ಡೊನಾಲ್ಡ್ ಟ್ರಂಪ್ 
ವಿದೇಶ

ನೊಬೆಲ್ ಶಾಂತಿ ಪುರಸ್ಕಾರಕ್ಕೆ ಟ್ರಂಪ್ ಹೆಸರು ನಾಮನಿರ್ದೇಶನ: ವಾಪಸ್ ಪಡೆಯಲು ಪಾಕ್ ಜನಪ್ರತಿನಿಧಿಗಳ ಒತ್ತಾಯ!

2026ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅವರ ಹೆಸರನ್ನು ಶಿಫಾರಸು ಮಾಡುವ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ಶನಿವಾರ ಘೋಷಿಸಿತ್ತು.

ಇಸ್ಲಾಮಾಬಾದ್: ಇರಾನ್ ನ ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ 2026ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರನ್ನು ನಾಮನಿರ್ದೇಶನ ಮಾಡಿದ ಪಾಕಿಸ್ತಾನ ಸರ್ಕಾರದ ನಿರ್ಧಾರವನ್ನು ಅಲ್ಲಿನ ಕೆಲವು ಜನಪ್ರತಿನಿಧಿಗಳು ಟೀಕಿಸಿದ್ದಾರೆ.

ಇತ್ತೀಚಿನ ಭಾರತ ಹಾಗೂ ಪಾಕಿಸ್ತಾನ ನಡುವಣ ಉದ್ವಿಗ್ನತೆ ಶಮನದಲ್ಲಿ ಪ್ರಮುಖ ಪಾತ್ರವನ್ನು ಉಲ್ಲೇಖಿಸಿ 2026ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅವರ ಹೆಸರನ್ನು ಶಿಫಾರಸು ಮಾಡುವ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ಶನಿವಾರ ಘೋಷಿಸಿತ್ತು.

ಆದರೆ, ಇದಕ್ಕೆ ಅಲ್ಲಿನ ಕೆಲ ಜನಪ್ರತಿನಿಧಿಗಳು ಅಪಸ್ವರ ವ್ಯಕ್ತಪಡಿಸಿದ್ದು, ಅವರ ಹೆಸರನ್ನು ನಾಮನಿರ್ದೇಶವನ್ನು ವಾಪಸ್ ಪಡೆಯಬೇಕು ಎಂದು ಜಮೈತ್ ಉಲೇಮಾ-ಇ-ಇಸ್ಲಾಂ (JUI-F) ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್ ಆಗ್ರಹಿಸಿದ್ದಾರೆ.

ಅಮೆರಿಕದೊಂದಿಗೆ ಸ್ನೇಹವನ್ನು ಬಯಸುತ್ತೇವೆ ಆದರೆ ಗುಲಾಮಗಿರಿಯನ್ನು ಸ್ವೀಕರಿಸಲ್ಲ ಎಂದು ಹೇಳಿರುವುದಾಗಿ ಎಕ್ಸ್ ಪ್ರೆಸ್ ಟ್ರಿಬ್ಯುನ್ ವರದಿ ಮಾಡಿದೆ.

ಇರಾನ್ ನಲ್ಲಿ ಅಮೆರಿಕ ದಾಳಿಯನ್ನು ಖಂಡಿಸಿದ ರೆಹಮಾನ್, ಇದು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ. ಡೊನಾಲ್ಡ್ ಟ್ರಂಪ್ ಅವರ ಕೈಯಲ್ಲಿ ಪ್ಯಾಲೆಸ್ತಿಯನ್ನರು, ಇರಾಕ್ ಮತ್ತು ಅಪ್ಘಾನ್ ಜನರ ರಕ್ತವಿದೆ ಎಂದು ಆರೋಪಿಸಿದ ಅವರು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಟ್ರಂಪ್ ಹೆಸರು ನಾಮನಿರ್ದೇಶನವನ್ನು ವಾಪಸ್ ಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದು, ನಾವು ಇರಾನ್ ಬೆಂಬಲಿಸೋಣ ಎಂದು ಹೇಳಿದ್ದಾರೆ.

ಅಮೆರಿಕದೊಂದಿಗೆ ಸ್ನೇಹವನ್ನು ಬಯಸುತ್ತೇವೆ ಆದರೆ ಗುಲಾಮಗಿರಿಯನ್ನು ಸ್ವೀಕರಿಸಲ್ಲ ಎಂದು ಹೇಳಿರುವುದಾಗಿ ಎಕ್ಸ್ ಪ್ರೆಸ್ ಟ್ರಿಬ್ಯುನ್ ವರದಿ ಮಾಡಿದೆ.

ಇರಾನ್ ನಲ್ಲಿ ಅಮೆರಿಕ ದಾಳಿಯನ್ನು ಖಂಡಿಸಿದ ರೆಹಮಾನ್, ಇದು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ. ಡೊನಾಲ್ಡ್ ಟ್ರಂಪ್ ಅವರ ಕೈಯಲ್ಲಿ ಪ್ಯಾಲೆಸ್ತಿಯನ್ನರು, ಇರಾಕ್ ಮತ್ತು ಅಪ್ಘಾನ್ ಜನರ ರಕ್ತವಿದೆ ಎಂದು ಆರೋಪಿಸಿದ ಅವರು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಟ್ರಂಪ್ ಹೆಸರು ನಾಮನಿರ್ದೇಶನವನ್ನು ವಾಪಸ್ ಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದು, ನಾವು ಇರಾನ್ ಬೆಂಬಲಿಸೋಣ ಎಂದು ಹೇಳಿರುವುದಾಗಿ ಎಕ್ಸ್ ಪ್ರೆಸ್ ಟ್ರಿಬ್ಯುನ್ ವರದಿಯಲ್ಲಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT