ಪ್ರಧಾನಿ ಬೆಂಜಮಿನ್ ನೆತನ್ಯಾಹು 
ವಿದೇಶ

ಇರಾನ್‌ನಲ್ಲಿ ಗುರಿ ಸಾಧನೆಯ ಸಾಮೀಪ್ಯದಲ್ಲಿ ಇಸ್ರೇಲ್: ಪ್ರಧಾನಿ ಬೆಂಜಮಿನ್ ನೆತನ್ಯಾಹು!

ಇರಾನ್‌ನ ಪರಮಾಣು ತಾಣಗಳ ಮೇಲೆ ಯುಎಸ್ ದಾಳಿಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೆತನ್ಯಾಹು, ಇರಾನ್ ಜೊತೆಗಿನ ಯುದ್ಧದಿಂದ ಈಗಲೇ ಹಿಂದೆ ಸರಿಯುವುದಿಲ್ಲ .

ಜೆರುಸೆಲೆಂ: ಇರಾನ್‌ನಲ್ಲಿ ಗುರಿ ಸಾಧನೆಯ ಹತ್ತಿರದಲ್ಲಿವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾನುವಾರ ಹೇಳಿದ್ದಾರೆ. ಇರಾನ್ ನ ಖಂಡಾಂತರ ಕ್ಷಿಪಣಿ ಮತ್ತು ಪರಮಾಣು ತಾಣಗಳ ಮೇಲೆ ಗಮನಾರ್ಹ ಹಾನಿಯನ್ನುಂಟುಮಾಡಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇರಾನ್‌ನ ಪರಮಾಣು ತಾಣಗಳ ಮೇಲೆ ಯುಎಸ್ ದಾಳಿಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೆತನ್ಯಾಹು, ಇರಾನ್ ಜೊತೆಗಿನ ಯುದ್ಧದಿಂದ ಈಗಲೇ ಹಿಂದೆ ಸರಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು. ಎಲ್ಲಾ ಉದ್ದೇಶಿತ ಗುರಿ ಸಾಧಿಸುವವರೆಗೂ ಯುದ್ಧವನ್ನು ಕೊನೆಗಾಣಿಸುವುದಿಲ್ಲ ಎಂದರು.

ಗುರಿ ಸಾಧಿಸಿದ ನಂತರ ಕಾರ್ಯಾಚರಣೆ ಮುಂದುವರೆಸುವುದಿಲ್ಲ ಆದರೆ ಯುದ್ಧವನ್ನು ಶೀಘ್ರದಲ್ಲಿಯೇ ಮುಗಿಸುವುದಿಲ್ಲ. ಗುರಿ ಸಾಧಿಸಿದ ಕೂಡಲೇ ಕಾರ್ಯಾಚರಣೆ ಮುಗಿಯಲಿದ್ದು, ಹೋರಾಟ ನಿಲ್ಲಲಿದೆ ಎಂದು ಅವರು ಹೇಳಿದರು.

ಇದು ನಮ್ಮನ್ನು ನಾಶಮಾಡಲು ಬಯಸುತ್ತಿರುವ ಆಡಳಿತವಾಗಿದೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ. ಅದಕ್ಕಾಗಿಯೇ ನಾವು ನಮ್ಮ ಅಸ್ತಿತ್ವಕ್ಕೆ ಬೆದರಿಕೆಯಾಗಿರುವುದನ್ನು ತೊಡೆದುಹಾಕಲು ಈ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಪರಮಾಣು ಮತ್ತು ಖಂಡಾಂತರ ಕ್ಷಿಪಣಿ ಬೆದರಿಕೆಯನ್ನು ನಾಶಪಡಿಸುವತ್ತ ಹಂತ ಹಂತವಾಗಿ ಸಾಗುತ್ತಿದ್ದೇವೆ. ಅವುಗಳನ್ನು ಪೂರ್ಣಗೊಳಿಸಲು ತುಂಬಾ ಹತ್ತಿರದಲ್ಲಿದ್ದೇವೆ. ಫರ್ಡೋವ್‌ನಲ್ಲಿರುವ ಇರಾನ್‌ನ ಪರಮಾಣು ತಾಣಕ್ಕೆ ಅತ್ಯಂತ ಗಂಭೀರ ಹಾನಿಯಾಗಿದೆ ಎಂದು ಅವರು ತಿಳಿಸಿದರು.

ಆದರೆ, ಹಾನಿಯ ಪ್ರಮಾಣದ ಬಗ್ಗೆ ಅವರು ವಿವರ ನೀಡಲಿಲ್ಲ. ಇರಾನ್‌ನ ಪರಮಾಣು ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ನಾವು ಅವರನ್ನು ಹಿಂದಕ್ಕೆ ಕಳುಹಿಸುತ್ತಿದ್ದೇವೆ. ಬೆದರಿಕೆಯನ್ನು ತೊಡೆದುಹಾಕುತ್ತಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT