TNIE
ವಿದೇಶ

ಕೆನಡಾ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ನಿಜ್ಜರ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು!

ಈ ನಾಲ್ವರು ಭಾರತೀಯರನ್ನು ಕರಣ್ ಬ್ರಾರ್, ಅಮನ್‌ದೀಪ್ ಸಿಂಗ್, ಕಮಲ್‌ಪ್ರೀತ್ ಸಿಂಗ್ ಮತ್ತು ಕರಣ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ 2024ರ ನವೆಂಬರ್ ನಲ್ಲಿ ಆರೋಪಪಟ್ಟಿ ಸಲ್ಲಿಸಲಾಯಿತು.

ನವದೆಹಲಿ: ಖಲಿಸ್ತಾನ್ ಪರ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡಾ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 11ರಂದು ನಡೆಯಲಿದೆ. ವಿಚಾರಣೆಗೆ ತಡೆಯಾಜ್ಞೆ ನೀಡಿ ನಾಲ್ವರು ಆರೋಪಿಗಳಿಗೂ ಜಾಮೀನು ನೀಡಲಾಗಿದೆ.

ಈ ನಾಲ್ವರು ಭಾರತೀಯರನ್ನು ಕರಣ್ ಬ್ರಾರ್, ಅಮನ್‌ದೀಪ್ ಸಿಂಗ್, ಕಮಲ್‌ಪ್ರೀತ್ ಸಿಂಗ್ ಮತ್ತು ಕರಣ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ 2024ರ ನವೆಂಬರ್ ನಲ್ಲಿ ಆರೋಪಪಟ್ಟಿ ಸಲ್ಲಿಸಲಾಯಿತು. ಹತ್ಯೆ ಆರೋಪ ಹೊತ್ತಿದ್ದವರು ಕೆನಡಾದ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಿದ್ದರು.

ಹರ್ದೀಪ್ ಸಿಂಗ್ ನಿಜ್ಜರ್ ನನ್ನು 2023ರ ಜೂನ್ ನಲ್ಲಿ ಕೆನಡಾದ ಸರ್ರೆಯಲ್ಲಿ ಕೊಲೆ ಮಾಡಲಾಗಿತು. ಕೊಲೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿತು. ಈ ಕೊಲೆಗೆ ಸಂಬಂಧಿಸಿದಂತೆ, ಆಗಿನ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾರತ ಸರ್ಕಾರದ ಏಜೆಂಟರ ಮೇಲೆ ಆರೋಪ ಹೊರಿಸಿದ್ದರು. ಭಾರತ ಸರ್ಕಾರ ಈ ಆರೋಪವನ್ನು ಆಧಾರರಹಿತ ಎಂದು ಕರೆದಿತ್ತು. ಟ್ರುಡೊ ಅವರ ಈ ಹೇಳಿಕೆಯ ನಂತರ, ಕೆನಡಾ ಮತ್ತು ಭಾರತದ ನಡುವಿನ ಸಂಬಂಧಗಳು ಸಾಕಷ್ಟು ಹದಗೆಟ್ಟಿತ್ತು.

ಪರಿಸ್ಥಿತಿ ಜಟಿಲವಾಗುತ್ತಿದ್ದಂತೆ ಜಸ್ಟಿನ್ ಟ್ರುಡೋ ವಿರುದ್ಧ ಪಕ್ಷದಲ್ಲೇ ಅಸಮಾಧಾನ ಭುಗಿಲೆದ್ದಿತ್ತು. ಹೀಗಾಗಿ ಮೊನ್ನೆಯಷ್ಟೇ ತಮ್ಮ ಪ್ರಧಾನಿ ಹುದ್ದೆಗೆ ರಾಜಿನಾಮೆ ನೀಡಬೇಕಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT