ನ್ಯೂಯಾರ್ಕ್‌ ಘಟನಾ ಸ್ಥಳ 
ವಿದೇಶ

ನ್ಯೂಯಾರ್ಕ್‌: ಮ್ಯಾನ್‌ಹ್ಯಾಟನ್‌ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಪೊಲೀಸ್‌ ಅಧಿಕಾರಿ ಸೇರಿ ನಾಲ್ವರ ಸಾವು, ಬಂದೂಕುಧಾರಿ ಆತ್ಮಹತ್ಯೆ..!

ದಾಳಿಕೋರನನ್ನು ಲಾಸ್ ವೇಗಾಸ್‌ನ 27 ವರ್ಷದ ಶೇನ್ ಟಮುರಾ ಎಂದು ಗುರುತಿಸಲಾಗಿದ್ದು, ಗುುಂಡಿನ ದಾಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

ವಾಷಿಂಗ್ಟನ್:‌ ನ್ಯೂಯಾರ್ಕ್‌ನ ಕೇಂದ್ರ ಮ್ಯಾನ್‌ಹ್ಯಾಟನ್‌ನಲ್ಲಿ ಸೋಮವಾರ (ಜು.28) (ಸ್ಥಳೀಯ ಸಮಯ) ನಡೆದ ಗುಂಡಿನ ದಾಳಿಯಲ್ಲಿ ನ್ಯೂಯಾರ್ಕ್ ಪೊಲೀಸ್ ಇಲಾಖೆಯ ಅಧಿಕಾರಿ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯನ್ನು ದಿದರುಲ್ ಇಸ್ಲಾಂ (36) ಎಂದು ಗುರ್ತಿಸಲಾಗಿದೆ. ಇವರು ಬಾಂಗ್ಲಾದೇಶದಿಂದ ವಲಸೆ ಬಂದವರಾಗಿದ್ದು, ನ್ಯೂಯಾರ್ಕ್ ನಗರದಲ್ಲಿ 3 1/2 ವರ್ಷಗಳ ಕಾಲ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು ಎಂದು ಪೊಲೀಸ್ ಆಯುಕ್ತ ಜೆಸ್ಸಿಕಾ ಟಿಶ್ ತಿಳಿಸಿದ್ದಾರೆ.

ಇನ್ನು ದಾಳಿಕೋರನನ್ನು ಲಾಸ್ ವೇಗಾಸ್‌ನ 27 ವರ್ಷದ ಶೇನ್ ಟಮುರಾ ಎಂದು ಗುರುತಿಸಲಾಗಿದ್ದು, ಗುುಂಡಿನ ದಾಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಇತರ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೇಯರ್ ಎರಿಕ್ ಆಡಮ್ಸ್ ತಿಳಿಸಿದ್ದಾರೆ.

ಶಂಕಿತ ಶೂಟರ್ ಮೊದಲು ಸಂಜೆ 6:40 ರ ಸುಮಾರಿಗೆ 345 ಪಾರ್ಕ್ ಅವೆನ್ಯೂದ ಲಾಬಿಯಲ್ಲಿ NYPD ಅಧಿಕಾರಿಯೊಂದಿಗೆ ಗುಂಡಿನ ಚಕಮಕಿ ನಡೆಸಿದ. ನಂತರ ಅವನು 33 ನೇ ಮಹಡಿಗೆ ಹೋಗಿ, ಕಚೇರಿ ಗೋಪುರದೊಳಗೆ ಕಟ್ಟಡದ 32 ನೇ ಮಹಡಿಯಲ್ಲಿ, ಲಾಕ್‌ ಮಾಡಿಕೊಂಡ. ಬಳಿಕ ಆತ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದು, ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ ಎಂದು ತಿಳಿದುಬಂದಿದೆ.

ಈ ಘಟನೆಯ ನಂತರ, ಎಫ್‌ಬಿಐ ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಎಫ್‌ಬಿಐ ಉಪನಿರ್ದೇಶಕ ಡ್ಯಾನ್ ಬೊಂಜಿನೊ ಅವರು ತಮ್ಮ ತಂಡವು ಸಕ್ರಿಯ ಅಪರಾಧ ಸ್ಥಳದಲ್ಲಿ ಬೆಂಬಲ ನೀಡುತ್ತಿದೆ ಎಂದು ಎಕ್ಸ್‌ಗೆ ಮಾಹಿತಿ ನೀಡಿದ್ದಾರೆ.

ಪ್ರಸ್ತುತ, ಆರೋಪಿಯ ಉದ್ದೇಶವೇನು ಮತ್ತು ಅವನು ಒಬ್ಬಂಟಿಯಾಗಿದ್ದನೇ ಅಥವಾ ಯಾವುದೇ ನೆಟ್‌ವರ್ಕ್‌ನೊಂದಿಗೆ ಸಂಪರ್ಕ ಹೊಂದಿದ್ದನೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT