ಇಸ್ರೇಲ್- ಇರಾನ್ ಕದನ  online desk
ವಿದೇಶ

'ಕದನ ವಿರಾಮಕ್ಕೆ ಒಪ್ಪಿಲ್ಲ': ಟ್ರಂಪ್ ಹೇಳಿಕೆ ಬೆನ್ನಲ್ಲೇ ಉಲ್ಟಾ ಹೊಡೆದ ಇರಾನ್: ಇಸ್ರೇಲ್ ಮೊದಲು ದಾಳಿ ನಿಲ್ಲಿಸಲಿ ಎಂದು ಪಟ್ಟು!

ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ.

ಟೆಹರಾನ್: ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮ ಒಪ್ಪಂದಕ್ಕೆ ಬಂದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದು, ಇದರ ಬೆನ್ನಲ್ಲೇ ಇರಾನ್ ಇದೀಗ ಉಲ್ಟಾ ಹೊಡೆದಿದೆ. ಟ್ರಂಪ್ ಅವರ ಹೇಳಿಕೆಯನ್ನು ನಿರಾಕರಿಸಿರುವ ಇರಾನ್, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ. ಇಸ್ರೇಲ್ ತನ್ನ ಕಾನೂನುಬಾಹಿರ ಆಕ್ರಮಣವನ್ನು ನಿಲ್ಲಿಸಿದರೆ, ನಾವು ಯುದ್ಧ ಮುಂದುವರಿಸುವ ಉದ್ದೇಶ ಹೊಂದಿಲ್ಲ. ನಮ್ಮ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಪೋಸ್ಟ್ ಮಾಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವ ಸಂಪೂರ್ಣ ಕದನ ವಿರಾಮ ಒಪ್ಪಂದವಾಗಿದೆ ಎಂದು ಘೋಷಿಸಿದ್ದರು.

ಎಲ್ಲರಿಗೂ ಅಭಿನಂದನೆಗಳು. ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚಂದನವನದ ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!

D Bossಗೆ ಬಿಗ್​ ಶಾಕ್​; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ

ಇನ್ಸ್​ಪೆಕ್ಟರ್ ಧನಂಜಯ ಸರಿಯಾಗೇ ಹೇಳಿದ್ದಾರೆ; ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ

ಸಚಿನ್ ತೆಂಡುಲ್ಕರ್‌ರ ದೀರ್ಘಕಾಲೀನ ODI ದಾಖಲೆ ಮುರಿದ ಬ್ರೆಂಡನ್ ಟೇಲರ್; ಆದ್ರೆ ಒಂದು ಟ್ವಿಸ್ಟ್ ಇದೆ!