ಆಕ್ಸಿಯಮ್-4 ಕಾರ್ಯಾಚರಣೆಯ ಸದಸ್ಯರು  
ವಿದೇಶ

ಹವಾಮಾನ ಶೇ.90ರಷ್ಟು ಅನುಕೂಲಕರ: Ax-4 mission ಬಗ್ಗೆ SpaceX ವಿಶ್ವಾಸ

ಉದ್ದೇಶಿತ ಡಾಕಿಂಗ್ ಸಮಯ ನಾಳೆ ಜೂನ್ 26, ಗುರುವಾರ ಭಾರತೀಯ ಕಾಲಮಾನ ಸುಮಾರು ಸಂಜೆ 4.30 ಎಂದು ನಾಸಾ ಹೇಳಿಕೆಯಲ್ಲಿ ತಿಳಿಸಿದೆ.

ನವದೆಹಲಿ: ಹಲವು ಬಾರಿ ಮುಂದೂಡಲ್ಪಟ್ಟ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಇಂದು ಬುಧವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪಯಣಿಸಲಿದ್ದಾರೆ. Ax-4 mission ಕಾರ್ಯಾಚರಣೆಗೆ ಹವಾಮಾನವು ಲಿಫ್ಟ್-ಆಫ್‌ಗೆ ಶೇಕಡಾ 90 ರಷ್ಟು ಅನುಕೂಲಕರವಾಗಿದೆ ಎಂದು ಸ್ಪೇಸ್‌ಎಕ್ಸ್ ಘೋಷಿಸಿದೆ.

ಇಂದು ಬುಧವಾರ Axiom_Space ನ Ax-4 ಮಿಷನ್ ನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಉಡಾವಣೆ ಮಾಡಲು ಎಲ್ಲಾ ವ್ಯವಸ್ಥೆಗಳು ಉತ್ತಮವಾಗಿ ಕಾಣುತ್ತಿವೆ. ಹವಾಮಾನವು ಲಿಫ್ಟ್‌ಆಫ್‌ಗೆ ಶೇಕಡಾ 90ರಷ್ಟು ಅನುಕೂಲಕರವಾಗಿದೆ ಎಂದು ಬಾಹ್ಯಾಕಾಶ ಕಾರ್ಯಾಚರಣೆಗೆ ಸಾರಿಗೆ ಒದಗಿಸುತ್ತಿರುವ ಸ್ಪೇಸ್‌ಎಕ್ಸ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.

ನಾಸಾ, ಆಕ್ಸಿಯಮ್ ಸ್ಪೇಸ್ ಮತ್ತು ಸ್ಪೇಸ್‌ಎಕ್ಸ್ ಜೂನ್ 25, ಬುಧವಾರ, ಮಧ್ಯಾಹ್ನ 12.01 (IST) ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ, ಆಕ್ಸಿಯಮ್ ಮಿಷನ್ 4 ಗೆ ನಾಲ್ಕನೇ ಖಾಸಗಿ ಗಗನಯಾತ್ರಿ ಕಾರ್ಯಾಚರಣೆಯನ್ನು ಉಡಾವಣೆ ಮಾಡುವ ಗುರಿಯನ್ನು ಹೊಂದಿವೆ ಎಂದು ನಾಸಾ ತಿಳಿಸಿದೆ.

ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಲ್ಲಿರುವ ಲಾಂಚ್ ಕಾಂಪ್ಲೆಕ್ಸ್ 39A ನಿಂದ ಈ ಮಿಷನ್ ಉಡಾವಣೆಯಾಗಲಿದೆ. ಕಂಪನಿಯ ಫಾಲ್ಕನ್ 9 ರಾಕೆಟ್‌ನಲ್ಲಿ ಉಡಾವಣೆ ಮಾಡಿದ ನಂತರ ಸಿಬ್ಬಂದಿ ಹೊಸ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಕಕ್ಷೆಯಲ್ಲಿರುವ ಪ್ರಯೋಗಾಲಯಕ್ಕೆ ಪ್ರಯಾಣಿಸಲಿದ್ದಾರೆ.

ಉದ್ದೇಶಿತ ಡಾಕಿಂಗ್ ಸಮಯ ನಾಳೆ ಜೂನ್ 26, ಗುರುವಾರ ಭಾರತೀಯ ಕಾಲಮಾನ ಸುಮಾರು ಸಂಜೆ 4.30 ಎಂದು ನಾಸಾ ಹೇಳಿಕೆಯಲ್ಲಿ ತಿಳಿಸಿದೆ.

ನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್‌ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಲಿದ್ದಾರೆ, ಆದರೆ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಸೇವೆ ಸಲ್ಲಿಸಲಿದ್ದಾರೆ.

ಇಬ್ಬರು ಮಿಷನ್ ತಜ್ಞರು ಪೋಲೆಂಡ್‌ನ ಇಎಸ್ಎ (ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ) ಯೋಜನೆಯ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ HUNOR (ಹಂಗೇರಿಯನ್ ಟು ಆರ್ಬಿಟ್) ಗಗನಯಾತ್ರಿ ಟಿಬೋರ್ ಕಾಪು ಆಗಿದ್ದಾರೆ.

ಆಕ್ಸಿಯಮ್ -4 ಮಿಷನ್ ಅನೇಕ ವಿಳಂಬಗಳನ್ನು ಎದುರಿಸಿದೆ, ಮೊದಲು ಪ್ರತಿಕೂಲ ಹವಾಮಾನದಿಂದಾಗಿ ಮತ್ತು ನಂತರ ಸ್ಪೇಸ್‌ಎಕ್ಸ್‌ನ ಫಾಲ್ಕನ್ -9 ರಾಕೆಟ್‌ನಲ್ಲಿ ಪತ್ತೆಯಾದ ಸೋರಿಕೆಗಳಿಂದಾಗಿ ಮತ್ತು ನಂತರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ರಷ್ಯಾದ ಮಾಡ್ಯೂಲ್‌ನಲ್ಲಿ ಸೋರಿಕೆಯುಂಟಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT