ದುಬೈನ ಗಗನಚುಂಬಿ ಕಟ್ಟಡದಲ್ಲಿ ಭೀಕರ ಅಗ್ಮಿ ಅವಘಡ 
ವಿದೇಶ

67 ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿಅವಘಡ, 4 ಸಾವಿರ ಮಂದಿ ಸ್ಥಳಾಂತರ; ಮೈ ಜುಮ್ಮೆನಿಸುವ Video

ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಶುಕ್ರವಾರ ತಡರಾತ್ರಿ ಮರಿನಾದ ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ದುಬೈ: ಬರೊಬ್ಬರಿ 67 ಅಂತಸ್ತಿನ ಗಗನಚುಂಬಿ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಸುಮಾರು 4 ಸಾವಿರ ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಸ್ಖಳಾಂತರಗೊಳಿಸಲಾಗಿದೆ.

ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಶುಕ್ರವಾರ ತಡರಾತ್ರಿ ಮರಿನಾದ ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಟೈಗರ್ ಟವರ್ ಎಂದು ಕರೆಯಲ್ಪಡುವ ಮರೀನಾ ಪಿನಾಕಲ್‌ ಕಟ್ಟಡದಲ್ಲಿ ಮೇ 2015 ರಲ್ಲಿ ಸಹ ಅಗ್ನಿ ಅವಘಡ ಸಂಭವಿಸಿತ್ತು. ಆಗ 47 ನೇ ಮಹಡಿಯಲ್ಲಿ ಬೆಂಕಿ ತಗುಲಿ 48 ನೇ ಮಹಡಿಗೂ ವ್ಯಾಪಿಸಿತ್ತು. ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಅಗ್ಮಿಶಾಮಕ ಸಿಬ್ಬಂದಿ ಈ ಕಟ್ಟಡದಲ್ಲಿದ್ದ ಸುಮಾರು 4,000 ಜನರನ್ನು ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.

ಕಟ್ಟಡದ 35ನೇ ಮಹಡಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕೆನ್ನಾಲಿಗೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಇಡೀ ಕಟ್ಟಡ ಒಣಗಿದ ಮರದಂತೆ ಹೊತ್ತಿ ಉರಿದಿದೆ. ಇದರಿಂದ ಇಡೀ ನಗರಾದ್ಯಂತ ಹೊಗೆ ಆವರಿಸಿತ್ತು. ಇಂತಹ ಅಗ್ನಿ ದುರಂತವನ್ನು ರಕ್ಷಣಾ ತಂಡಗಳು ಜಾಗರೂಕತೆಯಿಂದ ನಿಭಾಯಿಸಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

6 ಗಂಟೆಗಳ ಕಾಲ ಕಾರ್ಯಾಚರಣೆ

ಇನ್ನು ಅಗ್ನಿಶಾಮಕ ದಳ ಬರೊಬ್ಬರಿ 6 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ. ಅವಘಡದಿಂದ ಸಮಸ್ಯೆಗೊಳಗಾದವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲು ಅಧಿಕಾರಿಗಳು ಸಭೆ ನಡೆಸಿದ್ದಾರೆ.

ಬದುಕಿದ್ದೇ ಅದೃಷ್ಟ

ಇನ್ನು ಅಗ್ನಿ ದುರಂತದ ಕುರಿತು ಕರಾಳ ಅನುಭವ ಬಿಚ್ಚಿಟ್ಟ ಸ್ಥಳೀಯ ನಿವಾಸಿ ತಾವು ಬದುಕಿದ್ದೇ ಅದೃಷ್ಟ ಎಂದು ಹೇಳಿದ್ದಾರೆ. 'ಅಗ್ನಿ ಅವಘಡ ಸಂದರ್ಭದಲ್ಲಿ ನಾನು ಕಟ್ಟಡದಲ್ಲಿದ್ದೆ ಮತ್ತು ನನ್ನ ಹೆಂಡತಿ ನಮ್ಮ ಅಪಾರ್ಟ್ಮೆಂಟ್ನಲ್ಲಿ ಶಾಂತಿಯುತವಾಗಿ ಮಲಗಿದ್ದೆವು. ಈ ವೇಳೆ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ನಾವು ಸಮಯಕ್ಕೆ ಸರಿಯಾಗಿ ಹೊರಬಂದೆವು ಎಂದು ನಿಶಿತ್ ಶರ್ಮಾ ಹೇಳಿದ್ದಾರೆ.

ಈ 67 ಅಂತಸ್ತಿನ ಸ್ಕ್ರೈ ಸ್ಕ್ರೇಪರ್ ಕಟ್ಟಡದಲ್ಲಿ ಸುಮಾರು 764 ಅಪಾರ್ಟ್‌ಮೆಂಟ್‌ಗಳಿದ್ದು, ಇಲ್ಲಿ ಸುಮಾರು 3,820 ನಿವಾಸಿಗಳು ವಾಸಿಸುತ್ತಿದ್ದರು. ಇದೀಗ ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT