ಸಾಂದರ್ಭಿಕ ಚಿತ್ರ 
ವಿದೇಶ

ಗೌತಮ್ ಅದಾನಿ ಗ್ರೂಪ್ ನ ಇಸ್ರೇಲಿನ 'ಹೈಫಾ ಬಂದರು' ಮೇಲೆ ಇರಾನ್ ಕ್ಷಿಪಣಿ ದಾಳಿ?

ದಾಳಿಯಿಂದ ಯಾವುದೇ ಹಾನಿಯಾಗಿಲ್ಲ. ಅಡೆತಡೆಯಿಲ್ಲದೆ ಸರಕು ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಮೂಲಗಳು ತಿಳಿಸಿವೆ.

ಟೆಹ್ರಾನ್ : ಈ ವಾರದ ಆರಂಭದಲ್ಲಿ ಇರಾನ್ ದೇಶದ ಪರಮಾಣು ಘಟಕಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಶನಿವಾರ ರಾತ್ರಿ ಭಾರತೀಯ ಉದ್ಯಮಿ ಗೌತಮ್ ಅದಾನಿ ಗ್ರೂಪ್ ನ ಇಸ್ರೇಲಿನ ಹೈಫಾ ಬಂದರು ಮತ್ತು ಅದರ ಸಮೀಪದ ತೈಲ ಸಂಸ್ಕರಣಾಗಾರವನ್ನು ಗುರಿಯಾಗಿಸಿ ಇರಾನ್ ಖಂಡಾಂತರ ಕ್ಷಿಪಣಿ ದಾಳಿ ನಡೆಸಿದೆ ಎನ್ನಲಾಗಿದೆ.

ಆದರೆ ದಾಳಿಯಿಂದ ಯಾವುದೇ ಹಾನಿಯಾಗಿಲ್ಲ. ಅಡೆತಡೆಯಿಲ್ಲದೆ ಸರಕು ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಮೂಲಗಳು ತಿಳಿಸಿವೆ.

ಬಂದರಿನಲ್ಲಿರುವ ರಾಸಾಯನಿಕ ಟರ್ಮಿನಲ್‌ನಲ್ಲಿ ಶಾರ್ಪ್‌ನೆಲ್ ಶೆಲ್ ಗಳು (shrapnel) ಬಿದಿದ್ದರೆ, ತೈಲ ಸಂಸ್ಕರಣಾಗಾರದಲ್ಲಿ ಇತರ ಕೆಲವು ಸ್ಪೋಟಕಗಳು ಬಿದ್ದಿರುವುದಾಗಿ ಎರಡು ಮೂಲಗಳು ತಿಳಿಸಿವೆ. ಆದರೆ ಯಾವುದೇ ಗಾಯಗಳಾಗಿಲ್ಲ, ಅದಾನಿ ಬಂದರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅವುಗಳು ತಿಳಿಸಿವೆ.

ಕಿಶನ್ ವೆಸ್ಟ್ (ಹೈಫಾ ಬಂದರು) ನಲ್ಲಿ ಶಾರ್ಪ್ ನೆಲ್ (shrapnel)ಚೂರುಗಳು ಕಂಡುಬಂದಿವೆ. ಆದರೆ ಯಾವುದೇ ಗಾಯದ ಕುರಿತು ವರದಿಯಾಗಿಲ್ಲ. ಅದಾನಿ-ಚಾಲಿತ ಬಂದರಿನಲ್ಲಿ ಸರಕು ಕಾರ್ಯಾಚರಣೆಗೆ ಯಾವುದೇ ಅಡ್ಡಿಯಾಗಿಲ್ಲ. ಬಂದರಿನಲ್ಲಿ ಈಗ ಎಂಟು ಹಡಗುಗಳಿವೆ, ಸರಕು ಸಾಗಣೆ ಕಾರ್ಯಾಚರಣೆ ಎಂದಿನಂತೆ ನಡೆದಿದೆ. ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯು ಅದಾನಿ ಬಂದರು ಅಥವಾ ಅದರ ಕಾರ್ಯಾಚರಣೆಗಳಿಗೆ ಯಾವುದೇ ಹಾನಿ ಉಂಟು ಮಾಡಿಲ್ಲ ಎಂದು ಮೂಲಗಳು ಹೇಳಿವೆ.

ಅದಾನಿ ಗುಂಪು ಈ ಕುರಿತು ತತ್ ಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಇಸ್ರೇಲ್ ಸರ್ಕಾರದ ಅಧಿಕಾರಿಗಳಿಂದಲೂ ಯಾವುದೇ ಹೇಳಿಕೆ ಬಂದಿಲ್ಲ. ಹೈಫಾ ಬಂದರು ನಿರ್ಣಾಯಕ ಕಡಲ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.ಇಸ್ರೇಲ್ ಆಮದುಗಳಲ್ಲಿ ಶೇ. 30 ರಷ್ಟನ್ನು ನಿರ್ವಹಿಸುತ್ತದೆ. ಇದು ಅದಾನಿ ಪೋರ್ಟ್ಸ್ ಒಡೆತನದಲ್ಲಿದ್ದು, ಶೇ. 70 ರಷ್ಟು ಪಾಲನ್ನು ಹೊಂದಿದೆ. ಕ್ಷಿಪಣಿಗಳು ಬಂದರಿನ ಸಮೀಪವಿರುವ ಪ್ರಮುಖ ತೈಲ ಸಂಸ್ಕರಣಾಗಾರಕ್ಕೆ ಹಾನಿಯನ್ನುಂಟುಮಾಡಿರಬಹುದು ಆದರೆ ಬಂದರಿನ ಮೇಲಿನ ಹಾನಿ ಬಗ್ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆಗಳು ಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT