ಸೊರೊಕಾ ಆಸ್ಪತ್ರೆ 
ವಿದೇಶ

ಇಸ್ರೇಲ್‌ನ ಪ್ರಮುಖ ಆಸ್ಪತ್ರೆ ಸೇರಿ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ: ಇರಾನ್ 'ಭಾರೀ ಬೆಲೆ ತೆರಲಿದೆ' ಎಂದ ನೆತನ್ಯಾಹು; Video

ಇರಾನ್ 'ಭಾರೀ ಬೆಲೆ ತೆರಲಿದೆ' ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಎಚ್ಚರಿಸಿದ್ದಾರೆ.

ಟೆಹ್ರಾನ್: ಇರಾನ್ ಮತ್ತು ಇಸ್ರೇಲ್‌ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ.

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು, ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ. ನಾಗರಿಕ ಪ್ರದೇಶಗಳ ಮೇಲೆ 'ಹಲವಾರು ದಾಳಿ' ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಅಧಿಕಾರಿಯೊಬ್ಬರು ಸಿಎನ್‌ಎನ್‌ಗೆ ತಿಳಿಸಿದ್ದಾರೆ.

ದಕ್ಷಿಣ ಇಸ್ರೇಲ್‌ನ ಸೊರೊಕಾ ಆಸ್ಪತ್ರೆ ಸೇರಿದಂತೆ "ನಾಗರಿಕರು ಇರುವ ಹಲವಾರು ಪ್ರದೇಶಗಳ ಮೇಲೆ ದಾಳಿ" ನಡೆದಿವೆ ಎಂದು ಅಧಿಕಾರಿ ಹೇಳಿದ್ದಾರೆ.

ಇರಾನಿನ ಕ್ಷಿಪಣಿಯು ದಕ್ಷಿಣ ಇಸ್ರೇಲಿ ನಗರವಾದ ಬೀರ್ ಶೆವಾದಲ್ಲಿರುವ ಪ್ರಮುಖ ಆಸ್ಪತ್ರೆಯಾದ ಸೊರೊಕಾ ವೈದ್ಯಕೀಯ ಕೇಂದ್ರಕ್ಕೆ ಅಪ್ಪಳಿಸಿದ್ದು, ವ್ಯಾಪಕ ಹಾನಿ ಉಂಟು ಮಾಡಿದೆ ಎಂದು ಇಸ್ರೇಲ್ ಅಧಿಕಾರಿಗಳು ಸಿಎನ್‌ಎನ್‌ಗೆ ತಿಳಿಸಿದ್ದಾರೆ.

ಇಸ್ರೇಲ್‌ನ ತುರ್ತು ಪ್ರತಿಕ್ರಿಯೆ ಸೇವೆಯಾದ ಮ್ಯಾಗೆನ್ ಡೇವಿಡ್ ಅಡೋಮ್(ಎಂಡಿಎ), "ಭಾರೀ ಹಾನಿಗೊಳಗಾದ ಕಟ್ಟಡ"ದ ಬಗ್ಗೆ ವರದಿ ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ದಾಳಿಯಲ್ಲಿ 60 ವರ್ಷದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

"ನಾವು ಪ್ರಸ್ತುತ ಗಾಯಗಳು ಸೇರಿದಂತೆ ಹಾನಿಯನ್ನು ನಿರ್ಣಯಿಸುತ್ತಿದ್ದೇವ. ವಿವಿಧ ಪ್ರದೇಶಗಳಲ್ಲಿ ವ್ಯಾಪಕ ಹಾನಿಯಾಗಿದೆ" ಎಂದು ಸೊರೊಕಾದ ವಕ್ತಾರರು ಹೇಳಿದ್ದಾರೆ.

ಸೊರೊಕಾ ಇಸ್ರೇಲ್‌ನ ಪ್ರಮುಖ ವೈದ್ಯಕೀಯ ಕೇಂದ್ರಗಳಲ್ಲಿ ಒಂದಾಗಿದೆ ಮತ್ತು ಅದರ ವೆಬ್‌ಸೈಟ್ ಪ್ರಕಾರ ದಕ್ಷಿಣದಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ಚಿಕಿತ್ಸೆಯನ್ನು ಒದಗಿಸುತ್ತದೆ. ಗಾಜಾದಿಂದ ಕೇವಲ 22 ಮೈಲುಗಳಷ್ಟು ದೂರದಲ್ಲಿರುವ ಸೊರೊಕಾ ಯುದ್ಧದಲ್ಲಿ ಗಾಯಗೊಂಡ ಜನರಿಗೆ ಪ್ರಾಥಮಿಕ ಸ್ಥಳಾಂತರ ತಾಣವಾಗಿದೆ.

ಇರಾನ್ 'ಭಾರೀ ಬೆಲೆ ತೆರಲಿದೆ': ನೆತನ್ಯಾಹು

ಇಸ್ರೇಲ್‌ನ ದಕ್ಷಿಣದಲ್ಲಿರುವ ಪ್ರಮುಖ ಆಸ್ಪತ್ರೆ ಸೇರಿದಂತೆ ಹಲವು ನಾಗರಿಕ ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ನಂತರ, ಇರಾನ್ 'ಭಾರೀ ಬೆಲೆ ತೆರಲಿದೆ' ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಎಚ್ಚರಿಸಿದ್ದಾರೆ.

"ಇಂದು ಬೆಳಗ್ಗೆ, ಇರಾನ್‌ನ ಭಯೋತ್ಪಾದಕ ಸರ್ವಾಧಿಕಾರಿಗಳು ಬೀರ್ ಶೇವಾದ ಸೊರೊಕಾ ಆಸ್ಪತ್ರೆ ಮತ್ತು ದೇಶದ ಮಧ್ಯಭಾಗದಲ್ಲಿರುವ ನಾಗರಿಕರ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದಾರೆ. ಟೆಹ್ರಾನ್‌ನಲ್ಲಿರುವ ದಬ್ಬಾಳಿಕೋರರು ಭಾರೀ ಬೆಲೆ ತೆರುವಂತೆ ಮಾಡುತ್ತೇವೆ" ಎಂದು ನೆತನ್ಯಾಹು X ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT