ಇಸ್ರೇಲಿ ಸೇನೆಯ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಪ್ಯಾಲೆಸ್ಟೀನಿಯನ್ನರ ಶವಗಳು Photo | AP
ವಿದೇಶ

ಇಸ್ರೇಲ್ ಕದನ ವಿರಾಮ ಉಲ್ಲಂಘನೆ: ಗಾಜಾದಾದ್ಯಂತ ವೈಮಾನಿಕ ದಾಳಿ; ಕನಿಷ್ಠ 413 ಪ್ಯಾಲೆಸ್ತೀನಿಯನ್ನರ ಹತ್ಯೆ

ಈ ಅನಿರೀಕ್ಷಿತ ಬಾಂಬ್ ದಾಳಿಯು ಜನವರಿಯಿಂದ ಜಾರಿಯಲ್ಲಿದ್ದ ಕದನ ವಿರಾಮವನ್ನು ಉಲ್ಲಂಘಿಸಿದೆ.

ದೀರ್ ಅಲ್-ಬಲಾಹ್: ಇಸ್ರೇಲ್ ಮತ್ತೆ ಮಂಗಳವಾರ ಬೆಳಗ್ಗೆ ಗಾಜಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 404 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅನಿರೀಕ್ಷಿತ ಬಾಂಬ್ ದಾಳಿಯು ಜನವರಿಯಿಂದ ಜಾರಿಯಲ್ಲಿದ್ದ ಕದನ ವಿರಾಮವನ್ನು ಉಲ್ಲಂಘಿಸಿದೆ. ಕದನ ವಿರಾಮ ಉಲ್ಲಂಘಿಸಿ ಮತ್ತೆ ಯುದ್ಧ ಆರಂಭಿಸಿರುವ ಇಸ್ರೇಲ್ ಗೆ ತಕ್ಕ ಉತ್ತರ ನೀಡುತ್ತೇವೆ. ಈ ದಾಳಿ ಒತ್ತೆಯಾಳುಗಳ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಹಮಾಸ್ ಎಚ್ಚರಿಸಿದೆ.

ಹಮಾಸ್​ ಆರೋಗ್ಯ ಸಚಿವಾಲಯದ ಪ್ರಕಾರ, ಈ ದಾಳಿಗಳಲ್ಲಿ ಮಕ್ಕಳು ಸೇರಿದಂತೆ ಅನೇಕರು ಮೃತಪಟ್ಟಿದ್ದಾರೆ ಮತ್ತು ಗಾಜಾ ಪಟ್ಟಿಯ ಆಸ್ಪತ್ರೆಗಳಲ್ಲಿ ಈವರೆಗೆ 326 ಮೃತದೇಹಗಳು ದಾಖಲಾಗಿವೆ. ಆದರೆ, ಇನ್ನೂ ಹಲವಾರು ಶವಗಳು ಧ್ವಂಸಗೊಂಡ ಸ್ಥಳದಡಿಯಲ್ಲಿ ಸಿಕ್ಕಿಬಿದ್ದಿರುವ ಸಾಧ್ಯತೆ ಇದೆ ಎಂದು ಸಚಿವಾಲಯ ಹೇಳಿದೆ.

ಕದನ ವಿರಾಮ ವಿಸ್ತರಿಸುವ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ದಾಳಿಗೆ ಆದೇಶ ನೀಡಿರುವುದಾಗಿ ಇಸೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿದ್ದಾರೆ.

ಇಸ್ರೇಲ್, ಇಂದಿನಿಂದ, ಹೆಚ್ಚುತ್ತಿರುವ ಮಿಲಿಟರಿ ಬಲದೊಂದಿಗೆ ಹಮಾಸ್ ವಿರುದ್ದ ಕಾರ್ಯನಿರ್ವಹಿಸುತ್ತದೆ ಎಂದು ನೆತನ್ಯಾಹು ಅವರ ಕಚೇರಿ ಹೇಳಿದೆ.

ಈ ಮಧ್ಯೆ, ಕಾರ್ಯಾಚರಣೆಯು ಮುಕ್ತವಾಗಿದೆ ಮತ್ತು ಅದನ್ನು ವಿಸ್ತರಿಸುವ ನಿರೀಕ್ಷೆಯಿದೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ.

ಈಜಿಪ್ಟ್ ಮತ್ತು ಕತಾರ್ ಜೊತೆಗೆ ಮಧ್ಯಸ್ಥಿಕೆ ಪ್ರಯತ್ನಗಳನ್ನು ಮುನ್ನಡೆಸುತ್ತಿರುವ ಅಮೆರಿಕ ರಾಯಭಾರಿ ಸ್ಟೀವ್ ವಿಟ್ಕಾಫ್, ಒತ್ತೆಯಾಳುಗಳನ್ನು ಹಮಾಸ್ ತಕ್ಷಣವೇ ಬಿಡುಗಡೆ ಮಾಡಬೇಕು ಅಥವಾ ತೀವ್ರ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT