ಪೇಶಾವರದಲ್ಲಿನ ಮಳೆ ಚಿತ್ರ 
ವಿದೇಶ

ಪಾಕಿಸ್ತಾನದ ಮೇಲೆ ವರುಣನ ವಕ್ರದೃಷ್ಟಿ: ಮಳೆ ಸಂಬಂಧಿತ ಅನಾಹುತಗಳಲ್ಲಿ 223 ಜನ ಸಾವು!

ಕಳೆದ 24 ಗಂಟೆಗಳಲ್ಲಿ ಇಬ್ಬರು ಪುರುಷರು ಸೇರಿದಂತೆ ಇಬ್ಬರು ಮಹಿಳೆಯರು, ಎಂಟು ಮಕ್ಕಳು ಸಾವನ್ನಪ್ಪಿದ್ದರೆ, ಇತರ 10 ಮಂದಿ ಮಳೆ ಸಂಬಂಧಿತ ಘಟನೆಗಳಲ್ಲಿ ಗಾಯಗೊಂಡಿದ್ದಾರೆ.

ಪೇಶಾವರ: ಭಾರತದ ವಿರುದ್ಧ ಯಾವಾಗಲೂ ಕತ್ತಿ ಮಸಿಯುವ ಶತ್ರುರಾಷ್ಟ್ರ ಪಾಕಿಸ್ತಾನದ ಮೇಲೆ ವರುಣ ವಕ್ರದೃಷ್ಟಿ ಬೀರಿದ್ದು, ಕಳೆದ 24 ಗಂಟೆಗಳಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮಳೆ ಸಂಬಂಧಿತ ಅನಾಹುತಗಳಲ್ಲಿ ಮೃತಪಟ್ಟವರ ಸಂಖ್ಯೆ 223ಕ್ಕೆ ಏರಿಕೆಯಾಗಿದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಮಂಗಳವಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಇಬ್ಬರು ಪುರುಷರು ಸೇರಿದಂತೆ ಇಬ್ಬರು ಮಹಿಳೆಯರು, ಎಂಟು ಮಕ್ಕಳು ಸಾವನ್ನಪ್ಪಿದ್ದರೆ, ಇತರ 10 ಮಂದಿ ಮಳೆ ಸಂಬಂಧಿತ ಘಟನೆಗಳಲ್ಲಿ ಗಾಯಗೊಂಡಿದ್ದಾರೆ. ಈ ಮುಂಗಾರು ಅವಧಿಯಲ್ಲಿ ಭಾರಿ ಮಳೆಯಿಂದಾಗಿ ಇಲ್ಲಿಯವರೆಗೂ 594 ಜನರು ಗಾಯಗೊಂಡಿದ್ದಾರೆ ಎಂದು NDMA ಹೇಳಿದೆ.

ಪಂಜಾಬ್ ನಲ್ಲಿ ಅತಿ ಹೆಚ್ಚು 135 ಜನರು ಸಾವನ್ನಪ್ಪಿದ್ದು, 470 ಜನರು ಗಾಯಗೊಂಡಿದ್ದಾರೆ. ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ 56 ಜನರು ಸಾವನ್ನಪ್ಪಿದ್ದು, 72 ಜನರು ಗಾಯಗೊಂಡಿದ್ದಾರೆ. ಸಿಂಧ್ ಪ್ರಾಂತ್ಯದಲ್ಲಿ 24 ಜನರು ಮೃತಪಟ್ಟಿದ್ದರೆ 40 ಮಂದಿ ಗಾಯಗೊಂಡಿದ್ದಾರೆ.

ಬಲೋಚಿಸ್ತಾನದಲ್ಲಿ 16 ಮಂದಿ ಸಾವನ್ನಪ್ಪಿದ್ದರೆ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.ಬಹುತೇಕ ಮಂದಿ ಮನೆ ಕಟ್ಟಡ, ಪ್ರವಾಹ, ಭೂಕುಸಿತ, ಸಿಡಿಲು ಮತ್ತು ವಿದ್ಯುತ್ ಆಘಾತದಿಂದ ಸಾವನ್ನಪ್ಪಿರುವುದಾಗಿ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಂಗಾರು ಆರಂಭವಾದಾಗಿನಿಂದಲೂ 804 ಮನೆಗಳು ನೆಲಸಮಗೊಂಡಿದ್ದು, 200 ಜಾನುವಾರಗಳು ಮೃತಪಟ್ಟಿದ್ದು, ಪ್ರವಾಹ ಪೀಡಿತ ಅಥವಾ ತಗ್ಗು ಪ್ರದೇಶದಲ್ಲಿನ ಜನರು ಮುನ್ನೆಚ್ಚರಿಕೆ ವಹಿಸುವಂತೆ NDMA ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT