ಆಸ್ಪತ್ರೆಯಲ್ಲಿ ಥೈಲ್ಯಾಂಡ್ ಸೈನಿಕ ನಿಂತಿರುವುದು. 
ವಿದೇಶ

Thailand vs Cambodia ಗಡಿ ಸಂಘರ್ಷ ಉಲ್ಬಣ: ಥಾಯ್ಲೆಂಡ್‌ ಪ್ರವಾಸ ಸದ್ಯಕ್ಕೆ ಬೇಡ; ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸೂಚನೆ!

ಉಭಯ ರಾಷ್ಟ್ರಗಳ ನಡುವೆ ಕಳೆದ ಗುರುವಾರದಿಂದ ಯುದ್ಧ ಆರಂಭವಾಗಿದೆ. ಸಂಘರ್ಷದಲ್ಲಿ ಕನಿಷ್ಠ 11 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಬ್ಯಾಂಕಾಕ್‌: ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಸಂಘರ್ಷವು ವಿವಾದಿತ ಗಡಿಯಲ್ಲಿ ಮತ್ತೊಮ್ಮೆ ಭುಗಿಲೆದ್ದಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಥಾಯ್ಲೆಂಡ್‌ನಲ್ಲಿ ನೆಲೆಸಿರುವ ಭಾರತೀಯರಿಗೆ ಭಾರತೀಯ ರಾಯಭಾರ ಕಚೇರಿ ಸಲಹೆಗಳನ್ನು ನೀಡಿದೆ.

ಥಾಯ್ಲೆಂಡ್‌ನಲ್ಲಿ ನೆಲೆಸಿರುವ ಭಾರತೀಯರು ಎಚ್ಚರ ವಹಿಸಬೇಕು ಮತ್ತು ಭಾರತದಿಂದ ಬರುವವರು ಸದ್ಯಕ್ಕೆ ಪ್ರವಾಸ ಮುಂದೂಡಬೇಕು ಎಂದು ಥಾಯ್ಲೆಂಡ್‌ನಲ್ಲಿರುವ ರಾಯಭಾರ ಕಚೇರಿ ಪ್ರಕಟಣೆ ಹೊರಡಿಸಿದೆ.

ಉಭಯ ರಾಷ್ಟ್ರಗಳ ನಡುವೆ ಕಳೆದ ಗುರುವಾರದಿಂದ ಯುದ್ಧ ಆರಂಭವಾಗಿದೆ. ಸಂಘರ್ಷದಲ್ಲಿ ಕನಿಷ್ಠ 11 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಥಾಯ್‌ ಸರ್ಕಾರಿ ಸ್ವಾಮ್ಯದ ಪ್ರಚಾರ ಇಲಾಖೆ ಮಾಹಿತಿ ನೀಡಿದೆ.

ಥಾಯ್ಲೆಂಡ್ ಮತ್ತು ಕಾಂಬೊಡಿಯಾ ಗಡಿಯ ಪ್ರಸ್ತುತದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರಿಸ್ಥಿತಿಯ ಮಾಹಿತಿಯನ್ನು ಪ್ರವಾಸಿಗರು ಥಾಯ್ ಅಧಿಕಾರಿಗಳಿಂದ ಪಡೆಯಹುದು ಎಂದು ಅಲ್ಲಿನ ಸರ್ಕಾರ ಎಕ್ಸ್ ಖಾತೆಯಲ್ಲಿ ಹೇಳಿದೆ.

‘ಉಬಾನ್‌ ರತ್ಚಥನಿ, ಸುರಿನ್‌, ಸಿಸಾಕೆತ್‌, ಬುರಿರಾಮ್‌, ಸಾಕೋ, ಚಂತಬುರಿ ಮತ್ತು ಟ್ರಾಟ್‌ ಪ್ರಾಂತ್ಯಗಳ ಭೇಟಿಯನ್ನು ಥಾಯ್ಲೆಂಡ್‌ ಶಿಫಾರಸು ಮಾಡುವುದಿಲ್ಲ’ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar Election Results 2025 Live: ಮ್ಯಾಜಿಕ್ ಸಂಖ್ಯೆ 122 ಮೀರಿ 166 ಸ್ಥಾನಗಳಲ್ಲಿ NDA ಮುನ್ನಡೆ; ಇಂಡಿಯಾ ಬಣ 59 ಸ್ಥಾನಗಳಲ್ಲಿ ಮುಂದೆ

Bihar trends- ಬಿಹಾರ ಮತ ಎಣಿಕೆ ಪ್ರಗತಿಯಲ್ಲಿ, ಆರಂಭಿಕ ಟ್ರೆಂಡ್ ನಲ್ಲಿ NDA ಮುನ್ನಡೆ, ಮಹಾಘಟಬಂಧನ್ ಹಿನ್ನಡೆ

Bihar Election Results 2025: ಮತ ಎಣಿಕೆ ಆರಂಭ, ಸತತ 5ನೇ ಬಾರಿ ಗೆಲುವಿನ ಉತ್ಸಾಹದಲ್ಲಿ ನಿತೀಶ್ ಕುಮಾರ್, ಬದಲಾವಣೆ ನಿರೀಕ್ಷೆಯಲ್ಲಿ ತೇಜಸ್ವಿ ಯಾದವ್

Bihar Election Results 2025: ಇಂದು ಬಿಹಾರ ಚುನಾವಣೆ ಮತ ಎಣಿಕೆ, ಕೆಲವೇ ಹೊತ್ತಿನಲ್ಲಿ ಭವಿಷ್ಯ ನಿರ್ಧಾರ; ಗೆಲುವಿನ 'ಹಾರ' ಯಾರ ಪಾಲು?

'ನಮಗೆ ಆತುರವಿಲ್ಲ, ಪಕ್ಷ ಕಟ್ಟಲು ರಕ್ತ -ಬೆವರು ಸುರಿಸಿದ್ದೇವೆ: ಅಧಿಕಾರಕ್ಕಾಗಿ ಇನ್ನೂ 5 ವರ್ಷ ಕಾಯುತ್ತೇವೆ; ಸಮ್ಮಿಶ್ರ ಸರ್ಕಾರ ಸೇರುವ ಪ್ರಶ್ನೆಯೇ ಇಲ್ಲ'

SCROLL FOR NEXT