ಎಸ್ ಜೈಶಂಕರ್ 
ವಿದೇಶ

'ಭಯೋತ್ಪಾದನೆ ನಿಮ್ಮನ್ನೂ ಬಿಡಲ್ಲ': ಯುರೋಪಿಯನ್ ದೇಶಗಳಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಘರ್ಷಣೆ ಕೇವಲ ಎರಡು ನೆರೆಹೊರೆಯವರ ನಡುವಿನ ಸಂಘರ್ಷವಲ್ಲ, ಬದಲಾಗಿ ಇದು ಭಯೋತ್ಪಾದನೆಯ ವಿರುದ್ಧದ ಹೋರಾಟವಾಗಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಘರ್ಷಣೆ ಕೇವಲ ಎರಡು ನೆರೆಹೊರೆಯವರ ನಡುವಿನ ಸಂಘರ್ಷವಲ್ಲ, ಬದಲಾಗಿ ಇದು ಭಯೋತ್ಪಾದನೆಯ ವಿರುದ್ಧದ ಹೋರಾಟವಾಗಿದೆ. ಇದು ಅಂತಿಮವಾಗಿ ಪಾಶ್ಚಿಮಾತ್ಯ ದೇಶಗಳಿಗೂ ತೊಂದರೆ ನೀಡುತ್ತದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಯುರೋಪಿಯನ್ ಸುದ್ದಿ ವೆಬ್‌ಸೈಟ್ ಯೂರಾಕ್ಟಿವ್‌ಗೆ ನೀಡಿದ ಸಂದರ್ಶನದಲ್ಲಿ ಜೈಶಂಕರ್, EU-ಭಾರತ ಮುಕ್ತ ವ್ಯಾಪಾರದ ಬಗ್ಗೆ ಮಾತನಾಡಿದರು. 1.4 ಬಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಭಾರತವು ಚೀನಾಕ್ಕಿಂತ ಕೌಶಲ್ಯಪೂರ್ಣ ಕಾರ್ಮಿಕರನ್ನು ಮತ್ತು ಹೆಚ್ಚು ವಿಶ್ವಾಸಾರ್ಹ ಆರ್ಥಿಕ ಪಾಲುದಾರಿಕೆಯನ್ನು ಒದಗಿಸುತ್ತದೆ ಎಂದು ಒತ್ತಿ ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರತೀಕಾರವಾಗಿ 'ಆಪರೇಷನ್ ಸಿಂಧೂರ್' ಪ್ರಾರಂಭವಾದ ಸುಮಾರು ಒಂದು ತಿಂಗಳ ನಂತರ ಯುರೋಪ್‌ಗೆ ಭೇಟಿ ನೀಡಿದ್ದ ಜೈಶಂಕರ್, "ಒಸಾಮಾ ಬಿನ್ ಲಾಡೆನ್ ಎಂಬ ವ್ಯಕ್ತಿ ಇದ್ದನೆಂದು ನಾನು ನಿಮಗೆ ಒಂದು ವಿಷಯವನ್ನು ನೆನಪಿಸಲು ಬಯಸುತ್ತೇನೆ. ಪಾಕಿಸ್ತಾನಿ ಸೇನಾ ಕಂಟೋನ್ಮೆಂಟ್ ಪಟ್ಟಣದಲ್ಲಿ ಅವನು ವರ್ಷಗಳ ಕಾಲ ಸುರಕ್ಷಿತವಾಗಿರಲು ಕಾರಣವೇನು?" ಎಂದು ಪ್ರಶ್ನಿಸಿದರು. ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಾಲ್ಕು ದಿನಗಳ ಸಂಘರ್ಷದ ಕುರಿತಾದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ಆಪರೇಷನ್ ಸಿಂಧೂರ್ ಅನ್ನು ಎರಡು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವೆ ಪ್ರತೀಕಾರಕ್ಕಾಗಿ ನಡೆದಿದೆ ಎಂದು ಬಿಂಬಿಸಿದ ಅಂತರರಾಷ್ಟ್ರೀಯ ಮಾಧ್ಯಮವನ್ನು ಟೀಕಿಸಿದ ಅವರು, ಇದು ಕೇವಲ ಭಾರತ-ಪಾಕಿಸ್ತಾನದ ಸಮಸ್ಯೆಯಲ್ಲ ಎಂದು ಜಗತ್ತು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಇದು ಭಯೋತ್ಪಾದನೆಯ ಬಗ್ಗೆ ಮತ್ತು ಇದು ಅಂತಿಮವಾಗಿ ನಿಮಗೂ ಭಯೋತ್ಪಾದನೆ ಕಾಡಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT