ಡೊನಾಲ್ಡ್ ಟ್ರಂಪ್ 
ವಿದೇಶ

Israel vs Iran ceasefire violation: 'What the f***, ಬಾಂಬ್ ಹಾಕೋದನ್ನು ಕೂಡಲೇ ನಿಲ್ಲಿಸಿ': Donald Trump ಎಚ್ಚರಿಕೆ!

ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ.

ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಇಸ್ರೇಲ್ ಮತ್ತು ಇರಾನ್ ದೇಶಗಳು ಪರಸ್ಪಕ ಕದನದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಲೇ ಬಾಂಬ್ ಹಾಕುವುದನ್ನು ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ಹಲವು ದಿನಗಳಿಂದ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿದ್ದ ಯುದ್ಧಕ್ಕೆ ಇಂದು ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ. ಟೆಹರಾನ್ ಮೇಲೆ ಹೆಚ್ಚಿನ ತೀವ್ರತೆಯ ಕಾರ್ಯಾಚರಣೆಗಳನ್ನು ನಡೆಸಲು ಸೇನೆಗೆ ಈಗ ಸೂಚನೆ ನೀಡಲಾಗಿದೆ.

ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್‌ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.

ಇಸ್ರೇಲ್‌ಗೆ ತಮ್ಮ ಯುದ್ಧ ವಿಮಾನಗಳನ್ನು ಕೂಡಲೇ ವಾಪಸ್ ಕರೆಸಿಕೊಳ್ಳಿ ಎಂದು ಸೂಚಿಸಿದ್ದು, ಕದನ ವಿರಾಮ ಜಾರಿಯಲ್ಲಿದ್ದರೂ ದಾಳಿಗಳ ಬಗ್ಗೆ ಅವರು ನಿರಾಶೆಯಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಅವರು ಅದನ್ನು ಉಲ್ಲಂಘಿಸಿದರು. ಆದರೆ ಇಸ್ರೇಲ್ ಕೂಡ ಅದನ್ನು ಉಲ್ಲಂಘಿಸಿದೆ. ನಾನು ಇಸ್ರೇಲ್ ಬಗ್ಗೆ ಸಂತೋಷವಾಗಿಲ್ಲ" ಎಂದು ಟ್ರಂಪ್ ಆಕ್ರೋಶ ಭರಿತರಾಗಿ ಹೇಳಿದ್ದಾರೆ.

"ನಮ್ಮಲ್ಲಿ ಎರಡು ದೇಶಗಳು ತುಂಬಾ ಕಠಿಣವಾಗಿ ಹೋರಾಡುತ್ತಿವೆ ಮತ್ತು ಅವರು ಏನು ಮಾಡುತ್ತಿದ್ದಾರೆಂದು ಅವರಿಗೆ ತಿಳಿದಿಲ್ಲ ಎಂದು ಟ್ರಂಪ್ ಇಸ್ರೇಲ್ ಮತ್ತು ಇರಾನ್ ಬಗ್ಗೆ ಹೇಳಿದರು ಎಂದು ಸಿಎನ್‌ಎನ್ ವರದಿ ಮಾಡಿದೆ.

ಇರಾನ್ ನಿಂದಲೇ ಕದನ ವಿರಾಮ ಉಲ್ಲಂಘನೆ

ಇನ್ನು ಕದನ ವಿರಾಮವನ್ನು ಕಡ್ಡಾಯಗೊಳಿಸಿದ ನಂತರ ಇರಾನ್ ಬೀರ್ ಶೆವಾಕ್ಕೆ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇಸ್ರೇಲ್ ಆರೋಪಿಸಿದ್ದು ಇದರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದೆ. ಆದಾಗ್ಯೂ, ಇರಾನ್ ಸೇನೆ ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿರುವುದನ್ನು ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್