ಡೊನಾಲ್ಡ್ ಟ್ರಂಪ್ 
ವಿದೇಶ

ಪಾಕಿಸ್ತಾನಕ್ಕೆ ಅಮೆರಿಕಾ ಹೊಡೆತ: ವಿದೇಶಿ ನೆರವು ಸ್ಥಗಿತಗೊಳಿಸಿದ ಡೊನಾಲ್ಡ್ ಟ್ರಂಪ್?

' ಸಾಂಸ್ಕೃತಿಕ ಸಂರಕ್ಷಣೆಗಾಗಿ ರಾಯಭಾರಿಗಳ ನಿಧಿ' ಯೋಜನೆ ಸೇರಿದಂತೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿನ ಅಮೆರಿಕದ ಏಜೆನ್ಸಿಯ (USAID)ಹಲವು ಯೋಜನೆಗಳು ಸ್ಥಗಿತಗೊಂಡಿವೆ.

ಇಸ್ಲಾಮಾಬಾದ್: ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾದ ಮೇಲೆ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಅವರು ಹೊರಡಿಸಿರುವ ಕಾರ್ಯನಿರ್ವಾಹಕ ಆದೇಶದ ನಂತರ ಅಮೆರಿಕ ಪಾಕಿಸ್ತಾನಕ್ಕೆ ನೀಡುವ ವಿದೇಶಿ ನೆರವನ್ನು ಮರು ಮೌಲ್ಯಮಾಪನದ ಉದ್ದೇಶದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ.

ಅಮೆರಿಕದ ಈ ನಿರ್ಧಾರದಿಂದ ಸಾಂಸ್ಕೃತಿಕ ಪರಂಪರೆ ಸಂರಕ್ಷಣೆ ಪ್ರೋತ್ಸಾಹಿಸುವ ' ಸಾಂಸ್ಕೃತಿಕ ಸಂರಕ್ಷಣೆಗಾಗಿ ರಾಯಭಾರಿಗಳ ನಿಧಿ' ಯೋಜನೆ ಸೇರಿದಂತೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿನ ಅಮೆರಿಕದ ಏಜೆನ್ಸಿಯ (USAID)ಹಲವು ಯೋಜನೆಗಳು ಸ್ಥಗಿತಗೊಂಡಿವೆ.

ಟ್ರಂಪ್ ನಿರ್ಧಾರದಿಂದ ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ನಾಲ್ಕು ಯೋಜನೆಗಳು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಐದು ಯೋಜನೆಗಳು ಕೂಡ ಸ್ಥಗಿತಗೊಂಡಿವೆ ಎಂದು ವರದಿ ತಿಳಿಸಿದೆ.ಅವುಗಳಲ್ಲಿ ಸಾಮಾಜಿಕ ರಕ್ಷಣೆ ಚಟುವಟಿಕೆಗೆ ಸಂಬಂಧಿಸಿದ ಕಾರ್ಯಕ್ರಮ 2025ರ ಅಂತ್ಯದಲ್ಲಿ ರದ್ದಾಗಬಹುದು.

ಅಮೆರಿಕದ ಕ್ರಮವು ಆರೋಗ್ಯ, ಕೃಷಿ, ಜೀವನೋಪಾಯ ಮತ್ತು ಆಹಾರ ಭದ್ರತೆ, ಪ್ರವಾಹ, ಹವಾಮಾನ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳಿಗೂ ಹೊಡೆತ ನೀಡಿದೆ. ಟ್ರಂಪ್ ಅವರ ಆದೇಶದಿಂದ ಪ್ರಜಾಪ್ರಭುತ್ವ, ಮಾನವ ಹಕ್ಕುಗಳು ಮತ್ತು ಆಡಳಿತ ನಿಧಿಗಳಿಗೂ ಹೊಡೆತ ಬಿದ್ದಿದೆ. ಈ ಕೆಲವು ಕಾರ್ಯಕ್ರಮಗಳು ಶಾಶ್ವತವಾಗಿ ಸ್ಥಗಿತಗೊಳ್ಳುತ್ತವೆ ಅಥವಾ ಕನಿಷ್ಠ ಗಮನಾರ್ಹವಾಗಿ ಕಡಿಮೆಯಾಗುತ್ತವೆ ಎಂಬ ಭಯವನ್ನು ವ್ಯಕ್ತಪಡಿಸಲಾಗುತ್ತಿದೆ.

ಆದಾಗ್ಯೂ, ಈ ಯೋಜನೆಗಳ ಒಟ್ಟು ಮೌಲ್ಯವು ತಿಳಿದಿಲ್ಲ, ಏಕೆಂದರೆ ಅಮೆರಿಕ ಪ್ರಸ್ತುತ ಪಾಕಿಸ್ತಾನಕ್ಕೆ ಎಷ್ಟು ವಾರ್ಷಿಕ ನೆರವು ನೀಡುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ. ಪಾಕಿಸ್ತಾನಕ್ಕೆ ನೆರವು ಸ್ಥಗಿತದ ಟ್ರಂಪ್‌ರ ಕಾರ್ಯನಿರ್ವಾಹಕ ಕ್ರಮಗಳ ಬೆಳವಣಿಗೆ ಮತ್ತು ಪರಿಣಾಮವನ್ನು ಪಾಕಿಸ್ತಾನದ ಅಧಿಕಾರಿಗಳು ಇಲ್ಲಿಯವರೆಗೆ ದೃಢಪಡಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!