ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

Thailand vs Cambodia war: ಭಾರತ-ಪಾಕ್ ಸಂಘರ್ಷಕ್ಕೆ ಹೋಲಿಸಿದ ಟ್ರಂಪ್; ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್; ಅಮೆರಿಕಾ ಬೆದರಿಕೆ

ಈ ಯುದ್ಧ ಭಾರತ-ಪಾಕ್ ಸಂಘರ್ಷವನ್ನು ನೆನಪಿಸುತ್ತದೆ, ಅದನ್ನು ಯಶಸ್ವಿಯಾಗಿ ನಿಲ್ಲಿಸಲಾಯಿತು. ಇಲ್ಲಿ ಕೂಡ ಶಾಂತಿಯನ್ನು ಸ್ಥಾಪಿಸಬಹುದು.

ಯುನೈಟೆಡ್ ಕಿಂಗ್ಡಮ್: ಕಾಂಬೋಡಿಯಾ ಮತ್ತು ಥೈಲ್ಯಾಂಡ್ ಗಡಿ ಸಂಘರ್ಷವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನ ಯುದ್ಧಕ್ಕೆ ಹೋಲಿಕೆ ಮಾಡಿದ್ದು, ಈ ಯುದ್ಧ ಭಾರತ-ಪಾಕ್ ಸಂಘರ್ಷವನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.

ಸ್ಕಾಟ್ಲೆಂಡ್‌ಗೆ ಭೇಟಿ ನೀಡುತ್ತಿರುವ ಟ್ರಂಪ್ ಅವರು, ಈ ನಡುವೆ ಸಾಮಾಜಿಕ ಜಾಲತಾಣ ಟ್ರೂತ್'ನಲ್ಲಿ ಪೋಸ್ಟ್‌ ಮಾಡಿ, ಕಾಂಬೋಡಿಯಾ ಮತ್ತು ಥೈಲ್ಯಾಂಡ್ ಗಡಿ ಸಂಘರ್ಷ ಕುರಿತು ಮಾತನಾಡಿದ್ದಾರೆ.

ಈ ಯುದ್ಧ ಭಾರತ-ಪಾಕ್ ಸಂಘರ್ಷವನ್ನು ನೆನಪಿಸುತ್ತದೆ, ಅದನ್ನು ಯಶಸ್ವಿಯಾಗಿ ನಿಲ್ಲಿಸಲಾಯಿತು. ಇಲ್ಲಿ ಕೂಡ ಶಾಂತಿಯನ್ನು ಸ್ಥಾಪಿಸಬಹುದು ಎಂದು ಹೇಳಿದ್ದಾರೆ.

ಈ ಬೆದರಿಕೆಯಿಂದ ಎರಡೂ ದೇಶಗಳು ಶಾಂತಿ ಮಾತುಕತೆಗೆ ಒಲವು ತೋರುವ ಸಾಧ್ಯತೆಯಿದೆ. ಮುಂದಿನ ಬೆಳವಣಿಗೆಗಳಿಗಾಗಿ ಕಾಯುತ್ತೇವೆ ಎಂದು ತಿಳಿಸಿದ್ದಾರೆ.

ಕಾಂಬೋಡಿಯಾ ಮತ್ತು ಥೈಲ್ಯಾಂಡ್ ರಾಷ್ಟ್ರಗಳ ನಾಯಕರೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದು, ತಕ್ಷಣವೇ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಒತ್ತಾಯಿಸಲಾಗಿದೆ.

ಥೈಲ್ಯಾಂಡ್ ಜೊತೆಗಿನ ಯುದ್ಧವನ್ನು ನಿಲ್ಲಿಸುವ ಬಗ್ಗೆ ಕಾಂಬೋಡಿಯಾದ ಪ್ರಧಾನಿಯೊಂದಿಗೆ ಮಾತನಾಡಿದ್ದೇನೆ. ನಮ್ಮ ನಡುವಿನ ಮಾತುಕತೆ ಉತ್ತಮವಾಗಿತ್ತು. ಕಾಂಬೋಡಿಯಾದಂತೆಯೇ ಥೈಲ್ಯಾಂಡ್ ಕೂಡ ತಕ್ಷಣದ ಕದನ ವಿರಾಮ ಮತ್ತು ಶಾಂತಿಯನ್ನು ಬಯಸುತ್ತದೆ ಎಂಬು ಭಾವಿಸುತ್ತೇನೆ. ಮಾತುಕತೆ ನಡೆಸಲಾಗಿದ್ದು, ಕದನ ವಿರಾಮ, ಶಾಂತಿ ಸ್ಥಾಪನೆಯನ್ನು ಶೀಘ್ರದಲ್ಲೇ ನೋಡುವ ವಿಶ್ವಾಸವಿದೆ ಎಂದಿದ್ದಾರೆ.

ಇದೇ ವೇಳೆ ಉಭಯ ರಾಷ್ಟ್ರಗಳು ಯುದ್ಧ ನಿಲ್ಲಿಸದಿದ್ದರೆ, ಎರಡೂ ರಾಷ್ಟ್ರಗಳೊಂದಿಗಿನ ಯಾವುದೇ ವ್ಯಾಪಾರ ಒಪ್ಪಂದಗಳ ಮಾಡಿಕೊಳ್ಳುವುದಿಲ್ಲ ಎಂದೂ ಎಚ್ಚರಿಸಿದ್ದಾರೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ತೀವ್ರ ಸೇನಾ ಸಂಘರ್ಷ ಆರಂಭವಾಗಿದ್ದು, ಕಾಂಬೋಡಿಯಾ ಮೇಲೆ ಥಾಯ್ಲೆಂಡ್ ವಾಯುದಾಳಿ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ, ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದಕ್ಕೆ ಇರಾನ್-US ಹತ್ತಿರ: 'ಆತುರ ಬೇಡ'-ಟ್ರಂಪ್ ಹೊಸ ವರಸೆ!

ಇರಾನ್-US ಕದನ ವಿರಾಮದ ನಡುವೆ ಯುಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ರಾಜಧಾನಿಗೆ ಅಪ್ಪಳಿಸಿದ ಹೊಸ ಹೈಪರ್ಸಾನಿಕ್ ಕ್ಷಿಪಣಿ| video

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಗೋಹತ್ಯೆ ನಿಲ್ಲಬೇಕೆ?: ಮೊದಲು ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ: ಬಕ್ರೀದ್'ಗೂ ಮುನ್ನ ಮುಸ್ಲಿಂ ಸಂಘಟನೆಗಳ ಒತ್ತಾಯ!

IPL 2026: ಮುಂಬೈ ಇಂಡಿಯನ್ಸ್ ಮಣಿಸಿ ಪ್ಲೇಆಫ್‌ಗೆ ಎಂಟ್ರಿಕೊಟ್ಟ ರಾಜಸ್ಥಾನ ರಾಯಲ್ಸ್; ಪಂಜಾಬ್, KKR ಕನಸು ಭಗ್ನ!

SCROLL FOR NEXT