ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಮತ್ತು ಜಪಾನ್ ವಿದೇಶಾಂಗ ಸಚಿವ ಟಕೇಶಿ ಇವಾಯಾ  
ವಿದೇಶ

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ Quad ನಾಯಕರು: ಅಪರಾಧಿಗಳಿಗೆ ತಕ್ಕ ಶಿಕ್ಷೆಗೆ ಒತ್ತಾಯ

ವಾಷಿಂಗ್ಟನ್‌ನಲ್ಲಿ ನಡೆದ ಸಭೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, ವಿದೇಶಾಂಗ ಸಚಿವರು ಪಹಲ್ಗಾಮ್ ದಾಳಿಯ ಅಪರಾಧಿಗಳು, ಸಂಘಟಕರು ಮತ್ತು ಹಣಕಾಸು ಒದಗಿಸುವವರಿಗೆ ಶಿಕ್ಷೆ ನೀಡಬೇಕೆಂದು ತುರ್ತು ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಕರೆ ನೀಡಿದರು.

ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ಒಳಗೊಂಡ ಕ್ವಾಡ್ ಗುಂಪು, ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ, ಇದರಲ್ಲಿ 25 ಭಾರತೀಯ ಪ್ರಜೆಗಳು ಮತ್ತು ಒಬ್ಬ ನೇಪಾಳಿ ಪ್ರಜೆ ಸೇರಿದಂತೆ 26 ನಾಗರಿಕರು ಮೃತಪಟ್ಟಿದ್ದರು.

ವಾಷಿಂಗ್ಟನ್‌ನಲ್ಲಿ ನಡೆದ ಸಭೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, ವಿದೇಶಾಂಗ ಸಚಿವರು ಪಹಲ್ಗಾಮ್ ದಾಳಿಯ ಅಪರಾಧಿಗಳು, ಸಂಘಟಕರು ಮತ್ತು ಹಣಕಾಸು ಒದಗಿಸುವವರಿಗೆ ಶಿಕ್ಷೆ ನೀಡಬೇಕೆಂದು ತುರ್ತು ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಕರೆ ನೀಡಿದರು.

ದಾಳಿಗೆ ಕಾರಣರಾದವರನ್ನು ವಿಳಂಬವಿಲ್ಲದೆ ಹೊಣೆಗಾರರನ್ನಾಗಿ ಮಾಡುವ ಮಹತ್ವವನ್ನು ಕ್ವಾಡ್ ಸಭೆಯಲ್ಲಿ ವಿದೇಶಾಂಗ ಸಚಿವರು ಒತ್ತಿ ಹೇಳಿದರು, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಅಂತಾರಾಷ್ಟ್ರೀಯ ಕಾನೂನು ಮತ್ತು ಸಂಬಂಧಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳಿಗೆ ಅನುಗುಣವಾಗಿ ಸಂಪೂರ್ಣ ಸಹಕಾರವನ್ನು ವಿಸ್ತರಿಸಬೇಕೆಂದು ಒತ್ತಾಯಿಸಿದರು.

ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಪಾಕಿಸ್ತಾನವನ್ನು ಹೆಸರಿಸದಿದ್ದರೂ ಅಥವಾ ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಾಲ್ಕು ದಿನಗಳ ಮಿಲಿಟರಿ ಬಿಕ್ಕಟ್ಟನ್ನು ಉಲ್ಲೇಖಿಸದಿದ್ದರೂ, ಭಯೋತ್ಪಾದನೆಯನ್ನು ಎದುರಿಸಲು ಮತ್ತು ಗಡಿಯಾಚೆಗಿನ ಬೆದರಿಕೆಗಳನ್ನು ನಿಭಾಯಿಸಲು ಕ್ವಾಡ್‌ನ ಸಾಮೂಹಿಕ ಬದ್ಧತೆಯನ್ನು ಪುನರುಚ್ಚರಿಸಿದೆ.

ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಮತ್ತು ಜಪಾನಿನ ವಿದೇಶಾಂಗ ಸಚಿವ ಟಕೇಶಿ ಇವಾಯಾ ಭಾಗವಹಿಸಿದ್ದರು.

ಅಂತಾರಾಷ್ಟ್ರೀಯ ಸಮುದಾಯವು ಎಲ್ಲಾ ರೀತಿಯ ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ