ಡೊನಾಲ್ಡ್ ಟ್ರಂಪ್  
ವಿದೇಶ

'ಪಾಕಿಸ್ತಾನ ಒಂದು ದಿನ ಭಾರತಕ್ಕೆ ತೈಲ ಮಾರಾಟ ಮಾಡುವ ಸಮಯ ಬರಬಹುದು': Donald Trump

ಪಾಕಿಸ್ತಾನ ಒಂದು ದಿನ ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು ಎಂದು ಡೊನಾಲ್ಡ್ ಟ್ರಂಪ್ ಸೂಕ್ಷ್ಮವಾಗಿ ಹೇಳಿದ್ದಾರೆ.

ಭಾರತಕ್ಕೆ ಭಾರೀ ಸುಂಕ ವಿಧಿಸಿದ ಕೆಲವೇ ಗಂಟೆಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದೊಂದಿಗಿನ ಹೊಸ ವ್ಯಾಪಾರ ಒಪ್ಪಂದವನ್ನು ದೇಶದ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವತ್ತ ಗಮನಹರಿಸುತ್ತಿದ್ದೇನೆ ಎಂದರು.

ಪಾಕಿಸ್ತಾನ ಒಂದು ದಿನ ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು ಎಂದು ಡೊನಾಲ್ಡ್ ಟ್ರಂಪ್ ಸೂಕ್ಷ್ಮವಾಗಿ ಹೇಳಿದ್ದಾರೆ. ಟ್ರೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ಡೊನಾಲ್ಡ್ ಟ್ರಂಪ್, ಅಮೆರಿಕ ಮತ್ತು ಪಾಕಿಸ್ತಾನ ಪ್ರಸ್ತುತ ಪಾಲುದಾರಿಕೆಗಾಗಿ ತೈಲ ಕಂಪನಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ನಾವು ಪಾಕಿಸ್ತಾನದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದೇವೆ, ಆ ಮೂಲಕ ಪಾಕಿಸ್ತಾನ ಮತ್ತು ಅಮೆರಿಕ ತಮ್ಮ ಬೃಹತ್ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವಲ್ಲಿ ಒಟ್ಟಾಗಿ ಕೆಲಸ ಮಾಡುತ್ತವೆ. ಈ ಪಾಲುದಾರಿಕೆಯನ್ನು ಮುನ್ನಡೆಸುವ ತೈಲ ಕಂಪನಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿದ್ದೇವೆ. ಯಾರಿಗೆ ಗೊತ್ತು, ಬಹುಶಃ ಅವರು ಒಂದು ದಿನ ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು!" ಎಂದು ಟ್ರಂಪ್ ಬರಬಹುದು.

ಭಾರತದ ಮೇಲೆ ಶೇಕಡಾ 25ರಷ್ಟು ಸುಂಕ ಮತ್ತು ರಷ್ಯಾದ ಇಂಧನ ಮತ್ತು ಮಿಲಿಟರಿ ಉಪಕರಣಗಳ ಖರೀದಿಗೆ ಭಾರತ ಹೆಚ್ಚುವರಿ ದಂಡವನ್ನು ಘೋಷಿಸಿದ ಗಂಟೆಗಳ ನಂತರ ಅಮೆರಿಕ ಅಧ್ಯಕ್ಷರ ಪೋಸ್ಟ್ ಬಂದಿದೆ.

ಆಗಸ್ಟ್ 25 ರಿಂದ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸಲು ಅಮೆರಿಕದ ವ್ಯಾಪಾರ ತಂಡ ಭೇಟಿ ನೀಡಲಿದೆ ಎಂದು ಭಾರತೀಯ ಅಧಿಕಾರಿಗಳು ಹೇಳಿದ ಒಂದು ದಿನದ ನಂತರ ಟ್ರಂಪ್ ಅವರ ಅಚ್ಚರಿಯ ಘೋಷಣೆ ಹೊರಬಿದ್ದಿದೆ.

ಇತ್ತೀಚಿನ ದಿನಗಳಲ್ಲಿ ಜಪಾನ್, ಯುಕೆ ಮತ್ತು ಯುರೋಪಿಯನ್ ಒಕ್ಕೂಟದಂತಹ ಪ್ರಮುಖ ಪಾಲುದಾರರೊಂದಿಗೆ ಅನುಕೂಲಕರ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿರುವ ಅಮೆರಿಕ ಮಾಡಿದ ಬೇಡಿಕೆಗಳಿಗೆ ಭಾರತ ಒಪ್ಪಿಗೆ ನೀಡುವಂತೆ ಮಾಡುವ ಒತ್ತಡ ತಂತ್ರವಾಗಿ ಈ ಘೋಷಣೆಯನ್ನು ನೋಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ತೊರೆಯುವವರಿಗೆ 3 ಸಾವಿರ ಡಾಲರ್ ಸ್ಟೈಫಂಡ್: ಅಕ್ರಮ ವಲಸಿಗರಿಗೆ ಟ್ರಂಪ್ ಕ್ರಿಸ್‌ಮಸ್ ಆಫರ್

IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ: ಮುಸ್ತಾಫಿಜುರ್ ಖರೀದಿಸಿದ್ದಕ್ಕಾಗಿ ಶಾರುಖ್ ಖಾನ್'ನ 'KKR' ವಿರುದ್ಧ Boycott ಅಭಿಯಾನ!

ಬೆಂಗಳೂರಿನಲ್ಲಿ ಶೂಟೌಟ್: ಕೋರ್ಟ್​​​ನಿಂದ ಆಚೆ ಬಂದ ಬ್ಯಾಂಕರ್ ಪತ್ನಿಗೆ ಗುಂಡಿಕ್ಕಿ ಕೊಂದ ಟೆಕ್ಕಿ!

ಭಗವಾನ್ ರಾಮ ಓರ್ವ ಮುಸ್ಲಿಮ್: ವಿವಾದದ ಕಿಡಿ ಹೊತ್ತಿಸಿದ ತೃಣಮೂಲ ಕಾಂಗ್ರೆಸ್ ಶಾಸಕ!

ಒಡಿಶಾ: ತಲೆಗೆ 2 ಕೋಟಿ ರೂ.ಗೂ ಹೆಚ್ಚು ಬಹುಮಾನ ಹೊಂದಿದ್ದ 22 ನಕ್ಸಲರು ಪೊಲೀಸರಿಗೆ ಶರಣು!

SCROLL FOR NEXT