ಇಸ್ರೇಲ್- ಇರಾನ್ ಕದನ  online desk
ವಿದೇಶ

'ಕದನ ವಿರಾಮಕ್ಕೆ ಒಪ್ಪಿಲ್ಲ': ಟ್ರಂಪ್ ಹೇಳಿಕೆ ಬೆನ್ನಲ್ಲೇ ಉಲ್ಟಾ ಹೊಡೆದ ಇರಾನ್: ಇಸ್ರೇಲ್ ಮೊದಲು ದಾಳಿ ನಿಲ್ಲಿಸಲಿ ಎಂದು ಪಟ್ಟು!

ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ.

ಟೆಹರಾನ್: ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮ ಒಪ್ಪಂದಕ್ಕೆ ಬಂದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದು, ಇದರ ಬೆನ್ನಲ್ಲೇ ಇರಾನ್ ಇದೀಗ ಉಲ್ಟಾ ಹೊಡೆದಿದೆ. ಟ್ರಂಪ್ ಅವರ ಹೇಳಿಕೆಯನ್ನು ನಿರಾಕರಿಸಿರುವ ಇರಾನ್, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ. ಇಸ್ರೇಲ್ ತನ್ನ ಕಾನೂನುಬಾಹಿರ ಆಕ್ರಮಣವನ್ನು ನಿಲ್ಲಿಸಿದರೆ, ನಾವು ಯುದ್ಧ ಮುಂದುವರಿಸುವ ಉದ್ದೇಶ ಹೊಂದಿಲ್ಲ. ನಮ್ಮ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಪೋಸ್ಟ್ ಮಾಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವ ಸಂಪೂರ್ಣ ಕದನ ವಿರಾಮ ಒಪ್ಪಂದವಾಗಿದೆ ಎಂದು ಘೋಷಿಸಿದ್ದರು.

ಎಲ್ಲರಿಗೂ ಅಭಿನಂದನೆಗಳು. ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT