ದುಬೈನ ಗಗನಚುಂಬಿ ಕಟ್ಟಡದಲ್ಲಿ ಭೀಕರ ಅಗ್ಮಿ ಅವಘಡ 
ವಿದೇಶ

67 ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿಅವಘಡ, 4 ಸಾವಿರ ಮಂದಿ ಸ್ಥಳಾಂತರ; ಮೈ ಜುಮ್ಮೆನಿಸುವ Video

ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಶುಕ್ರವಾರ ತಡರಾತ್ರಿ ಮರಿನಾದ ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ದುಬೈ: ಬರೊಬ್ಬರಿ 67 ಅಂತಸ್ತಿನ ಗಗನಚುಂಬಿ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಸುಮಾರು 4 ಸಾವಿರ ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಸ್ಖಳಾಂತರಗೊಳಿಸಲಾಗಿದೆ.

ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಶುಕ್ರವಾರ ತಡರಾತ್ರಿ ಮರಿನಾದ ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಟೈಗರ್ ಟವರ್ ಎಂದು ಕರೆಯಲ್ಪಡುವ ಮರೀನಾ ಪಿನಾಕಲ್‌ ಕಟ್ಟಡದಲ್ಲಿ ಮೇ 2015 ರಲ್ಲಿ ಸಹ ಅಗ್ನಿ ಅವಘಡ ಸಂಭವಿಸಿತ್ತು. ಆಗ 47 ನೇ ಮಹಡಿಯಲ್ಲಿ ಬೆಂಕಿ ತಗುಲಿ 48 ನೇ ಮಹಡಿಗೂ ವ್ಯಾಪಿಸಿತ್ತು. ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಅಗ್ಮಿಶಾಮಕ ಸಿಬ್ಬಂದಿ ಈ ಕಟ್ಟಡದಲ್ಲಿದ್ದ ಸುಮಾರು 4,000 ಜನರನ್ನು ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ಕಟ್ಟಡದ 35ನೇ ಮಹಡಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕೆನ್ನಾಲಿಗೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಇಡೀ ಕಟ್ಟಡ ಒಣಗಿದ ಮರದಂತೆ ಹೊತ್ತಿ ಉರಿದಿದೆ. ಇದರಿಂದ ಇಡೀ ನಗರಾದ್ಯಂತ ಹೊಗೆ ಆವರಿಸಿತ್ತು. ಇಂತಹ ಅಗ್ನಿ ದುರಂತವನ್ನು ರಕ್ಷಣಾ ತಂಡಗಳು ಜಾಗರೂಕತೆಯಿಂದ ನಿಭಾಯಿಸಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

6 ಗಂಟೆಗಳ ಕಾಲ ಕಾರ್ಯಾಚರಣೆ

ಇನ್ನು ಅಗ್ನಿಶಾಮಕ ದಳ ಬರೊಬ್ಬರಿ 6 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ. ಅವಘಡದಿಂದ ಸಮಸ್ಯೆಗೊಳಗಾದವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲು ಅಧಿಕಾರಿಗಳು ಸಭೆ ನಡೆಸಿದ್ದಾರೆ.

ಬದುಕಿದ್ದೇ ಅದೃಷ್ಟ

ಇನ್ನು ಅಗ್ನಿ ದುರಂತದ ಕುರಿತು ಕರಾಳ ಅನುಭವ ಬಿಚ್ಚಿಟ್ಟ ಸ್ಥಳೀಯ ನಿವಾಸಿ ತಾವು ಬದುಕಿದ್ದೇ ಅದೃಷ್ಟ ಎಂದು ಹೇಳಿದ್ದಾರೆ. 'ಅಗ್ನಿ ಅವಘಡ ಸಂದರ್ಭದಲ್ಲಿ ನಾನು ಕಟ್ಟಡದಲ್ಲಿದ್ದೆ ಮತ್ತು ನನ್ನ ಹೆಂಡತಿ ನಮ್ಮ ಅಪಾರ್ಟ್ಮೆಂಟ್ನಲ್ಲಿ ಶಾಂತಿಯುತವಾಗಿ ಮಲಗಿದ್ದೆವು. ಈ ವೇಳೆ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ನಾವು ಸಮಯಕ್ಕೆ ಸರಿಯಾಗಿ ಹೊರಬಂದೆವು ಎಂದು ನಿಶಿತ್ ಶರ್ಮಾ ಹೇಳಿದ್ದಾರೆ.

ಈ 67 ಅಂತಸ್ತಿನ ಸ್ಕ್ರೈ ಸ್ಕ್ರೇಪರ್ ಕಟ್ಟಡದಲ್ಲಿ ಸುಮಾರು 764 ಅಪಾರ್ಟ್‌ಮೆಂಟ್‌ಗಳಿದ್ದು, ಇಲ್ಲಿ ಸುಮಾರು 3,820 ನಿವಾಸಿಗಳು ವಾಸಿಸುತ್ತಿದ್ದರು. ಇದೀಗ ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!