ವಿದೇಶ

ಕೀನ್ಯಾದಲ್ಲಿ ಘೋರ ಘಟನೆ: ಭೀಕರ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಕೇರಳ ಮೂಲದ ಐವರು ದುರ್ಮರಣ!

ಮೃತರೆಲ್ಲರೂ ಕತಾರ್ ನಲ್ಲಿ ನೆಲೆಸಿದ್ದ ಭಾರತೀಯ ಮೂಲದವರು ಎಂದು ಗುರುತಿಸಲಾಗಿದ್ದು ಐವರು ಕೇರಳಿಗರು ಎಂದು ತಿಳಿದುಬಂದಿದೆ.

ಕೀನ್ಯಾದಲ್ಲಿ ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಆರು ಭಾರತೀಯರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಕತಾರ್ ನಲ್ಲಿ ನೆಲೆಸಿದ್ದ ಭಾರತೀಯ ಮೂಲದವರು ಎಂದು ಗುರುತಿಸಲಾಗಿದ್ದು ಐವರು ಕೇರಳಿಗರು ಎಂದು ತಿಳಿದುಬಂದಿದೆ. ಮೃತರಾದ ಮಲಯಾಳಿಗಳಾದ ಮಾವೆಲಿಕ್ಕರ ಮೂಲದ ಗೀತಾ ಶೋಜಿ ಐಸಾಕ್ (58), ಜಸ್ನಾ ಕುಟ್ಟಿಕ್ಕಟ್ಟುಚಲಿಲ್ (29), ರುಹಿ ಮೆಹ್ರಿ ಮೊಹಮ್ಮದ್ (18 ತಿಂಗಳ), ಒಟ್ಟಪಾಲಂ ಮೂಲದ ರಿಯಾ ಎನ್ (41) ಮತ್ತು ಟೈರಾ ರೊಡ್ರಿಗಸ್ (8) ಎಂದು ಗುರುತಿಸಲಾಗಿದೆ. ಆದರೆ ಮತೋರ್ವನ ಗುರುತು ಪತ್ತೆಯಾಗಿಲ್ಲ.

ನ್ಯಾಂಡರುವಾ ಕೌಂಟಿಯ ಓಲ್ ಜೊರೊರೊಕ್-ನಕುರು ರಸ್ತೆಯಲ್ಲಿರುವ ಗಿಚಾಕಾದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಿಗರು ನ್ಯಾಹುರುರುವಿನ ಪನಾರಿ ರೆಸಾರ್ಟ್‌ಗೆ ತೆರಳುತ್ತಿದ್ದಾಗ ಅವರ ಬಸ್ ಕಂದಕಕ್ಕೆ ಬಿದ್ದಿತು. ಕಡಿದಾದ ಇಳಿಜಾರಿನ ಪ್ರದೇಶದಲ್ಲಿ ತಿರುವು ಪಡೆಯಲು ಯತ್ನಿಸಿದಾಗ ಚಾಲಕ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನಲ್ಲಿ 28 ಪ್ರವಾಸಿಗರು, ಮೂವರು ಸ್ಥಳೀಯ ಮಾರ್ಗದರ್ಶಕರು ಮತ್ತು ಚಾಲಕನನ್ನು ಹೊತ್ತೊಯ್ಯುತ್ತಿತ್ತು.

ನೈರೋಬಿಯಲ್ಲಿರುವ ಭಾರತೀಯ ಹೈಕಮಿಷನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು. ಮೃತರ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಹೈಕಮಿಷನ್‌ನ ಅಧಿಕಾರಿಗಳ ತಂಡವು ಸ್ಥಳದಲ್ಲಿದ್ದು, ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ. ನಮ್ಮನ್ನು +254 734916532 ನಲ್ಲಿ ಸಂಪರ್ಕಿಸಬಹುದು ಎಂದು ಹೈಕಮಿಷನ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT