೊ ಸರ್ಕಾರ ಕೆನಡಾದಲ್ಲಿರುವ ಖಲಿಸ್ತಾನಿಗಳ ಪರ ಹೇಳಿಕೆ ನೀಡುತ್ತಿರುವುದನ್ನು ಭಾರತ ಖಂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT