ಡೊನಾಲ್ಡ್ ಟ್ರಂಪ್ ಮತ್ತು ವ್ಲಾಡಿಮಿರ್ ಪುಟಿನ್  
ವಿದೇಶ

ಉಕ್ರೇನ್ ನಲ್ಲಿ 30 ದಿನಗಳ ಕದನ ವಿರಾಮಕ್ಕೆ ಅಮೆರಿಕ ಪ್ರಸ್ತಾವನೆ: ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದೇನು?

ರಷ್ಯಾದ ಕುರ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ಪಡೆಗಳು ತಮ್ಮ ಕೊನೆಯ ನೆಲೆಯಲ್ಲಿ ಸುತ್ತುವರೆದಿವೆ. ಕದನ ವಿರಾಮಕ್ಕೆ ಮುಂಚಿತವಾಗಿ ಅವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗುತ್ತಾರೆಯೇ ಎಂದು ನಿರ್ಧರಿಸುವುದು ಅವಶ್ಯಕ ಎಂದರು.

ಮಾಸ್ಕೋ: ಉಕ್ರೇನ್‌ನಲ್ಲಿ 30 ದಿನಗಳ ಕದನ ವಿರಾಮಕ್ಕೆ ಅಮೆರಿಕ ಮುಂದಿಟ್ಟ ಪ್ರಸ್ತಾವನೆಯನ್ನು ತಾತ್ವಿಕವಾಗಿ ಒಪ್ಪುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ, ಆದರೆ ಈ ನಿಟ್ಟಿನಲ್ಲಿ ನಿಯಮಗಳನ್ನು ರೂಪಿಸಬೇಕಾಗಿದ್ದು, ಇದು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಕದನ ವಿರಾಮ ಪರಿಕಲ್ಪನೆ ಸರಿಯಾಗಿದೆ, ನಾವು ಖಂಡಿತವಾಗಿಯೂ ಅದನ್ನು ಬೆಂಬಲಿಸುತ್ತೇವೆ ಎಂದು ವ್ಲಾಡಿಮಿರ್ ಪುಟಿನ್ ಮಾಸ್ಕೋದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು. ಆದರೆ ನಾವು ಚರ್ಚಿಸಬೇಕಾದ ಸಮಸ್ಯೆಗಳು ಸಾಕಷ್ಟಿವೆ. ನಾವು ಅದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸಂಬಂಧಪಟ್ಟ ಪಾಲುದಾರರೊಂದಿಗೆ ಚರ್ಚಿಸಬೇಕಾಗಿದೆ ಎಂದು ನಾನು ಭಾವಿಸುತ್ತೇನೆ ಎಂದರು.

ರಷ್ಯಾದ ಕುರ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ಪಡೆಗಳು ತಮ್ಮ ಕೊನೆಯ ನೆಲೆಯಲ್ಲಿ ಸುತ್ತುವರೆದಿವೆ. ಕದನ ವಿರಾಮಕ್ಕೆ ಮುಂಚಿತವಾಗಿ ಅವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗುತ್ತಾರೆಯೇ ಎಂದು ನಿರ್ಧರಿಸುವುದು ಅವಶ್ಯಕ ಎಂದರು.

ಕುರ್ಸ್ಕ್ ಗಡಿ ಪ್ರೇದೇಶದಿಂದ ಉಕ್ರೇನ್ ಪಡೆಗಳನ್ನು ಹಿಂದಕ್ಕೆ ಕಳುಹಿಸುವಲ್ಲಿ ತಮ್ಮ ಪಡೆಗಳ ಯಶಸ್ಸಿನ ಆಧಾರದ ಮೇಲೆ ಮುಂದಿನ ಹಂತಗಳನ್ನು ನಿರ್ಧರಿಸುವುದಾಗಿ ಪುಟಿನ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಲ್ಲಿ ಕ್ಷಿಪ್ರವಾಗಿ ತಮ್ಮ ಪಡೆ ಮೇಲುಗೈ ಸಾಧಿಸಿರುವುದನ್ನು ಪುಟಿನ್ ಶ್ಲಾಘಿಸಿದರು, ಪರಿಸ್ಥಿತಿ ಆಧಾರದ ಮೇಲೆ, ಸಂಘರ್ಷವನ್ನು ಕೊನೆಗೊಳಿಸುವ ಮತ್ತು ಎಲ್ಲರಿಗೂ ಸ್ವೀಕಾರಾರ್ಹವಾದ ಒಪ್ಪಂದಗಳನ್ನು ತಲುಪುವ ಮುಂದಿನ ಹಂತಗಳ ಬಗ್ಗೆ ನಾವು ಒಪ್ಪುತ್ತೇವೆ ಎಂದರು.

ಕದನ ವಿರಾಮದ ಸಂಭವನೀಯ ಉಲ್ಲಂಘನೆಗಳನ್ನು ನಿಯಂತ್ರಿಸಲು ಕಾರ್ಯವಿಧಾನವನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಅವರು ಹೇಳಿದರು. ಪಡೆಗಳನ್ನು ಸಜ್ಜುಗೊಳಿಸುವಿಕೆ ಮತ್ತು ಮರುಸಜ್ಜುಗೊಳಿಸುವಿಕೆಯನ್ನು ಮುಂದುವರಿಸಲು ಉಕ್ರೇನ್ 30 ದಿನಗಳ ಕದನ ವಿರಾಮವನ್ನು ಬಳಸಬಹುದೇ ಎಂಬುದನ್ನು ರಷ್ಯಾ ಪರಿಶೀಲಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT