ಹಸು ಸಾಕಣಿಕಾ ಕೇಂದ್ರ (ಸಾಂದರ್ಭಿಕ ಚಿತ್ರ) 
ವಿದೇಶ

ಕಾಮೋದ್ರೇಕ ತಂದ ಆಪತ್ತು; Rape ಮಾಡಲು ಬಂದವನ ಒದ್ದು ಕೊಂದ ಹಸು!

ಕೃಷಿ ಕಾರ್ಮಿಕನಾಗಿದ್ದ ಆತ ಹಸುಗಳನ್ನು ಕಟ್ಟಿಹಾಕಿದ್ದ ಜಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ, ಆತ ಕಾಂಡೋಮ್ ಧರಿಸಿದ್ದ ಎನ್ನಲಾಗಿದೆ. ಪಕ್ಕದಲ್ಲೇ ಹೊದಿಕೆಯೂ ಇತ್ತು.

ಸಮಂಬಾಯ: ದೂರ್ತನೋರ್ವ ಹಸುವಿನ ಮೇಲೆ ಅತ್ಯಾಚಾರವೆಸಗಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಮಂಗಳವಾರ ವರದಿಯಾಗಿದೆ.

ಹೌದು... ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದ್ದು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿರುವ ಘಟನೆ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ. ಇದರ ನಡುವೆಯೇ ಹಸುಗಳ ಮೇಲೆ ಅತ್ಯಾಚಾರಕ್ಕೆ ಮುಂದಾಗಿ ಪ್ರಾಣವನ್ನೇ ಕಳೆದುಕೊಂಡಿರುವ ದೂರ್ತನೋರ್ವನ ಸುದ್ದಿ ಬ್ರೆಜಿಲ್ ನಲ್ಲಿ ವ್ಯಾಪಕ ವೈರಲ್ ಆಗಿದೆ.

ಹೌದು.. ಬ್ರೆಜಿಲ್​ನ ಸಮಂಬಾಯ ಜಿಲ್ಲೆಯ ಲಾಜೆ ಡ ಜಿಬೋಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ವ್ಯಕ್ತಿಯನ್ನು ತನ್ನ ರಕ್ಷಣೆಗಾಗಿ ಒದ್ದು ಕೊಂದು ಹಾಕಿದೆ. ಪ್ರಜ್ಞಾಹೀನನಾಗಿ ಬಿದ್ದಿದ್ದವನನನ್ನು ಆತನ ಸ್ನೇಹಿತರು ನೋಡಿ ಪೊಲೀಸರಿಗೆ ಕರೆ ಮಾಡಿದಾಗ ವಿಚಾರ ಬಯಲಾಗಿದೆ.

ಕಾಂಡೋಮ್ ಹೇಳಿದ ಸತ್ಯ

ಇನ್ನು ಮೂಲತಃ ಕೃಷಿ ಕಾರ್ಮಿಕನಾಗಿದ್ದ ಆತ ಹಸುಗಳನ್ನು ಕಟ್ಟಿಹಾಕಿದ್ದ ಜಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ, ಆತ ಕಾಂಡೋಮ್ ಧರಿಸಿದ್ದ ಎನ್ನಲಾಗಿದೆ. ಪಕ್ಕದಲ್ಲೇ ಹೊದಿಕೆಯೂ ಇತ್ತು. ಆತ ಸಾಯುವ ಮೊದಲು ಅಂದರೆ ಘಟನೆಯ ಹಿಂದಿನ ರಾತ್ರಿ ತನ್ನ ಸ್ನೇಹಿತರ ಜೊತೆ ಮದ್ಯಪಾನ ಸೇವಿಸಿದ್ದ.

ಬಳಿಕ ಬೆಳಗ್ಗೆ 5 ಗಂಟೆ ಸುಮಾರಿನಲ್ಲಿ ಹಾಲು ಕರೆಯಲು ಹೋದಾಗ ಹಸುವಿನೊಂದಿಗೆ ಸಂಭೋಗಕ್ಕೆ ಮುಂದಾಗಿದ್ದಾನೆ. ಈ ವೇಳೆ ಹಸು ಆತನ ಹಣೆಗೆ ಒದ್ದಿದೆ. ಈ ವೇಳೆ ಆತ ಪ್ರಜ್ಞಾಹೀನನಾಗಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದು ಆತನ ಸಾವಿಗೀಡಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರಂಭದಲ್ಲಿ ಆತ ಪ್ರಜ್ಞಾಹೀನನಾಗಿದ್ದಾನೆ ಎಂದು ಭಾವಿಸಿದ್ದ ಆತನ ಸ್ನೇಹಿತ ಆತನನ್ನು ಆ ಸ್ಥಳದಿಂದ ಬೇರೆಡೆಗೆ ಕರೆದೊಯ್ಯಲು ಪ್ರಯತ್ನಿಸಿದ್ದ. ಆದರೆ ಆತ ಎಚ್ಚರಗೊಳ್ಳದಿದ್ದಾಗ ವೈದ್ಯರು ಮತ್ತು ಪೊಲೀಸರು ಬಂದು ಪರಿಶೀಲಿಸಿದಾಗ ಆತನ ಸಾವಿಗೀಡಾಗಿರುವುದು ಖಚಿತವಾಗಿದೆ.

ಮೇಕೆಯ ಮೇಲೂ ಅತ್ಯಾಚಾರ

ಇನ್ನು ಮೂಕಪ್ರಾಣಿಗಳ ಮೇಲಿನ ದೌರ್ಜನ್ಯ ಇದೇ ಮೊದಲೇನಲ್ಲ.. ಈ ಹಿಂದೆ ಮ್ಯಾಡ್ರಿಡ್​ನಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಮೇಕೆಯ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT