ಮಾರಿಷಸ್‌ಗೆ ಆಗಮಿಸಿದ ಪ್ರಧಾನಿ ಮೋದಿ 
ವಿದೇಶ

ಮಾರಿಷಸ್‌ಗೆ ಪ್ರಧಾನಿ ಮೋದಿ ಆಗಮನ; ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿ ಸ್ವಾಗತ

ಇಂದು ಮಾರಿಷಸ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಸಮುದಾಯದ ಮಹಿಳೆಯರು ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿಯೊಂದಿಗೆ ಸ್ವಾಗತಿಸಲಾಯಿತು.

ಪೋರ್ಟ್ ಲೂಯಿಸ್: ಎರಡು ದಿನಗಳ ಭೇಟಿಗಾಗಿ ಮಾರಿಷಸ್‌ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಮಾರಿಷಸ್‌ನಲ್ಲಿರುವ ಭಾರತೀಯ ವಲಸಿಗರು ಆತ್ಮೀಯ ಸ್ವಾಗತ ನೀಡಿದರು.

ಇಂದು ಮಾರಿಷಸ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಸಮುದಾಯದ ಮಹಿಳೆಯರು ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿಯೊಂದಿಗೆ ಸ್ವಾಗತಿಸಲಾಯಿತು. ಈ ವೇಳೆ ಹಾಡುಗಳನ್ನು ಹಾಡುತ್ತಿರುವವರೊಂದಿಗೆ ಪ್ರಧಾನಿ ಮೋದಿ ಚಪ್ಪಾಳೆ ತಟ್ಟುತ್ತಾ ಆನಂದಿಸಿದರು.

ಗೀತ್ ಗವಾಯಿ ಎಂಬುದು ಭಾರತದ ಭೋಜ್‌ಪುರಿ ಪಟ್ಟಿಯ ಮಹಿಳೆಯರು ಮಾರಿಷಸ್‌ಗೆ ತಂದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಾಕಾರಗೊಳಿಸುವ ಸಾಂಪ್ರದಾಯಿಕ ಭೋಜ್‌ಪುರಿ ಸಂಗೀತ ಮೇಳವಾಗಿದೆ.

"ಮಾರಿಷಸ್‌ನಲ್ಲಿರುವ ಭಾರತೀಯ ಸಮುದಾಯದಿಂದ ಬಂದ ಆತ್ಮೀಯ ಸ್ವಾಗತದಿಂದ ನಾನು ತುಂಬಾ ಭಾವುಕನಾಗಿದ್ದೇನೆ. ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳಿಗೆ ಅವರ ಬಲವಾದ ನಂಟು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ" ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾರಿಷಸ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಸರ್ ಸೀವೂಸಾಗುರ್ ರಾಮ್‌ಗೂಲಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರಿಷಸ್‌ ಪ್ರಧಾನಿ ನವೀನ್‌ಚಂದ್ರ ರಾಮ್‌ಗೂಲಂ ಅವರು ಹಾರ ಹಾಕಿ ಸ್ವಾಗತಿಸಿದರು.

ಇದಕ್ಕು ಮುನ್ನ "ಹಿಂದೂ ಮಹಾಸಾಗರದ ಪ್ರಮುಖ ಪಾಲುದಾರ ಮತ್ತು ಆಫ್ರಿಕನ್ ಖಂಡದ ಹೆಬ್ಬಾಗಿಲು ಮಾರಿಷಸ್​​ನ ತಮ್ಮ ಭೇಟಿಯ ಸಮಯದಲ್ಲಿ ಅಲ್ಲಿನ ಪ್ರಧಾನಿ ಜೊತೆ ಮಾತುಕತೆಗೆ ಎದುರು ನೋಡುತ್ತಿರುವುದಾಗಿ" ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ಮಾರ್ಚ್ 12ರಂದು ನಡೆಯುವ ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾರತೀಯ ರಕ್ಷಣಾ ಪಡೆಗಳ ತುಕಡಿ ಮತ್ತು ಭಾರತೀಯ ನೌಕಾಪಡೆಯ ಒಂದು ಹಡಗು ಭಾಗವಹಿಸಲಿದೆ. ಪ್ರಧಾನಿ ಮೋದಿ ಅವರು ಕೊನೆಯದಾಗಿ 2015ರಲ್ಲಿ ಮಾರಿಷಸ್‌ಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT