ಚೀನಾ-ಭಾರತ 
ವಿದೇಶ

ಐದು ವರ್ಷಗಳ ನಂತರ, ಚೀನಾ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಿದ ಭಾರತ

ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗುರುವಾರದಿಂದ ಚೀನಾ ಪ್ರಜೆಗಳು ಪ್ರವಾಸಿ ವೀಸಾಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಬೀಜಿಂಗ್: ಗಾಲ್ವಾನ್ ಕಣಿವೆಯಲ್ಲಿ ನಡೆದ ಮಿಲಿಟರಿ ಘರ್ಷಣೆಯ ನಂತರ ತೀವ್ರ ಒತ್ತಡಕ್ಕೆ ಸಿಲುಕಿದ್ದ ದ್ವಿಪಕ್ಷೀಯ ಸಂಬಂಧವನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿ ಈ ವಾರದಿಂದ ಚೀನಾ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವುದನ್ನು ಪುನರಾರಂಭಿಸುವುದಾಗಿ ಭಾರತ ಘೋಷಿಸಿದೆ.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಭಾರತ 2020 ರಲ್ಲಿ ಚೀನೀ ಪ್ರಜೆಗಳಿಗೆ ಪ್ರವಾಸಿ ವೀಸಾ ನೀಡುವುದನ್ನು ಸ್ಥಗಿತಗೊಳಿಸಿತ್ತು. ಬಳಿಕ ಪೂರ್ವ ಲಡಾಖ್ ಗಡಿ ವಿವಾದದ ಹಿನ್ನೆಲೆಯಲ್ಲಿ ಈ ನಿರ್ಬಂಧಗಳು ಮುಂದುವರೆದಿದ್ದವು.

ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗುರುವಾರದಿಂದ ಚೀನಾ ಪ್ರಜೆಗಳು ಪ್ರವಾಸಿ ವೀಸಾಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಭಾರತೀಯ ರಾಯಭಾರ ಕಚೇರಿಯು ತನ್ನ ಅಧಿಸೂಚನೆಯಲ್ಲಿ ಪ್ರವಾಸಿ ವೀಸಾಗಳಿಗೆ ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಪ್ರಕ್ರಿಯೆ, ಬೀಜಿಂಗ್, ಶಾಂಘೈ ಮತ್ತು ಗುವಾಂಗ್‌ಝೌನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಗಳಲ್ಲಿ ಚೀನೀ ಪ್ರಜೆಗಳು ಸಲ್ಲಿಸಬೇಕಾದ ದಾಖಲೆಗಳನ್ನು ಸಹ ವಿವರಿಸಿದೆ.

ಪ್ರವಾಸಿ ವೀಸಾ ನೀಡುವುದನ್ನು ಪುನರಾರಂಭಿಸುವ ಭಾರತದ ನಿರ್ಧಾರವನ್ನು ಚೀನಾ ವಿದೇಶಾಂಗ ಸಚಿವಾಲಯ ಸ್ವಾಗತಿಸಿದೆ, ಇದು ಗಡಿಯಾಚೆಗಿನ ಪ್ರಯಾಣವನ್ನು ಸುಗಮಗೊಳಿಸಲು ಸಕಾರಾತ್ಮಕ ಕ್ರಮವಾಗಿದೆ ಎಂದು ಹೇಳಿದೆ.

"ಇದು ಸಕಾರಾತ್ಮಕ ಕ್ರಮವಾಗಿದೆ" ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು ಸುದ್ದಿಗೋಷ್ಠಿಯಲ್ಲಿ ಭಾರತದ ನಿರ್ಧಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

"ಗಡಿಯಾಚೆಗಿನ ಪ್ರಯಾಣವನ್ನು ಸರಾಗಗೊಳಿಸಲು ಇದು ಪ್ರಯೋಜನಕಾರಿಯಾಗಿದೆ. ಎರಡೂ ದೇಶಗಳ ನಡುವಿನ ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸಲು ಚೀನಾ ಭಾರತದೊಂದಿಗೆ ಸಂವಹನ ಮತ್ತು ಸಮಾಲೋಚನೆಯನ್ನು ನಿರ್ವಹಿಸುತ್ತದೆ" ಎಂದು ಅವರು ಹೇಳಿದ್ದಾರೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬೀಜಿಂಗ್‌ನಲ್ಲಿ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ ಸುಮಾರು ಒಂದೂವರೆ ವಾರದ ನಂತರ ಪ್ರವಾಸಿ ವೀಸಾ ಪುನರಾರಂಭಿಸುವ ಭಾರತೀಯ ರಾಯಭಾರ ಕಚೇರಿಯ ನಿರ್ಧಾರ ಹೊರಬಿದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT